ಮೇ 4ರಂದು ಆಜಾನ್ ಕೊಡಲು ಧ್ವನಿವರ್ಧಕ ಬಳಸಿದರೆ..: ರಾಜ್ ಠಾಕ್ರೆ ಎಚ್ಚರಿಕೆ
ಮುಂಬೈ, ಮೇ 4: ಮಹಾರಾಷ್ಟ್ರದಲ್ಲಿ ಮೇ 4ರ ಬುಧವಾರದಂದು ಧ್ವನಿವರ್ಧಕಗಳಲ್ಲಿ ಆಜಾನ್ ನುಡಿಸುವ ಶಬ್ಧ ಕೇಳಿ ಬಂದರೆ ಅಂಥಲ್ಲಿ ಹನುಮಾನ್ ಚಾಲೀಸಾವನ್ನು ನುಡಿಸುವಂತೆ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.
"ಬುಧವಾರ, ಮೇ 4ರಂದು, ನಿಮಗೆ ಧ್ವನಿವರ್ಧಕಗಳಲ್ಲಿ ಅಜಾನ್ ಮೊಳಗುವುದು ಕೇಳಿದರೆ, ನಾನು ಎಲ್ಲಾ ಹಿಂದೂಗಳಿಗೆ ಮನವಿ ಮಾಡುತ್ತೇನೆ; ಆ ಸ್ಥಳಗಳಲ್ಲಿ ನೀವೂ ಕೂಡ ಧ್ವನಿವರ್ಧಕಗಳಲ್ಲಿ ಹನುಮಾನ್ ಚಾಲೀಸಾವನ್ನು ಪ್ಲೇ ಮಾಡಿ! ಆಗಲೇ ಅವರಿಗೆ ಈ ಧ್ವನಿವರ್ಧಕಗಳ ಅಡ್ಡಿಯ ಅರಿವಾಗುತ್ತದೆ" ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
ಧ್ವನಿವರ್ಧಕಗಳ ಬಳಕೆ ಕುರಿತು ಸುಪ್ರೀಂ ಕೋರ್ಟ್ನ ತೀರ್ಪನ್ನು ಉಲ್ಲೇಖಿಸಿದ ರಾಜ್ ಠಾಕ್ರೆ, "ಧರ್ಮದ ಹೆಸರಿನಲ್ಲಿ ಧ್ವನಿವರ್ಧಕಗಳನ್ನು ಬಳಸುವುದರಿಂದ, ವೃದ್ಧರು, ರೋಗಿಗಳು, ಮಕ್ಕಳು, ವಿದ್ಯಾರ್ಥಿಗಳು ಮುಂತಾದವರಿಗೆ ಖಂಡಿತವಾಗಿಯೂ ತೊಂದರೆಯಾಗುತ್ತಿದೆ. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಆದೇಶದ ಪ್ರಕಾರ ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ" ಎಂದು ಹೇಳಿದರು.
"I appeal to all Hindus that tomorrow, the 4th of May, if you hear the loudspeakers blaring the azan; in those very places, play the Hanuman Chalisa on loudspeakers! That's when they will realise, the hindrance of these loudspeakers!" - MNS Chief Raj Thackeray pic.twitter.com/f4b8npo5e0
— ANI (@ANI) May 3, 2022
ಮಹಾರಾಷ್ಟ್ರದಲ್ಲಿ ಅನೇಕ ಮಸೀದಿಗಳು ಧ್ವನಿವರ್ಧಕಗಳನ್ನು ಬಳಸುತ್ತಿರುವುದು ಅನಧಿಕೃತ ಎಂದು ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ದೂಷಿಸಿದ್ದಾರೆ. "ಸಮಸ್ಯೆ ಏನೆಂದರೆ, ಧ್ವನಿವರ್ಧಕಗಳು ಅನಧಿಕೃತವಾಗಿವೆ. ವಾಸ್ತವವಾಗಿ, ಹಲವು ಮಸೀದಿಗಳು ಸಹ ಅನಧಿಕೃತವಾಗಿವೆ. ಅನಧಿಕೃತ ಮಸೀದಿಗಳಿಗೆ ಧ್ವನಿವರ್ಧಕಗಳನ್ನು ಬಳಸಲು ಸರ್ಕಾರ ಅಧಿಕೃತ ಅನುಮತಿಯನ್ನು ನೀಡಿದ್ದು ಹೇಗೆ? ಮತ್ತು ಅನುಮತಿಗಳನ್ನು ನೀಡುವುದಾದರೆ, ಹಿಂದೂ ದೇವಾಲಯಗಳಿಗೆ ಧ್ವನಿವರ್ಧಕಗಳನ್ನು ಹಾಕಲು ಅನುಮತಿಯನ್ನು ನೀಡಬೇಕಾಗುತ್ತದೆ ಎಂದು ರಾಜ್ ಠಾಕ್ರೆ ಹೇಳಿದರು.

ಇದು ಧಾರ್ಮಿಕ ವಿಷಯವಲ್ಲ, ಆದರೆ ಸಾಮಾಜಿಕ ವಿಷಯ ಎಂದು ಪ್ರತಿಪಾದಿಸಿದ ಅವರು, "ದೇಶದ ಪ್ರತಿಯೊಂದು ಧರ್ಮದ ಜನರು ಶಬ್ದಮಾಲಿನ್ಯಕ್ಕೆ ಒಡ್ಡಿಕೊಳ್ಳುತ್ತಾರೆ ಎಂದರು.

Recommended Video
ಯಾವುದು ತನ್ನ ಧರ್ಮವನ್ನು ಪ್ರಚಾರ ಮಾಡುತ್ತೆ, ಸಭೆ ಮಾಡುತ್ತೆ, ಪ್ರಾರ್ಥನೆ ಮಾಡಲು ರಸ್ತೆಗಳ ಮಧ್ಯದಲ್ಲಿ ಕುಳಿತು ಅಪಾರ ಟ್ರಾಫಿಕ್ ಜಾಮ್ ಉಂಟು ಮಾಡುತ್ತದೆಯೋ ಅದು ಸಾರ್ವಜನಿಕರ ಮೇಲೆ ಪರಿಣಾಮ ಬೀರುವ ಸಾಮಾಜಿಕ ಸಮಸ್ಯೆ ಆಗುತ್ತದೆ. ಇದು ಮುಸ್ಲಿಂ ಸಮುದಾಯದ ಬಗ್ಗೆ ನಾನು ನೀಡಿದ ಹೇಳಿಕೆಗೆ ಮುಖ್ಯ ಕಾರಣವಾಗಿದೆ" ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications