ಸಲ್ಲೂ ಹಿಟ್ ಅಂಡ್ ರನ್ ಕೇಸ್: ಸಾಕ್ಷಿ ರವೀಂದ್ರ ಸತ್ತಿದ್ದು ಹೇಗೆ?
ಮುಂಬೈ,ಜೂ.26: ಬಾಲಿವುಡ್ಡಿನ ಜನಪ್ರಿಯ ನಟ ಸಲ್ಮಾನ್ ಖಾನ್ ಆರೋಪಿಯಾಗಿರುವ ಹಿಟ್ ಅಂಡ್ ರನ್ ಪ್ರಕರಣ ಕುರಿತಂತೆ ಮತ್ತೊಂದು ಪೂರಕ ಕೇಸ್ ಉ ತಗುಲಿ ಹಾಕಿಕೊಂಡಿದೆ.ಪ್ರತ್ಯಕ್ಷದರ್ಶಿ ಸಾಕ್ಷಿ ರವೀಂದ್ರ ಪಾಟೀಲ್ ಸಾವಿನ ನಿಗೂಢತೆ ಬಯಲು ಮಾಡೂವಂತೆ ಬಾಂಬೆ ಹೈಕೋರ್ಟಿನಲ್ಲಿ ಅರ್ಜಿ ಹಾಕಲಾಗಿದೆ.
ಘಟನೆಯ ಪ್ರಮುಖ ಸಾಕ್ಷಿಯಾಗಿದ್ದ ರವೀಂದ್ರ ಪಾಟೀಲ್ ಅವರ ನಿಗೂಢ ಸಾವಿಗೆ ನಿಜವಾದ ಕಾರಣವೇನು ಎಂದು ಪ್ರಶ್ನಿಸಿ ಪುಣೆಯ ಸಾಮಾಜಿಕ ಕಾರ್ಯಕರ್ತ ಹೇಮಂತ ಪಾಟೀಲ್ ಗುರುವಾರ ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿ ಹಾಕಿದ್ದಾರೆ.[ಸಲ್ಮಾನ್ ಗೆ ಮಧ್ಯಾಹ್ನ ಜೈಲ್, ಸಂಜೆ ಬೇಲ್ ಏಕೆ?]
ಈ ಬಗ್ಗೆ ಮಹಾರಾಷ್ಟ್ರ ಸರ್ಕಾರ ಮತ್ತು ಪೊಲೀಸರಿಂದ ತನಿಖೆಯನ್ನು ಕೋರಿ ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಹೇಮಂತ್ ಪಾಟೀಲ್ ಪರ ವಕೀಲ ಆರ್ ಎನ್ ಕಚಾವೇ ಅವರು ಅರ್ಜಿ ಸಲ್ಲಿಸಿದ್ದಾರೆ. [ ಕೇಸ್ ಫೈಲ್ 2012ರಲ್ಲೇ ಬೆಂಕಿಗೆ ಆಹುತಿ!]

2002ರಲ್ಲಿ ನಡೆದಿದ್ದ ಈ ಪ್ರಕರಣದಲ್ಲಿ ಸಲ್ಮಾನ್ ದೋಷಿಯೆಂದು ವಿಚಾರಣಾ ನ್ಯಾಯಾಲಯ ಕಳೆದ ತಿಂಗಳು ಘೋಷಿಸಿತ್ತು. [ಹಿಟ್ ಅಂಡ್ ರನ್ ಕೇಸ್: ಟೈಮ್ ಲೈನ್]
ವಿಚಾರಣೆಯ ವೇಳೆ ಪ್ರಕರಣದಲ್ಲಿಯ ಸತ್ಯಾಂಶವನ್ನು ಬಹಿರಂಗಗೊಳಿಸದಂತೆ ಅಪಘಾತದ ಪ್ರತ್ಯಕ್ಷದರ್ಶಿ ಸಾಕ್ಷಿ ಹಾಗೂ ತನ್ನ ಪೊಲೀಸ್ ಅಂಗರಕ್ಷಕ ರವೀಂದ್ರ ಪಾಟೀಲ್ ಮೇಲೆ ಒತ್ತಡ ಹೇರಲಾಗಿದೆ. ಹೀಗಾಗಿ ಸಲ್ಮಾನ್ ಖಾನ್ ವಿರುದ್ಧ ಕಾನೂನು ಕ್ರಮವನ್ನು ಜರುಗಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ. [ಸಲ್ಮಾನಿಗೊಂದು ನ್ಯಾಯ, ಗೀತಾಗೊಂದು ನ್ಯಾಯ ಏಕೆ?]
ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಗೈರುಹಾಜರಾಗಿದ್ದ ಪಾಟೀಲ್ನನ್ನು ಬಂಧಿಸಲಾಗಿತ್ತು. ಜೈಲಿನಿಂದ ಬಿಡುಗಡೆಗೊಂಡ ಬಳಿಕ ನಾಪತ್ತೆಯಾಗಿದ್ದ. ನಂತರ ಶಿವ್ಡಿಯ ಆಸ್ಪತ್ರೆಯೊಂದರಲ್ಲಿ ಪತ್ತೆಯಾಗಿದ್ದರೂ ಆ ವೇಳೆಗೆ ಕ್ಷಯರೋಗದಿಂದ ನರಳುತ್ತಿದ್ದ ಮತ್ತು 2007,ಅ.4ರಂದು ನಿಧನನಾಗಿದ್ದ. ಸಾಯುವ ವೇಳೆಗೆ ಆತ ಕೆಲಸವನ್ನು ಕಳೆದುಕೊಂಡಿದ್ದ. [ಜೈಲಿಗೆ ಕಳಿಸಿದ ಹೀರೋ ಈ ಬಾಡಿಗಾರ್ಡ್]
ಈ ಪ್ರಕರಣದಲ್ಲಿ ಸಾಕ್ಷಿಗಳು ಸಿಗದ ಕಾರಣ ಸೆಷನ್ಸ್ ಕೋರ್ಟಿನಲ್ಲಿ ಸಲ್ಮಾನ್ ಖಾನ್ ಅವರಿಗೆ ಶಿಕ್ಷೆ ಪ್ರಕಟವಾದರೂ ಹೈಕೋರ್ಟಿನಿಂದ ಮಧ್ಯಂತರ ಜಾಮೀನು ಪಡೆಯುವಲ್ಲಿ ಸಫಲರಾಗಿದ್ದರು. ಸೆ.28, 2002ರಲ್ಲಿ ಸಲ್ಮಾನ್ ಖಾನ್ ಇದ್ದ ವಾಹನ ಓರ್ವ ವ್ಯಕ್ತಿಯ ಸಾವಿಗೆ ಕಾರಣವಾಗಿತ್ತು. (ಪಿಟಿಐ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications