ರಾಜ್ ಠಾಕ್ರೆ ಪುತ್ರ ಅಮಿತ್ ಮದುವೆ ಮನೆಯಲ್ಲಿ ತಾರೆಗಳ ತೋಟ
ಮುಂಬೈ, ಜನವರಿ 28: ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಮರಾಠಿ ನಾಯಕ ರಾಜ್ ಠಾಕ್ರೆ ಅವರ ಪುತ್ರ ಅಮಿತ್ ಠಾಕ್ರೆ ಅವರ ಮದುವೆ ಆರತಕ್ಷತೆ ಸಮಾರಂಭವು ಬಾಲಿವುಡ್ ತಾರೆಗಳ ತೋಟವಾಗಿ ಮಾರ್ಪಟ್ಟಿತ್ತು. ಬಾಲ್ಯದ ಗೆಳತಿ ಮಿಥಾಲಿ ಬೊರುಡೆ ಅವರನ್ನು ಮಹಾರಾಷ್ಟ್ರ ಸಂಪ್ರದಾಯದಂತೆ ಅಮಿತ್ ಠಾಕ್ರೆ ವರಿಸಿದರು.
ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಅವರು ಭಾನುವಾರದಂದು ಮುಂಬೈನ ಪಾರೇಲ್ ಪ್ರದೇಶದಲ್ಲಿನ ಫೈವ್ ಸ್ಟಾರ್ ಹೋಟೆಲ್ ವೊಂದರಲ್ಲಿ ವಿವಾಹ ಆರತಕ್ಷತೆ ಕಾರ್ಯಕ್ರಮ ಆಯೋಜಿಸಿದ್ದರು. ಬಾಲಿವುಡ್ ಸ್ಟಾರ್ ನಟ, ನಟಿಯರು, ರಾಜಕೀಯ ಮುಖಂಡರು ಪಾಲ್ಗೊಂಡು ನವ ಜೋಡಿಗೆ ಶುಭಹಾರೈಸಿದರು.
ರಾಜ್ ಠಾಕ್ರೆ ಹಾಗೂ ಅವರ ಪತ್ನಿ ಶರ್ಮಿಳಾ, ರಾಜ್ ಅವರ ಕಸಿನ್ ಶಿವ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಅವರ ಪತ್ನಿ ರಶ್ಮಿ, ಅವರ ಪುತ್ರ ಆದಿತ್ಯ ಹಾಗೂ ಮತ್ತೊಬ್ಬ ಕಸಿನ್ ಜೈ ದೇವ್ ಠಾಕ್ರೆ ಅವರು ಅತಿಥಿಗಳನ್ನು ಸ್ವಾಗತಿಸಿದರು.

ರಾಜ್ ಠಾಕ್ರೆ ಕುಟುಂಬದ ಸ್ನೇಹಿತರು
ಹೆಸರಾಂತ ವೈದ್ಯ ಡಾ. ಸಂಜಯ್ ಬೊರುಡೆ ಅವರ ಪುತ್ರಿ ಮಿಥಾಲಿ ಹಾಗೂ ರಾಜ್ ಠಾಕ್ರೆ ಅವರ ಪುತ್ರಿ ಊರ್ವಶಿ ಅವರು ಇತ್ತೀಚಿಗೆ ಜಂಟಿಯಾಗಿ ಫ್ಯಾಷನ್ ಬ್ರ್ಯಾಂಡ್ 'ದಿ ರಾಕ್' ಹೊರ ತಂದಿದ್ದರು. ಅಮಿತ್ ಅವರು ಕಾರ್ಟೂನಿಸ್ಟ್ ಆಗಿದ್ದಾರೆ. ಅಮಿತ್ ಹಾಗೂ ಮಿಥಾಲಿ ಅವರ ಬಾಲ್ಯದ ಗೆಳೆತನ, ಪ್ರೇಮವನ್ನು ವಿವಾಹ ಬಂಧನಕ್ಕೊಳಪಡಿಸಲು ಎರಡು ಕಡೆ ಕುಟುಂಬಗಳು ನಿಶ್ಚಯಿಸಿ, ಡಿಸೆಂಬರ್ 11, 2017ರ ಸರಳ ಸಮಾರಂಭದಲ್ಲಿ ವಿವಾಹ ನಿಶ್ಚಿತಾರ್ಥ ನೆರವೇರಿಸಲಾಗಿತ್ತು.

ಬಾಲಿವುಡ್ ತಾರೆಗಳ ದಂಡು
ಬಾಲಿವುಡ್ ನ ತಾರೆಗಳಾದ ಅಮಿತಾಭ್ ಬಚ್ಚನ್, ಜಿತೇಂದ್ರ, ಶಾರುಖ್ ಖಾನ್, ಸಲ್ಮಾನ್ ಖಾನ್, ಅಮೀರ್ ಖಾನ್, ಊರ್ಮಿಳಾ ಮಾತೋಂಡ್ಕರ್ ಸೇರಿದಂತೆ ಹಲವು ನಟ-ನಟಿಯರು ನವಜೋಡಿಗೆ ಶುಭ ಹಾರೈಸಿದರು.

ರಾಜಕಾರಣಿಗಳ ದಂಡೇ ನೆರೆದಿತ್ತು
ಬೆಳಿಗ್ಗೆ ನಡೆದ ವಿವಾಹ ಕಾರ್ಯಕ್ರಮದಲ್ಲಿ ರಾಜ್ಯಪಾಲ ಸಿವಿ ರಾವ್, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಪಂಕಜಾ ಮುಂಡೆ ಮತ್ತಿತರರು ಪಾಲ್ಗೊಂಡಿದ್ದರು. ಪ್ರಮುಖವಾಗಿ ಕೇಂದ್ರದ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ, ಅವರ ಪುತ್ರಿ ಪ್ರಣಿತಿ ಶಿಂಧೆ, ಮಾಜಿ ಉಪ ಮುಖ್ಯಮಂತ್ರಿ ಜಗನ್ ಭುಜಬಲ್ ಮತ್ತಿತರರು ಪಾಲ್ಗೊಂಡಿದ್ದರು.ಕಾಂಗ್ರೆಸ್ ನಾಯಕರಾದ ಅಹ್ಮದ್ ಪಟೇಲ್, ಶರದ್ ಪವಾರ್, ಸುಪ್ರಿಯಾ ಸುಳೆ, ಅಜಿತ್ ಪವಾರ್ ಕೂಡ ಉಪಸ್ಥಿತರಿದ್ದರು.

ಸೆಲೆಬ್ರಿಟಿಗಳಿಂದ ಶುಭಹಾರೈಕೆ
ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಹಾಗೂ ಅವರ ಪತ್ನಿ ಅಂಜಲಿ, ಹಿರಿಯ ಗಾಯಕಿ ಆಶಾ ಬೋಸ್ಲೆ, ನಟ ರಿತೇಶ್ ದೇಶ್ ಮುಖ್ ಮತ್ತು ಅವರ ಸಹೋದರ ಅಮಿತ್ ದೇಶ್ ಮುಖ್, ಉದ್ಯಮಿ ರತನ್ ಟಾಟಾ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications