ಸಿಎಂ ಉದ್ಧವ್ ಠಾಕ್ರೆ ಮಾನಹಾನಿ: ನಟಿ ಕಂಗನಾ ರಣಾವತ್ ವಿರುದ್ಧ ದೂರು
ಮುಂಬೈ, ಸೆಪ್ಟೆಂಬರ್ 10: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಅವಹೇಳನಾಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬಾಂಬೆ ಹೈಕೋರ್ಟ್ ವಕೀಲ ನಿತಿನ್ ಮಾನೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮೂವಿ ಮಾಫಿಯಾವನ್ನು ರಾಜ್ಯ ಸರ್ಕಾರದೊಂದಿಗೆ ಥಳಕು ಹಾಕಿದ ಸೆ. 9ರಂದು ಕಂಗನಾ ರಣಾವತ್ ಹಾಕಿದ್ದ ಫೇಸ್ಬುಕ್ ಪೋಸ್ಟ್ ಒಂದನ್ನು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ವಿಖ್ರೋಹಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕ್ರಿಮಿನಲ್ ಮಾನಹಾನಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 499ರ ಅಡಿ ದೂರು ದಾಖಲಾಗಿದೆ. ನಟಿ ಕಂಗನಾ ರಣಾವತ್ ಅವರಿಗೆ ಸೇರಿದ ಪಾಲಿ ಹಿಲ್ನಲ್ಲಿನ ಕಚೇರಿಯನ್ನು ಅಕ್ರಮವಾಗಿ ಮಾರ್ಪಾಟು ಮಾಡಲಾಗಿದೆ ಎಂಬ ಆರೋಪದಡಿ ಬಿಎಂಸಿ ತೆರವು ಕಾರ್ಯಾಚರಣೆ ನಡೆಸಿತ್ತು. ಬಿಎಂಸಿಯ ಕಾರ್ಯಾಚರಣೆಯ ಫೋಟೊ ಹಾಗೂ ವಿಡಿಯೋಗಳನ್ನು ಹಂಚಿಕೊಂಡಿದ್ದ ಕಂಗನಾ, ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದರು.

'ಬನ್ನಿ ಉದ್ಧವ್ ಠಾಕ್ರೆ ಮತ್ತು ಕರಣ್ ಜೋಹರ್ ಗ್ಯಾಂಗ್. ನೀವು ನನ್ನ ಕಚೇರಿಯನ್ನು ನೆಲಸಮಗೊಳಿಸಿದಿರಿ. ಬನ್ನಿ ನನ್ನ ಮನೆ, ದೇಹವನ್ನೂ ನೆಲಸಮ ಮಾಡಿ. ಇಡೀ ಜಗತ್ತೇ ನೀವು ಮಾಡುತ್ತಿರುವುದನ್ನು ನೋಡಲಿ. ನಾನು ಸಾಯಲಿ ಅಥವಾ ಬದುಕಲಿ, ನಿಮ್ಮ ಎಲ್ಲಾ ವಿಷಯಗಳನ್ನು ಬಹಿರಂಗಗೊಳಿಸದೇ ಬಿಡುವುದಿಲ್ಲ" ಎಂದು ಕಂಗನಾ ಹೇಳಿದ್ದರು. ಮಹಾರಾಷ್ಟ್ರ ಪಾಕ್ ಆಕ್ರಮಿತ ಕಾಶ್ಮೀರದಂತಾಗಿದೆ ಎಂಬ ತಮ್ಮ ಹೇಳಿಕೆಗೆ ಈ ಕೃತ್ಯ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications