ನಿಮಗೆ ಬಹುಮತ ನೀಡಿರುವುದು ಬೇಜವಾಬ್ದಾರಿಯಿಂದ ವರ್ತಿಸಲು ಅಲ್ಲ: ಶಿವಸೇನಾ ವಾಗ್ದಾಳಿ
ಮುಂಬೈ, ಫೆಬ್ರವರಿ 26: ಅಹಮದಾಬಾದ್ನ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಶಿವಸೇನಾ ವಾಗ್ದಾಳಿ ನಡೆಸಿದೆ. ಕಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ದೊರಕಿರುವ ಭಾರಿ ಬಹುಮತವು ಬೇಜವಾಬ್ದಾರಿಯಿಂದ ವರ್ತಿಸಲು ನೀಡಿರುವ ಪರವಾನಗಿ ಅಲ್ಲ ಎಂದು ಎಚ್ಚರಿಕೆ ನೀಡಿದೆ.
ಇತಿಹಾಸದಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಹೆಸರನ್ನು ಅಳಿಸಿಹಾಕಲು ಕಾಂಗ್ರೆಸ್ ಮತ್ತು ಗಾಂಧಿ-ನೆಹರೂ ಕುಟುಂಬ ಪ್ರಯತ್ನಿಸುತ್ತಿದೆ ಎಂದು ಕಳೆದ ಐದು ವರ್ಷಗಳಿಂದ ಆರೋಪಗಳನ್ನು ಮಾಡುತ್ತಾ ಬರುತ್ತಿದ್ದರು. ಆದರೆ ಈಗ ಸ್ಟೇಡಿಯಂ ಹೆಸರು ಬದಲಿಸಿರುವುದು ಅದಕ್ಕೆ ಯಾರು ನಿಜಕ್ಕೂ ಪ್ರಯತ್ನಿಸುತ್ತಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಿದೆ ಎಂದು ಶಿವಸೇನಾ ತನ್ನ ಮುಖವಾಗಿ 'ಸಾಮ್ನಾ' ಪತ್ರಿಕೆಯಲ್ಲಿ ಟೀಕಿಸಿದೆ.
'ಎಲ್ಲ ದೊಡ್ಡ ನಿರ್ಮಾಣಗಳು ಗುಜರಾತ್ನಲ್ಲಿಯೇ ನಡೆಯಬೇಕು ಎಂದು ಮೋದಿ-ಶಾ ಸರ್ಕಾರವು ಬಯಸಿರುವಂತಿದೆ. ಅದರಲ್ಲಿ ಯಾವ ತಪ್ಪೂ ಇಲ್ಲ. ಆದರೆ ಅವರು ದೇಶವನ್ನು ಮುನ್ನಡೆಸುತ್ತಿದ್ದೇವೆ ಎಂಬುದನ್ನು ಮರೆತಂತಿದೆ. ಅಹಮದಾಬಾದ್ನ ಮೊಟೆರಾ ಕ್ರೀಡಾಂಗಣದ ಹೆಸರನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಬದಲಿಸಲಾಗಿದೆ. ಇಲ್ಲಿಯವರೆಗೂ ಮೆಲ್ಬೋರ್ನ್ ಸ್ಟೇಡಿಯಂ ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಮೈದಾನವಾಗಿತ್ತು. ಈಗ ಅತಿ ದೊಡ್ಡ ಮೈದಾನಕ್ಕೆ ಮೋದಿ ಹೆಸರು ಇರಿಸಲಾಗಿದೆ' ಎಂದು ಸೇನಾ ಅಸಮಾಧಾನ ವ್ಯಕ್ತಪಡಿಸಿದೆ.

'ಆದರೆ ಈ ನಡೆ ಏಕೆ ಟೀಕೆಗೆ ಒಳಗಾಗಿದೆ? ಏಕೆಂದರೆ ಈ ಮೊದಲು ಮೊಟೆರಾ ಕ್ರೀಡಾಂಗಣಕ್ಕೆ ಸರ್ದಾರ್ ಪಟೇಲ್ ಅವರ ಹೆಸರು ಇಡಲಾಗಿತ್ತು. ಅದಕ್ಕೀಗ ಮೋದಿ ಹೆಸರಿಡಲಾಗಿದೆ. ಸರ್ದಾರ್ ಪಟೇಲ್ ಹೆಸರನ್ನು ಅಳಿಸಿಹಾಕಲು ಗಾಂಧಿ-ನೆಹರೂ ಕುಟುಂಬ ಅಥವಾ ಕಾಂಗ್ರೆಸ್ ಪ್ರಯತ್ನ ಮಾಡಿತ್ತು ಎಂದು ಕಳೆದ ಐದು ವರ್ಷಗಳಲ್ಲಿ ಸರ್ಕಾರ ಆರೋಪಿಸಿತ್ತು. ಆದರೆ ಸರ್ದಾರ್ ಪಟೇಲ್ ಸ್ಟೇಡಿಯಂ ಹೆಸರನ್ನು ಬದಲಿಸಿರುವುದು ಯಾರು ಅವರ ಹೆಸರನ್ನು ಅಳಿಸಿಹಾಕಲು ಪ್ರಯತ್ನಿಸುತ್ತಿದ್ದಾರೆ ಎನ್ನುವುದನ್ನು ತೋರಿಸುತ್ತಿದೆ' ಎಂದು ಟೀಕಿಸಿದೆ.
'ನರೇಂದ್ರ ಮೋದಿ ಅವರು ಮಹಾನ್ ನಾಯಕ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ ಅವರ ಅಂಧಾಭಿಮಾನಿಗಳು ಅವರು ಮಹಾತ್ಮ ಗಾಂಧಿ, ನೆಹರೂ, ಸರ್ದಾರ್ ಪಟೇಲ್ ಅಥವಾ ಇಂದಿರಾ ಗಾಂಧಿ ಅವರಿಗಿಂತಲೂ ಮಹಾನ್ ವ್ಯಕ್ತಿ ಎಂದು ಭಾವಿಸಿದ್ದಾರೆ. ಇದನ್ನು ಅಂಧ ನಂಬಿಕೆಯ ಮತ್ತೊಂದು ಹಂತ ಎಂದು ಪರಿಗಣಿಸಬೇಕು' ಎಂದು ಸಾಮ್ನಾ ಹೇಳಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications