ರಸ್ತೆಯಲ್ಲಿ ಮಗುವಿಗೆ ಜನ್ಮವಿತ್ತ ಕಾರ್ಮಿಕ ಮಹಿಳೆ, ಬಳಿಕ 150 ಕಿಮೀ ಪ್ರಯಾಣ
ಮುಂಬೈ, ಮೇ 13: ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆ ಪ್ರಮುಖ ನಗರಗಳಲ್ಲಿ ಸಿಲುಕಿಕೊಂಡಿದ್ದ ಅನೇಕ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಸರ್ಕಾರ ವ್ಯವಸ್ಥೆ ಮಾಡಿರುವ ರೈಲು ಹಾಗೂ ಬಿಸ್ಸಿಗೂ ಕಾಯದ ಕೆಲವು ಕಾರ್ಮಿಕರು ಹೆದ್ದಾರಿಗಳಲ್ಲಿ ನಡೆದುಕೊಂಡೇ ಊರು ಸೇರುತ್ತಿದ್ದಾರೆ.
ಹೀಗೆ ಮಹಾರಾಷ್ಟ್ರದಿಂದ ಮಧ್ಯಪ್ರದೇಶಕ್ಕೆ ಹೋಗುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರು ಮಾರ್ಗಮಧ್ಯೆ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ನಾಸಿಕ್ನಗರದಿಂದ ಮಧ್ಯಪ್ರದೇಶದ ಸಾತ್ನ ಜಿಲ್ಲೆಗೆ ಹೋಗುತ್ತಿದ್ದ ಗರ್ಭಿಣಿ ಹೆಂಗಸು, ಮಾರ್ಗಮಧ್ಯ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
MP: A pregnant migrant worker who was walking back to her village in Satna from Nashik in Maharashtra amid #CoronavirusLockdown, delivered a child on the way. Her husband says, "after she gave birth we rested for 2 hours then we walked for at least 150 km." (12.5) pic.twitter.com/WubC97wabz
— ANI (@ANI) May 13, 2020
ಮಗುವಿಗೆ ಜನ್ಮ ನೀಡಿದ ಬಳಿಕವೂ ಆಕೆ ಸುಮಾರು 150 ಕಿ.ಮೀ ನಡೆದುಕೊಂಡು ಹೋಗಿದ್ದಾರೆ ಎಂದು ಆಕೆಯ ಪತಿ ಹೇಳಿದ್ದಾರೆ. ''ಮಗುವಿಗೆ ಜನ್ಮ ನೀಡಿದ ಬಳಿಕ ಸುಮಾರು ಗಂಟೆ ವಿಶ್ರಾಂತಿ ಪಡೆದೆವು. ನಂತರ ಸುಮಾರು 150 ಕಿ.ಮೀ ನಡೆದುಕೊಂಡು ಹೋದೆವು'' ಎಂದಿದ್ದಾರೆ.

ಇನ್ನು ಈ ವಿಷಯ ತಿಳಿದ ಸಾತ್ನ ಜಿಲ್ಲೆಯ ಆಡಳಿತ ಮಂಡಳಿ ಕೂಡಲೇ ಬಸ್ಸಿನ ವ್ಯವಸ್ಥೆ ಮಾಡಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆ ನೀಡಿದೆ. ಸದ್ಯ ಮಗು ಮತ್ತು ತಾಯಿ ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.
''ಆ ದಂಪತಿಗಳು ಮಹಾರಾಷ್ಟ್ರ ಗಡಿ ಭಾಗಕ್ಕೆ ಬಂದಾಗ ಆಡಳಿತ ಮಂಡಳಿಯೂ ಅವರಿಗೆ ಬಸ್ ವ್ಯವಸ್ಥೆ ಮಾಡಿದೆ ಎಂದು ನಮಗೆ ತಿಳಿಯಿತು, ಅವರು ಉಂಚೇರಾ ತಲುಪುತ್ತಿದ್ದಂತೆ ನಾವು ಅವರನ್ನು ಆಸ್ಪತ್ರೆಗೆ ಕರೆತಂದೆವು. ಎಲ್ಲಾ ತಪಾಸಣೆಗಳನ್ನು ಮಾಡಲಾಗಿದೆ, ತಾಯಿ ಮತ್ತು ಮಗು ಇಬ್ಬರೂ ಉತ್ತಮವಾಗಿದ್ದಾರೆ'' ವೈದ್ಯರು ಮಾಹಿತಿ ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications