ಮುಂಬೈನಲ್ಲಿ ರಾಜ್ ಠಾಕ್ರೆ ಪತ್ನಿಯನ್ನು ಕಚ್ಚಿದ 'ಬಾಂಡ್'
ಮುಂಬೈ, ಆಗಸ್ಟ್ 19: ಮುದ್ದಿನಿಂದ ಸಾಕಿದ ನಾಯಿಗೆ 'ಬಾಂಡ್' ಎಂದು ಇಂಗ್ಲೀಷ್ ಹೆಸರಿಟ್ಟ ರಾಜ್ ಠಾಕ್ರೆ ಅವರು ಈಗ ಪತ್ನಿ ಪಕ್ಕದಲ್ಲಿ ಕುಳಿತು ಆರೈಕೆ ಮಾಡುತ್ತಿದ್ದಾರೆ. ನೆಚ್ಚಿನ ನಾಯಿ ತನ್ನ ಒಡತಿಯ ಮುಖವನ್ನು ಸ್ಕ್ರಾಪ್ ಮಾಡಿಬಿಟ್ಟಿದೆ. ರಾಜ್ ಠಾಕ್ರೆ ಪತ್ನಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಮಹಾರಾಷ್ಟ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಅವರ ಪತ್ನಿ ಶರ್ಮಿಳಾ ಅವರು ಸಾಕಿರುವ ನಾಯಿಯೇ ಅವರನ್ನು ಕಚ್ಚಿದ ಘಟನೆ ಮಂಗಳವಾರ ನಡೆದಿದೆ. ರಾಜ್ ಠಾಕ್ರೆ ದಂಪತಿಗಳಿಗೆ ನಾಯಿಗಳೆಂದರೆ ಇಷ್ಟ. ಒಂದು ನಾಯಿಗೆ ಮುದ್ದಿನಿಂದ 'ಬಾಂಡ್' ಎಂದು ಹೆಸರಿಟ್ಟಿದ್ದರು. ಗಂಭೀರ ಸ್ವಭಾವದ ಈ ನಾಯಿಗೆ ಈ ರೀತಿ ಕರೆಯುತ್ತಿದ್ದಾರಂತೆ.
ಮಂಗಳವಾರ ತಮ್ಮ ಮನೆಯಲ್ಲಿ ಯಾವುದೋ ಸುದ್ದಿಗೋಷ್ಠಿಗೆ ರಾಜ್ ಠಾಕ್ರೆ ತಯಾರಾಗುವ ವೇಳೆಗೆ ಮನೆಯೊಳಗಿಂದ ಚೀತ್ಕಾರ ಕೇಳಿ ಬಂದಿದೆ. ಒಳಗೆ ಬಂದು ನೋಡಿದರೆ ಶರ್ಮಿಳಾ ಅವರ ಮುಖ ಮೂತಿಯನ್ನು 'ಬಾಂಡ್' ಕಚ್ಚಿ ಹಾಕಿದ್ದು ಕಂಡು ಬಂದಿದೆ. ತಕ್ಷಣವೇ ಶರ್ಮಿಳಾ ಅವರನ್ನು ಹಿಂದೂಜಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸುದ್ದಿಗೋಷ್ಠಿಯನ್ನು ಚುಟುಕಾಗಿ ಮುಗಿಸಿದ ರಾಜ್ ಠಾಕ್ರೆ ನಂತರ ಆಸ್ಪತ್ರೆಗೆ ತೆರಳಿದ್ದಾರೆ. ಶರ್ಮಿಳಾ ಅವರ ಮುಖಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಮುಖದ ಮೂಳೆಗಳಿಗೆ ಹಾನಿಯಾಗುವಷ್ಟು ಆಳಕ್ಕೆ ನಾಯಿಯ ಹಲ್ಲಿನ ಗುರುತು ಕಂಡು ಬಂದಿತ್ತು ಎಂದು ವೈದ್ಯರು ಹೇಳಿದ್ದಾರೆ.

ಶರ್ಮಿಳಾಗೆ ಶಸ್ತ್ರ ಚಿಕಿತ್ಸೆ ಯಶಸ್ವಿ
ಬುಧವಾರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಈಗ ಶರ್ಮಿಳಾ ಅವರು ಚೇತರಿಸಿಕೊಳ್ಳುತ್ತಿದ್ದಾರೆ.ಮುಖ ಹಾಗೂ ಗಲ್ಲ ಎರಡು ಸೇರಿ 65ಕ್ಕೂ ಹೆಚ್ಚು ಹೊಲಿಗೆ ಹಾಕಲಾಗಿದೆ. ಪ್ಲಾಸ್ಟಿಕ್ ಸರ್ಜರಿ ಯಶಸ್ವಿಯಾಗಿದೆ ಎಂದು ಹಿಂದೂಜಾ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

ರಾಜ್ ಠಾಕ್ರೆ ಅವರ ಮನೆಯಲ್ಲಿ ಜೇಮ್ಸ್ ಹಾಗೂ ಬಾಂಡ್
ಅಂದ ಹಾಗೆ, ರಾಜ್ ಠಾಕ್ರೆ ಅವರ ಮನೆಯಲ್ಲಿ ಜೇಮ್ಸ್ ಹಾಗೂ ಬಾಂಡ್ ಎಂಬ ಹೆಸರಿನ ಎರಡು ನಾಯಿಗಳಿವೆ. ಜೊತೆಗೆ ಇನ್ನೂ ವಿವಿಧ ತಳಿ ನಾಯಿಗಳನ್ನು ಸಾಕಿದ್ದಾರೆ.
|
ಶರ್ಮಿಳಾ ಅವರ ಚೇತರಿಕೆಗೆ ಹಾರೈಕೆ
ಶರ್ಮಿಳಾ ಅವರ ಚೇತರಿಕೆಗೆ ಶುಭ ಹಾರೈಕೆ ಟ್ವೀಟ್ ಮಾಡಿದ ಸಾರ್ವಜನಿಕರು.
|
ಶರ್ಮಿಳಾಗೆ ನಾಯಿ ಕಚ್ಚಿದ ಸುದ್ದಿ ಟ್ವೀಟ್ಸ್
ಶರ್ಮಿಳಾಗೆ ನಾಯಿ ಕಚ್ಚಿದ ಸುದ್ದಿ ಟ್ವೀಟ್ಸ್ ಗಳು ಸಾಮಾಜಿಕ ಜಾಲ ತಾಣಗಳಲ್ಲಿ ವಿವಿಧ ಕೋನಗಳಿಂದ ಚರ್ಚೆಗೊಳಗಾಗಿದೆ.
|
ಹೌದು ಆ ನಾಯಿ ಬಿಹಾರ ಮೂಲದ್ದಿರಬೇಕು?
ಹೌದು ಆ ನಾಯಿ ಬಿಹಾರ ಮೂಲದ್ದಿರಬೇಕು? ಎಂದು ಹಾಸ್ಯ ಮಾಡಿದ ಕೆಲವರು.
|
ಮುಂಬೈನಲ್ಲಿ ರಾಜ್ ಠಾಕ್ರೆ ಪತ್ನಿಗೆ ನಾಯಿಕಡಿತ
ಮುಂಬೈನಲ್ಲಿ ರಾಜ್ ಠಾಕ್ರೆ ಪತ್ನಿಗೆ ನಾಯಿಕಡಿತ ಶರ್ಮಿಳಾಗೆ ಆಸ್ಪತ್ರೆಗೆ. ಅದೇ ರಾಜ್ ಠಾಕ್ರೆಗೆ ಕಚ್ಚಿದ್ದರೆ ನಾಯಿ ಆಸ್ಪತ್ರೆಗೆ ಹೋಗುತ್ತಿತ್ತು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications