ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ಇ.ಡಿ ಹೊಸ ಪ್ಲ್ಯಾನ್
ಮುಂಬೈ, ಜೂನ್ 22: ಅನಾರೋಗ್ಯದಿಂದ ಬಳಲುತ್ತಿರುವ ಕಾರಣ 41 ಗಂಟೆ ಪ್ರಯಾಣ ಮಾಡಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂಬ ನೆಪ ಹೇಳಿದ್ದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣದ ಆರೋಪಿ, ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ಜಾರಿ ನಿರ್ದೇಶನಾಲಯ ಹೊಸ ಯೋಜನೆ ರೂಪಿಸಿದೆ.
ಆಂಟಿಗುವಾದಲ್ಲಿರುವ ದೇಶಭ್ರಷ್ಟ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರನ್ನು ಕರೆತರಲು ಏರ್ ಆಂಬುಲೆನ್ಸ್ ಹಾಗೂ ವೈದ್ಯಕೀಯ ತಜ್ಞರ ತಂಡವನ್ನು ಕಳುಹಿಸುವುದಾಗಿ ಇ.ಡಿ. ಹೇಳಿದೆ. ಅಲ್ಲದೆ, ಭಾರತದಲ್ಲಿ ಎಲ್ಲ ಅಗತ್ಯ ವೈದ್ಯಕಿಯ ಚಿಕಿತ್ಸೆಗಳನ್ನು ಒದಗಿಸುವುದಾಗಿ ತಿಳಿಸಿದೆ.
ಸಾವಿರಾರು ಕೋಟಿ ಸಾಲದ ಹಣ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೋಕ್ಸಿ, ಭಾರತಕ್ಕೆ ವಿಚಾರಣೆಗಾಗಿ ಬರಲು 41 ಗಂಟೆ ಪ್ರಯಾಣ ಬೆಳೆಸಬೇಕಿದೆ. ಅನಾರೋಗ್ಯದ ಕಾರಣ ಅಷ್ಟು ದೂರ ತೆರಳಲು ಸಾಧ್ಯವಿಲ್ಲ ಎಂದು ಮುಂಬೈ ಹೈಕೋರ್ಟ್ಗೆ 34 ಪುಟಗಳ ಸುದೀರ್ಘ ಪ್ರತಿಕ್ರಿಯೆ ನೀಡಿದ್ದರು.

ಇದಕ್ಕೆ ಪ್ರತಿಯಾಗಿ ಅಫಿಡವಿಟ್ ಸಲ್ಲಿಸಿರುವ ಇ.ಡಿ, ಆರೋಗ್ಯದ ಕಾರಣದಿಂದ ಭಾರತಕ್ಕೆ ಮರಳಲು ಸಾಧ್ಯವಿಲ್ಲ ಎಂದು ಚೋಕ್ಸಿ ಸಲ್ಲಿಸಿರುವ ಅಫಿಡವಿಟ್ ಸುಳ್ಳಿನಿಂದ ಕೂಡಿದೆ ಎಂದು ಆರೋಪಿಸಿದೆ.
ವೈದ್ಯಕೀಯ ಕಾರಣ ಮತ್ತು ಪರಿಸ್ಥಿತಿಯ ಸುಳ್ಳು ದಾಖಲೆಗಳನ್ನು ಸಲ್ಲಿಸುವುದು ಕೇವಲ ಕಾನೂನು ಪ್ರಕ್ರಿಯೆಗಳನ್ನು ವಿಳಂಬಗೊಳಿಸಲು ನ್ಯಾಯಾಲಯವನ್ನು ತಪ್ಪು ದಾರಿಕೆ ಎಳೆಯುವ ಪ್ರಯತ್ನವಷ್ಟೇ. ಆಂಟಿಗುವಾದಲ್ಲಿರುವ ಅವರನ್ನು ವೈದ್ಯಕೀಯ ನಿಗಾದಲ್ಲಿ ಭಾರತಕ್ಕೆ ಕರೆತರಲು ಏರ್ ಆಂಬುಲೆನ್ಸ್ನೊಂದಿಗೆ ವೈದ್ಯಕೀಯ ಪರಿಣತರ ತಂಡವನ್ನು ಒದಗಿಸಲು ಸಿದ್ಧ ಎಂದು ಇ.ಡಿ ಕೋರ್ಟ್ಗೆ ತಿಳಿಸಿದೆ.
13 ಸಾವಿರ ಕೋಟಿ ರೂಪಾಯಿ ಪಿಎನ್ಬಿ ಹಗರಣದ ತನಿಖೆಗೆ ಚೋಕ್ಸಿ ಎಂದಿಗೂ ಸಹಕಾರ ನೀಡಿಲ್ಲ ಎಂದೂ ಅದು ಆರೋಪಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications