ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶಕ್ಕೆ ಬೇಕಿರುವುದು ಅಭಿವೃದ್ಧಿ, ಜಾತಿಸಂಘರ್ಷವಲ್ಲ: ಫಡ್ನವಿಸ್

|
Google Oneindia Kannada News

ಮುಂಬೈ, ಜನವರಿ 04: "ದೇಶಕ್ಕೆ ಸದ್ಯಕ್ಕೆ ಬೇಕಿರುವುದು ಅಭಿವೃದ್ಧಿಯೇ ಹೊರತು ಜಾತಿ ಸಂಘರ್ಷವಲ್ಲ" ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ವಿಡಿಯೋಗಳಲ್ಲಿ ನೋಡಿ ಮಹಾರಾಷ್ಟ್ರ ಬಂದ್ ಅಬ್ಬರ!ವಿಡಿಯೋಗಳಲ್ಲಿ ನೋಡಿ ಮಹಾರಾಷ್ಟ್ರ ಬಂದ್ ಅಬ್ಬರ!

ಮಹಾರಾಷ್ಟ್ರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಭೀಮಾ ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಲವರು ಮಹಾರಾಷ್ಟ್ರವನ್ನು ಜಾತಿಯ ಹೆಸರಿನಲ್ಲಿ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಅನಗತ್ಯವಾಗಿ ಗಲಭೆಯನ್ನು ಸೃಷ್ಟಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

People today need development, not caste conflicts: Maha CM Fadnavis

"ಮಹಾರಾಷ್ಟ್ರದ ಜನರು ಇಂಥ ಗಲಭೆಗಳಿಗೆ ಹೆಚ್ಚಿನ ಬೆಲೆ ನೀಡುವುದಿಲ್ಲ. ನಾವು ಎಂದಿಗೂ ಮಹಾರಾಷ್ಟ್ರವನ್ನು ಜಾತೀಯತೆಯಿಂದ ದೂರವಿರುವಂತೆ ನೋಡಿಕೊಳ್ಳುತ್ತಿದ್ದೇವೆ. ಆದರೆ ಇದೇ ಜಾತೀಯತೆಯಿಂದಾಗಿ ಮಹಾರಾಷ್ಟ್ರದ ಜನರಿಗೆ ನೋವಾಗುವುದು, ಗಾಯವಾಗುವುದು, ಸಾವಾಗುವುದನ್ನು ನಾವು ಎಂದಿಗೂ ಸಹಿಸುವುದಿಲ್ಲ" ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.

ಭೀಮಾ-ಕೊರೆಗಾಂವ್ ವಿಜಯೋತ್ಸವ ಆಚರಣೆಯ ಸಂದರಭದಲ್ಲಿ ದಲಿತರು ಮತ್ತು ಮರಾಠರ ನಡುವೆ ಆರಂಭವಾದ ಗಲಭೆ, ಹಿಂಸಾಚಾರಕ್ಕೆ ತಿರುಗಿದ್ದು, ನಿನ್ನೆ ಮಹಾರಾಷ್ಟ್ರ ರಾಜ್ಯದಾದ್ಯಂತ ದಲಿತ ಸಂಘಟನೆಗಳು ಬಂದ್ ಆಚರಿಸಿದ್ದವು.

English summary
In the wake of Bhima-Koregaon violenceand the ensuing political slugfest over it, Maharashtra Chief Minister Devendra Fadnavissaid on Jan 3rd, that the present need of the country was development, not caste conflicts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X