ದಾವೂದ್ ಜೊತೆ ನಂಟು ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೆಲ್ ಗೆ ಸಮನ್ಸ್
ಮುಂಬೈ, ಅಕ್ಟೋಬರ್ 17: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸೇರಿರುವ ಮುಂಬೈನಲ್ಲಿರುವ ಆಸ್ತಿಗಳನ್ನು ಖರೀದಿಸಿರುವ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ, ಎನ್ ಸಿಪಿ ಮುಖಂಡ ಪ್ರಫುಲ್ ಪಟೇಲ್ ಅವರಿಗೆ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿಗೊಳಿಸಿದೆ. ಆದರೆ ವಿವಾದಿತ ಸೀಜೆ ಹೌಸ್ ಕಟ್ಟಡದ ಭೂ ವ್ಯವಹಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಫುಲ್ ಪಟೇಲ್ ಸ್ಪಷ್ಟಪಡಿಸಿದ್ದಾರೆ.
2005ರಲ್ಲಿ ದಾವೂದ್ ಸಹಚರ ಇಕ್ಬಾಲ್ ಮಿರ್ಚಿ ಈ ಕಟ್ಟಡವನ್ನು ಪ್ರಫುಲ್ ಪಟೇಲ್ ಗೆ ಮಾರಿದ್ದಾನೆ. ಇಕ್ಬಾಲ್ ಪತ್ನಿ ಹಜ್ರಾ ಮೆಮೊನ್ ಹೆಸರಿನಲ್ಲಿದ್ದ ಮತ್ತೊಂದು ಆಸ್ತಿ ಕೂಡಾ ಪಟೇಲ್ ಪಾಲಾಗಿದೆ. ಈ ಕಟ್ಟಡಗಳ ಮಾಲೀಕತ್ವ ಪಡೆದ ಬಳಿಕ ಪುನರ್ ವಿನ್ಯಾಸಗೊಳಿಸಲಾಗಿದೆ ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದಾರೆ.

ಆದರೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ನಿರತರಾಗಿರುವ ಪ್ರಫುಲ್ ಪಟೇಲ್ ಅವರು ಎಲ್ಲಾ ಆರೋಪಗಳನ್ನು ಅಲ್ಲಗೆಳೆದಿದ್ದಾರೆ. 2004ರಿಂದ 2009ರ ಅವಧಿಯಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿದ್ದರು.
ಇನ್ನೊಂದು ವಾದದ ಪ್ರಕಾರ ಈ ಕಟ್ಟಡದ ಮಾಲೀಕತ್ವ ವಿವಾದ ಕೋರ್ಟಿನಲ್ಲಿ ವಿಚಾರಣೆಗೊಳಪಟ್ಟಿದ್ದು, 1978ರಿಂದ 2005ರ ತನಕ ಇದ್ದ ಮಾಲೀಕರು ಬೇರೆ, ಇಕ್ಬಾಲ್ ಮಿರ್ಚಿ ಅಸಲಿ ಹಕ್ಕುದಾರನಲ್ಲ ಎಂಬ ವರದಿಗಳು ಬಂದಿವೆ. 1963ರಲ್ಲಿ ಸೀಜೆ ಹೌಸ್ ಹಾಗೂ ವರ್ಲಿಯ ಕಟ್ಟಡ ನಮ್ಮ ಸುಪರ್ದಿಗೆ ಬಂದಿದ್ದು, ನನ್ನ ಕುಟುಂಬದ 21 ಸದಸ್ಯರು ಸೇರಿದಂತೆ 65 ಮಂದಿಗೆ ಮಾರಾಟವಾಗಿದೆ. ಕಟ್ಟಡದ ಹಿಂಬದಿಯಲ್ಲಿ ಅಕ್ರಮವಾಗಿ ನೆಲೆಸಿದ್ದವರ ಬಗ್ಗೆ ಉಲ್ಲೇಖಿಸುವುದು ಇಲ್ಲಿ ಮುಖ್ಯ ಎಂದು ಪಟೇಲ್ ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications