ರಾಜ್ ಠಾಕ್ರೆ ಪುತ್ರ ಅಮಿತ್ ಮದುವೆ ಮನೆಯಲ್ಲಿ ತಾರೆಗಳ ತೋಟ
ಮುಂಬೈ, ಜನವರಿ 28: ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಮರಾಠಿ ನಾಯಕ ರಾಜ್ ಠಾಕ್ರೆ ಅವರ ಪುತ್ರ ಅಮಿತ್ ಠಾಕ್ರೆ ಅವರ ಮದುವೆ ಆರತಕ್ಷತೆ ಸಮಾರಂಭವು ಬಾಲಿವುಡ್ ತಾರೆಗಳ ತೋಟವಾಗಿ ಮಾರ್ಪಟ್ಟಿತ್ತು. ಬಾಲ್ಯದ ಗೆಳತಿ ಮಿಥಾಲಿ ಬೊರುಡೆ ಅವರನ್ನು ಮಹಾರಾಷ್ಟ್ರ ಸಂಪ್ರದಾಯದಂತೆ ಅಮಿತ್ ಠಾಕ್ರೆ ವರಿಸಿದರು.
ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಅವರು ಭಾನುವಾರದಂದು ಮುಂಬೈನ ಪಾರೇಲ್ ಪ್ರದೇಶದಲ್ಲಿನ ಫೈವ್ ಸ್ಟಾರ್ ಹೋಟೆಲ್ ವೊಂದರಲ್ಲಿ ವಿವಾಹ ಆರತಕ್ಷತೆ ಕಾರ್ಯಕ್ರಮ ಆಯೋಜಿಸಿದ್ದರು. ಬಾಲಿವುಡ್ ಸ್ಟಾರ್ ನಟ, ನಟಿಯರು, ರಾಜಕೀಯ ಮುಖಂಡರು ಪಾಲ್ಗೊಂಡು ನವ ಜೋಡಿಗೆ ಶುಭಹಾರೈಸಿದರು.
ರಾಜ್ ಠಾಕ್ರೆ ಹಾಗೂ ಅವರ ಪತ್ನಿ ಶರ್ಮಿಳಾ, ರಾಜ್ ಅವರ ಕಸಿನ್ ಶಿವ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಅವರ ಪತ್ನಿ ರಶ್ಮಿ, ಅವರ ಪುತ್ರ ಆದಿತ್ಯ ಹಾಗೂ ಮತ್ತೊಬ್ಬ ಕಸಿನ್ ಜೈ ದೇವ್ ಠಾಕ್ರೆ ಅವರು ಅತಿಥಿಗಳನ್ನು ಸ್ವಾಗತಿಸಿದರು.

ರಾಜ್ ಠಾಕ್ರೆ ಕುಟುಂಬದ ಸ್ನೇಹಿತರು
ಹೆಸರಾಂತ ವೈದ್ಯ ಡಾ. ಸಂಜಯ್ ಬೊರುಡೆ ಅವರ ಪುತ್ರಿ ಮಿಥಾಲಿ ಹಾಗೂ ರಾಜ್ ಠಾಕ್ರೆ ಅವರ ಪುತ್ರಿ ಊರ್ವಶಿ ಅವರು ಇತ್ತೀಚಿಗೆ ಜಂಟಿಯಾಗಿ ಫ್ಯಾಷನ್ ಬ್ರ್ಯಾಂಡ್ 'ದಿ ರಾಕ್' ಹೊರ ತಂದಿದ್ದರು. ಅಮಿತ್ ಅವರು ಕಾರ್ಟೂನಿಸ್ಟ್ ಆಗಿದ್ದಾರೆ. ಅಮಿತ್ ಹಾಗೂ ಮಿಥಾಲಿ ಅವರ ಬಾಲ್ಯದ ಗೆಳೆತನ, ಪ್ರೇಮವನ್ನು ವಿವಾಹ ಬಂಧನಕ್ಕೊಳಪಡಿಸಲು ಎರಡು ಕಡೆ ಕುಟುಂಬಗಳು ನಿಶ್ಚಯಿಸಿ, ಡಿಸೆಂಬರ್ 11, 2017ರ ಸರಳ ಸಮಾರಂಭದಲ್ಲಿ ವಿವಾಹ ನಿಶ್ಚಿತಾರ್ಥ ನೆರವೇರಿಸಲಾಗಿತ್ತು.

ಬಾಲಿವುಡ್ ತಾರೆಗಳ ದಂಡು
ಬಾಲಿವುಡ್ ನ ತಾರೆಗಳಾದ ಅಮಿತಾಭ್ ಬಚ್ಚನ್, ಜಿತೇಂದ್ರ, ಶಾರುಖ್ ಖಾನ್, ಸಲ್ಮಾನ್ ಖಾನ್, ಅಮೀರ್ ಖಾನ್, ಊರ್ಮಿಳಾ ಮಾತೋಂಡ್ಕರ್ ಸೇರಿದಂತೆ ಹಲವು ನಟ-ನಟಿಯರು ನವಜೋಡಿಗೆ ಶುಭ ಹಾರೈಸಿದರು.

ರಾಜಕಾರಣಿಗಳ ದಂಡೇ ನೆರೆದಿತ್ತು
ಬೆಳಿಗ್ಗೆ ನಡೆದ ವಿವಾಹ ಕಾರ್ಯಕ್ರಮದಲ್ಲಿ ರಾಜ್ಯಪಾಲ ಸಿವಿ ರಾವ್, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಪಂಕಜಾ ಮುಂಡೆ ಮತ್ತಿತರರು ಪಾಲ್ಗೊಂಡಿದ್ದರು. ಪ್ರಮುಖವಾಗಿ ಕೇಂದ್ರದ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ, ಅವರ ಪುತ್ರಿ ಪ್ರಣಿತಿ ಶಿಂಧೆ, ಮಾಜಿ ಉಪ ಮುಖ್ಯಮಂತ್ರಿ ಜಗನ್ ಭುಜಬಲ್ ಮತ್ತಿತರರು ಪಾಲ್ಗೊಂಡಿದ್ದರು.ಕಾಂಗ್ರೆಸ್ ನಾಯಕರಾದ ಅಹ್ಮದ್ ಪಟೇಲ್, ಶರದ್ ಪವಾರ್, ಸುಪ್ರಿಯಾ ಸುಳೆ, ಅಜಿತ್ ಪವಾರ್ ಕೂಡ ಉಪಸ್ಥಿತರಿದ್ದರು.

ಸೆಲೆಬ್ರಿಟಿಗಳಿಂದ ಶುಭಹಾರೈಕೆ
ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಹಾಗೂ ಅವರ ಪತ್ನಿ ಅಂಜಲಿ, ಹಿರಿಯ ಗಾಯಕಿ ಆಶಾ ಬೋಸ್ಲೆ, ನಟ ರಿತೇಶ್ ದೇಶ್ ಮುಖ್ ಮತ್ತು ಅವರ ಸಹೋದರ ಅಮಿತ್ ದೇಶ್ ಮುಖ್, ಉದ್ಯಮಿ ರತನ್ ಟಾಟಾ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications