ಮಹಾರಾಷ್ಟ್ರ ಆಗಲೇ ಆದಿತ್ಯ ಠಾಕ್ರೆ ಮುಖ್ಯಮಂತ್ರಿ! ಪೋಸ್ಟರ್ ಹೇಳುವ ಕಥೆ!
ಮುಂಬೈ, ಅಕ್ಟೋಬರ್ 26: "ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಆದಿತ್ಯ ಠಾಕ್ರೆ" ಎಂಬ ಸಾಲುಗಳುಳ್ಳ ಪೋಸ್ಟರ್ ವೊಂದು ಮುಂಬೈಯ ಠಾಕ್ರೆ ನಿವಾಸ 'ಮಾತೋಶ್ರೀ' ಬಳಿ ಕಾಣಿಸಿಕೊಂಡಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದೆ.
ಮರಾರಾಷ್ಟ್ರದ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಬಹುತೇಕ ಖಚಿತವಾಗದರೂ ಅದಕ್ಕೆ ಶರತ್ತುಗಳು ಅನ್ವಯ ಎಂದು ಈಗಾಗಲೇ ಶಿವಸೇನೆ ಹೇಳಿದೆ. 50:50 ಸೂತ್ರಕ್ಕೆ ಒಪ್ಪುವುದಾದರೆ ಮಾತ್ರವೇ ಮೈತ್ರಿಗೆ ಸಿದ್ಧ ಎಂದು ಈಗಾಗಲೇ ಶಿವಸೇನೆ ಹೇಳಿದ್ದು, ಅದಕ್ಕೆ ಒಪ್ಪಿಗೆ ಸೂಚಿಸುವುದೂ ಬಿಜೆಪಿಗೆ ಅನಿವಾರ್ಯವಾಗಿದೆ.
ಮಹಾರಾಷ್ಟ್ರದ ವರ್ಲಿ ಕ್ಷೇತ್ರದಿಂದ ಶಿವಸೇನೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆದಿತ್ಯ ಠಾಕ್ರೆ ಭರ್ಜರಿ ಜಯ ಸಾಧಿಸಿದ್ದರು. ಚುನಾವಣೆಗೂ ಮೊದಲೇ ಶಿವಸೇನೆ ಆದಿತ್ಯ ಠಾಕ್ರೆ ಅವರೇ ಮುಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಎಂದು ಘೋಷಿಸಿತ್ತು.

ಮಹಾರಾಷ್ಟ್ರದ 288 ಕ್ಷೇತ್ರಗಳ್ಲಲಿ ಬಿಜೆಪಿ 105 ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಶಿವಸೇನೆ 56, ಎನ್ ಸಿಪಿ 54, ಕಾಂಗ್ರೆಸ್ 44 ಕ್ಷೇತ್ರಗಳಲ್ಲಿ ಗೆದ್ದಿವೆ. ಸರ್ಕಾರ ರಚಿಸಬೇಕಾದರೆ ಬಿಜೆಪಿಗೆ ಶಿವಸೇನೆ ಬೆಂಬಲ ಅತ್ಯಗತ್ಯ. 50:50 ಸೂತ್ರದ ಪ್ರಕಾರ ಎರಡೂವರೆ ವರ್ಷ ಶಿವಸೇನೆ, ಇನ್ನೆರಡೂವರೆ ವರ್ಷ ಬಿಜೆಪಿ ಆಅಡಳಿತ ನಡೆಸಬೇಕಿದೆ.
ಒಲ್ಲೆ ಎಂದರೆ, ಕಾಂಗ್ರೆಸ್, ಎನ್ ಸಿಪಿ, ಶಿವಸೇನೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಬಹುದು. ಆಗ ಆದಿತ್ಯ ಠಾಕ್ರೆ ಸಿಎಂ ಆಗುವುದು ಖಚಿತ. ಆದದ್ರಿಂದ ಬಿಜೆಪಿಗೆ ಅಧಿಕಾರದ ಅಗತ್ಯವಿದ್ದರೆ ಈ ಸೂತ್ರವನ್ನು ಒಪ್ಪಿಕೊಳ್ಳಲೇಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications