ಬಿಲ್ಡರ್ ಕೊಲೆ: ಅಬು ಸಲೇಂಗೆ ಜೀವಾವಧಿ ಶಿಕ್ಷೆ ಪ್ರಕಟ
ಮುಂಬೈ, ಫೆ.25: ಮುಂಬೈ ಮೂಲದ ಬಿಲ್ಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿಯಾಗಿರುವ ಕುಖ್ಯಾತ ಭೂಗತ ಪಾತಕಿ , ಗ್ಯಾಂಗ್ಸ್ಟರ್ ಅಬು ಸಲೇಂಗೆ ಟಾಡಾ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ಘೋಷಿಸಿದೆ. ಸದ್ಯ ಅಬು ಸಲೇಂ ರಾಯಗಢದ ತಲೋಜಾ ಸೆಂಟ್ರಲ್ ಜೈಲಿನಲ್ಲಿದ್ದಾರೆ.
1995ರ ಮಾ.7ರಂದು ಮುಂಬೈ ಮೂಲದ ಬಿಲ್ಡರ್ ಪ್ರದೀಪ್ ಜೈನ್ ಎಂಬುವವರನ್ನು ಕೊಲೆ ಮಾಡಿದ ಪ್ರಕರಣದ ವಿಚಾರಣೆ ನಡೆಸಿದ ಟಾಡಾ ನ್ಯಾಯಾಲಯ ಅಬು ಸಲೇಂ ಹಂತಕ ಎಂದು ತೀರ್ಮಾನಿಸಿ ಫೆ.16ರಂದು ಮಹತ್ವದ ತೀರ್ಪು ನೀಡಿತ್ತು.
1993 ರ ಮುಂಬೈ ಸರಣಿ ಬಾಂಬ್ ಸ್ಫೋಟ ಆರೋಪಿ ಅಬು ಸೇಲಂನನ್ನು ಪೋರ್ಚುಗಲ್ ನಿಂದ 2005ರ ನವೆಂಬರ್ 11ರಂದು ಭಾರತಕ್ಕೆ ಗಡಿಪಾರು ಮಾಡಲಾಗಿತ್ತು. ಗಡಿಪಾರಾದ ನಂತರ ತಪ್ಪಿತಸ್ಥ ಎಂದು ಸಾಬೀತಾಗಿರುವ ಮೊದಲ ಪ್ರಕರಣ ಇದಾಗಿದೆ. [ಅಬು ಸಲೇಂ ದೋಷಿ : ಟಾಡಾ ಕೋರ್ಟ್]

ಅಬು ಸಲೇಂ ಜೊತೆಗೆ ವೀರೇಂದ್ರ ಜಂಬ್ ಮತ್ತು ಮೆಹಂದಿ ಹಸ್ಸನ್ ಇನ್ನಿಬ್ಬರು ತಪ್ಪಿತಸ್ಥರು ಎಂದು ಕೋರ್ಟ್ ಹೇಳಿದೆ. ಮೂವರು ದೋಷಿಗಳ ಮೇಲೆ ಐಪಿಸಿ ಸೆಕ್ಷನ್ 302, 102 ಬಿ ಅಡಿ ಪ್ರಕರಣ ದಾಖಲಾಗಿತ್ತು ಎಂದು ವಿಶೇಷ ಪಬ್ಲಿಕ್ ಪ್ರಾಸೆಕ್ಯೂಟರ್ ಉಜ್ವಲ್ ನಿಕಂ ತಿಳಿಸಿದ್ದಾರೆ.
ಗಲ್ಲು ಶಿಕ್ಷೆಗೆ ಮನವಿ: ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಂ ಅವರು ವಿಚಾರಣೆ ವೇಳೆ ಟಾಡಾ ಕೋರ್ಟಿಗೆ ಮನವಿ ಸಲ್ಲಿಸಿದ್ದರು. ಅದರೆ, ಪೋರ್ಚುಗಲ್ ಹಾಗೂ ಭಾರತ ನಡುವಿನ ದ್ವಿಪಕ್ಷೀಯ ಗಡಿಪಾರು ಒಪ್ಪಂದದ ಹಿನ್ನೆಲೆಯಲ್ಲಿ ಅಬು ಸಲೇಂಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಸಲೇಂ ಪರ ವಕೀಲ ಸುದೀಪ್ ಪಸ್ಗೋಲಾ ಅವರು ವಾದಿಸಿದ್ದರು. ಈ ವಾದವನ್ನು ಮನ್ನಿಸಿದ ಹೆಚ್ಚುವರಿ ಸೆಷನ್ಸ್ ಜಡ್ಜ್ ವಿ.ಎ ಸನಪ್ ಅವರು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದಾರೆ.
ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಸಲೇಂ 2002ರಲ್ಲಿ ಪ್ರೇಯಸಿ ಮೋನಿಕಾ ಬೇಡಿ ಜತೆ ಲಿಸ್ಬನ್ನಲ್ಲಿ ಸೆರೆಸಿಕ್ಕಿದ್ದ. ಮೂರು ವರ್ಷಗಳ ನಂತರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಭಾರತಕ್ಕೆ ಪೋರ್ಚುಗಲ್ ದೇಶದಿಂದ ಹಸ್ತಾಂತರಗೊಂಡಿದ್ದ.
Court hs found Abu Salem guilty in Pradeep Jain murder case & ordered life imprisonment for him: Ujjwal Nikam, lawyer pic.twitter.com/tVIZmljsLS
— ANI (@ANI_news) February 25, 2015 ಹಸ್ತಾಂತರದ ವೇಳೆ ಭಾರತ, ಅಬು ಸಲೇಂಗೆ ಮರಣದಂಡನೆ ಅಥವಾ 25 ವರ್ಷಕ್ಕಿಂತ ಹೆಚ್ಚಿನ ಸೆರೆವಾಸ ಶಿಕ್ಷೆ ವಿಧಿಸುವುದಿಲ್ಲ ಎಂದು ಪೋರ್ಚುಗಲ್ ಗೆ ಭರವಸೆ ನೀಡಲಾಗಿತ್ತು. ಭಾರತದಲ್ಲಿ ತನ್ನ ಮೇಲಿನ ಆರೋಪಗಳ ವಿಚಾರಣೆ ರದ್ದುಗೊಳಿಸುವಂತೆ ಅಬು ಸಲೇಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.
ನಂತರ, ನಕಲಿ ಪಾಸ್ ಫೋರ್ಟ್ ಬಳಕೆ ಆರೋಪದಡಿಯಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ 2013ರಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications