ಚಿತ್ರಗಳಲ್ಲಿ : ಮುಂಡೆಗೆ ಮೋದಿ ಸೇರಿದಂತೆ ಗಣ್ಯರ ನಮನ
ಮುಂಬೈ, ಜೂ.3: ರೈತರು, ಬಡವರು, ಶೋಷಿತ ವರ್ಗದ ದನಿಯಾಗಿದ್ದ ಬಿಜೆಪಿ ಮುಖಂಡ ಗೋಪಿನಾಥ್ ಪಾಂಡುರಂಗ ಮುಂಡೆ ಅವರ ದುರಂತ ಸಾವಿಗೆ ದೇಶದೆಲ್ಲೆಡೆಯಿಂದ ಸಂತಾಪ ಸಂದೇಶಗಳು ಹರಿದು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ರಾಜಕಾರಣಿಗಳು ಮುಂಡೆ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಹರೀಶ್ ರಾವತ್ ಅವರು ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿ ಅಗಲಿದ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದರು. ಸುಷ್ಮಾ ಸ್ವರಾಜ್ ಹಾಗೂ ಸ್ಮೃತಿ ಇರಾನಿ ಅವರು ಮುಂಡೆ ಅವರ ಕುಟುಂಬದವರನ್ನು ಸಮಾಧಾನ ಪಡಿಸುವ ದೃಶ್ಯ ಮನಕಲಕುವಂತ್ತಿತ್ತು.
ಮುಂಡೆ ಅವರ ನಿಧನಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಕೇಂದ್ರ ಸಚಿವರಾದ ರಾಜನಾಥ್ಸಿಂಗ್, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಅನಂತ್ಕುಮಾರ್, ಡಿ.ವಿ.ಸದಾನಂದಗೌಡ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.[ಅಕಾಲಿಕ ಸಾವು ಕಂಡ ರಾಜಕಾರಣಿಗಳು]
ಸಂಸದರಾದ ಹರ್ಷವರ್ಧನ್, ಉಮಾಭಾರತಿ, ವೆಂಕಯ್ಯನಾಯ್ಡು, ನಿತಿನ್ ಗಡ್ಕರಿ, ಅನಂತಕುಮಾರ್, ಜಗದೀಶ್ ಶೆಟ್ಟರ್, ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ಸಿಂಗ್, ಎಚ್.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್, ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ಸೇರಿದಂತೆ ಅನೇಕರು ತಮ್ಮ ದುಃಖ ವ್ಯಕ್ತಪಡಿಸಿದ್ದಾರೆ. ಗೋಪಿನಾಥ್ ಮುಂಡೆ ಅಂತಿಮ ದರ್ಶನದ ಚಿತ್ರಗಳು, ಟ್ವೀಟ್ ನಲ್ಲಿ ಬಂದಿರುವ ಶ್ರದ್ಧಾಂಜಲಿ ಚಿತ್ರಗಳು ಇಲ್ಲಿವೆ

ಪ್ರಧಾನಿ ಮೋದಿ ಅವರಿಂದ ಅಂತಿಮ ನಮನ
ಮಹಾರಾಷ್ಟ್ರದ ವಂಜಾರಿ ಎಂಬ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಗೋಪಿನಾಥ್ ಮುಂಡೆ ಅವರು ಪತ್ನಿ, ಮೂವರು ಸಹೋದರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರನ್ನು ಬಿಟ್ಟು ಅಗಲಿದ್ದಾರೆ.

ಅಡ್ವಾಣಿ ಹಾಗೂ ಮೋದಿ ಅವರಿಂದ ಕಂಬನಿ
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಿರಿಯ ನಾಯಕರಿಂದ ಹಿಡಿದು ಕಾರ್ಯಕರ್ತರ ತನಕ ಎಲ್ಲರ ಮುಖದಲ್ಲಿ ಸೂತಕದ ಛಾಯೆ ಎದ್ದು ಕಾಣುತ್ತಿತ್ತು.

ಮಹಾರಾಷ್ಟ್ರದ ಬೀಡ್ ಲೋಕಸಭಾ ಕ್ಷೇತ್ರ
ಮಹಾರಾಷ್ಟ್ರದ ಬೀಡ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಗೋಪಿನಾಥ್ ಮುಂಡೆ ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. ಇಂದು ಅವರ ಸ್ವ ಕ್ಷೇತ್ರದಲ್ಲಿ ಸಚಿವರಾದ ಕಾರಣ ಅವರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಚಿತ್ರದಲ್ಲಿ ರೋದಿಸುತ್ತಿರುವ ಬೀಡ್ ಕ್ಷೇತ್ರದ ಅಭಿಮಾನಿಗಳು
|
ಮಹಾರಾಷ್ಟ್ರದ ಮೂವರು ದಿಗ್ಗಜರು
ಮಹಾರಾಷ್ಟ್ರ ಮೂವರು ದಿಗ್ಗಜರನ್ನು ಕಳೆದುಕೊಂಡು ಬಡವಾಗಿದೆ ಎಂಬ ಟಾಪ್ ಟ್ವೀಟ್ ಹಾಗೂ ಚಿತ್ರ

ಮೋಹನ್ ಭಾಗ್ವತ್ ಅವರಿಂದ ಅಂತಿಮ ನಮನ
ಆರೆಸ್ಸೆಸ್ ಮುಖ್ಯತಸ್ಥ ಮೋಹನ್ ಭಾಗ್ವತ್ ಅವರಿಂದ ಮುಂದೆ ಪಾರ್ಥೀವ ಶರೀರಕ್ಕೆ ಅಂತಿಮ ನಮನ

ಮುಂಡೆ ಪುತ್ರಿ ಸಂತೈಸುತ್ತಿರುವ ಸ್ಮೃತಿ ಇರಾನಿ
ಮುಂಡೆ ಪುತ್ರಿ ಸಂತೈಸುತ್ತಿರುವ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ

ಅಟಲ್ ಅವರ ಪರವಾಗಿ ವೆಂಕಯ್ಯ ನಾಯ್ಡು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪರವಾಗಿ ಹೂಗುಚ್ಛ ಅರ್ಪಿಸಿದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು

ಬಿಜೆಪಿ ಹಿರಿಯ ನಾಯಕರಿಂದ ನಮನ
ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್ ಮುಖಂಡ ಭೈಯಾಜಿ ಜೋಶಿ ಅವರಿಂದ ಅಂತಿಮ ನಮನ.

ನವದೆಹಲಿಯಲ್ಲಿ ಮುಂಡೆ ಅಂತಿಮ ಯಾತ್ರೆ
ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಮುಂಡೆ ಅವರ ಪಾರ್ಥೀವ ಶರೀರ ಕರೆ ತರುವಾಗಿನ ದೃಶ್ಯ. PTI Photo by Atul Yadav

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಹರೀಶ್ ರಾವತ್ ಅವರು ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿ ಅಗಲಿದ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದರು. PTI Photo by Atul Yadav

ಅಪಘಾತ ನಡೆದ ರಸ್ತೆ ಹಾಗೂ ಘಟನಾ ಸ್ಥಳ
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಮಹಾರಾಷ್ಟ್ರದ ಪ್ರಭಾವಿ ಬಿಜೆಪಿ ಮುಖಂಡ ಗೋಪಿನಾಥ್ ಮುಂಡೆ ಅವರಿದ್ದ ಕಾರು ದೆಹಲಿಯ ಪೃಥ್ವಿರಾಜ್ ಮತ್ತು ತುಘಲಕ್ ರಸ್ತೆ ನಡುವೆ ಮಂಗಳವಾರ ಮುಂಜಾನೆ ಅಪಘಾತಕ್ಕೀಡಾಗಿತ್ತು. PTI Photo by Vijay Verma

ಮುಂಡೆ ಅವರ ಕಾರಿಗೆ ಗುದ್ದಿದ ಕಾರು
ಗೋಪಿನಾಥ್ ಮುಂಡೆ ಅವರ ಕಾರಿಗೆ ಹಿಂಬದಿಯಿಂದ ಗುದ್ದಿದ ಇಂಡಿಕಾ ಕಾರು ಈಗ ತುಘಲಕ್ ರಸ್ತೆ ಪೊಲೀಸ್ ಠಾಣೆ ಬಳಿ ನಿಲ್ಲಿಸಲಾಗಿದೆ. PTI Photo by Vijay Verma
|
ಟ್ವಿಟ್ಟರ್ ನಿಂದ ಬಂದ ಅಂತಿಯ ಯಾತ್ರೆ ಚಿತ್ರ
ಟ್ವಿಟ್ಟರ್ ನಿಂದ ಬಂದ ಗೋಪಿನಾಥ್ ಮುಂಡೆ ಅವರ ಅಂತಿಯ ಯಾತ್ರೆ ಚಿತ್ರ
|
ಸ್ಮೃತಿ ಇರಾನಿ ಹಾಗೂ ಮುಂಡೆ ಪುತ್ರಿ
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಮುಂಡೆ ಪುತ್ರಿ, ಶಾಸಕಿ ಪಂಕಜ ಅವರ ಜತೆ
|
ಬಿಜೆಪಿ ಹಿರಿಯ ನಾಯಕರಿಂದ ನಮನ
ಬಿಜೆಪಿ ಹಿರಿಯ ನಾಯಕರಾದ ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ವೆಂಕಯ್ಯ ನಾಯ್ಡು ಅವರಿಂದ ಅಂತಿಮ ನಮನ
|
ಎಲ್ಕೆ ಅಡ್ವಾಣಿ ಅವರಿಂದ ಅಂತಿಮ ನಮನ
ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಅವರಿಂದ ಅಂತಿಮ ನಮನ
|
ದಲಿತ ಮುಖಂಡರಿಂದ ದಲಿತ ನಾಯಕನಿಗೆ ನಮನ
ದಲಿತ ಮುಖಂಡರಾದ ಪಿಎ ಸಂಗ್ಮಾ, ರಾಮ್ ವಿಲಾಸ್ ಪಾಸ್ವಾನ್ ಅವರಿಂದ ದಲಿತ ನಾಯಕ ಮುಂಡೆಗೆ ನಮನ
|
ಮೋದಿ ಅವರಿಂದ ಅಂತಿಮ ನಮನ
ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಂತಿಮ ನಮನ
|
ಮುಂಡೆಗೆ ಹಮೀದ್ ಅನ್ಸಾರಿ ನಮನ
ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರಿಂದ ಮುಂಡೆಗೆ ಅಂತಿಮ ನಮನ.
|
ರಾಹುಲ್ ಗಾಂಧಿ ಅವರಿಂದ ಅಂತಿಮ ನಮನ
ರಾಹುಲ್ ಗಾಂಧಿ, ಹರೀಶ್ ರಾವತ್ ಅವರಿಂದ ಅಂತಿಮ ನಮನ. ವೆಂಕಯ್ಯ ನಾಯ್ಡು ಅವರನ್ನು ಕಾಣಬಹುದು
|
ಸಂಸದೆ ಹರ್ಸಿಮ್ರಿತ್ ಕೌರ್
ಸಂಸದೆ ಹರ್ಸಿಮ್ರಿತ್ ಕೌರ್ ಬಾದಲ್ ಅವರಿಂದ ಅಂತಿಮ ನಮನ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications