ಮೋದಿ ವಿಷ್ಣುವಿನ 11 ನೇ ಅವತಾರ: ಮಹಾರಾಷ್ಟ್ರ ಬಿಜೆಪಿ ಮುಖಂಡ
ಮುಂಬೈ, ಅಕ್ಟೋಬರ್ 13: ಪ್ರಧಾನಿ ನರೇಂದ್ರ ಮೋದಿ ವಿಷ್ಣುವಿನ 11 ನೇ ಅವತಾರ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡರೊಬ್ಬರು ಹಾಡಿಹೊಗಳಿದ್ದಾರೆ.
ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜೀ ಭಗವಾನ್ ವಿಷ್ಣುವಿನ ಹನ್ನೊಂದನೇ ಅವತಾರ. ಅವರನ್ನು ಅವಮಾನ ಮಾಡುವುದು ಎಂದರೆ ದೇವರಿಗೆ ಅವಮಾನ ಮಾಡಿದಂತೆ ಎಂದು ಮಹಾರಾಷ್ಟ್ರ ಬಿಜೆಪಿ ವಕ್ತಾರ ಅವಧೂತ್ ವಾಘ್ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಮರಾಠಿ ಚಾನೆಲ್ ವೊಂದರ ಜೊತೆ ಮಾತನಾಡುತ್ತಿದ್ದ ಅವರು, ನಾವು ದೇವರಂಥ ವ್ಯಕ್ತಿಯನ್ನು ಪ್ರಧಾನಿಯಾಗಿ ಹೊಂದಿದ್ದು ಈ ದೇಶದ ಜನರ ಅದೃಷ್ಟ ಎಂದಿದ್ದಾರೆ.

ವಾಘ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್, 'ಅವಧೂತ್ ಅವರೊಬ್ಬ ಇಂಜಿನಿಯರಿಂಗ್ ಪದವೀಧರ. ಈ ಹೇಳಿಕೆಯ ನಂತರ ಅವರ ಡಿಗ್ರಿ ಸರ್ಟಿಫಿಕೇಟ್ ಅನ್ನು ಒಮ್ಮೆ ಪರೀಕ್ಷಿಸುವುದು ಒಳಿತು ಎನ್ನಿಸುತ್ತಿದೆ. ಅವರಿಂದ ಇಂಥ ಅಪ್ರಬುದ್ಧ ಹೇಳಿಕೆಗಳನ್ನು ನಿರೀಕ್ಷಿಸಿರಲಿಲ್ಲ' ಎಂದು ಲೇವಡಿ ಮಾಡಿದೆ.
"ತಮ್ಮ ರಾಜಕೀಯ ಭವಿಷ್ಯ ಕಂಡುಕೊಳ್ಳುವ ಸಲುವಾಗಿ ಅವರು ಇಂಥ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಏನು ಎಂಬುದು ಈ ದೇಶಕ್ಕೇ ಗೊತ್ತು. ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ" ಎಂದು ಕಾಂಗ್ರೆಸ್ ಹೇಳಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications