ವೇಶ್ಯಾವಾಟಿಕೆ: ಐತಿಹಾಸಿಕ ತೀರ್ಪು ನೀಡಿದ ಬಾಂಬೆ ಹೈಕೋರ್ಟ್
ಮುಂಬೈ, ಸೆ 27 (ಪಿಟಿಐ) : ವೇಶ್ಯಾವಾಟಿಕೆ ಕಾನೂನು ಬದ್ದವೋ, ಕಾನೂನು ಬಾಹಿರವೋ, ಈ ವಿಚಾರದಲ್ಲಿ ಬಾಂಬೆ ಹೈಕೋರ್ಟ್ ತನ್ನ ತೀರ್ಪನ್ನು ನೀಡಿದೆ. ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಮೂವರು ಮಹಿಳೆಯರ ಅರ್ಜಿ ವಿಚಾರಣೆಯ ವೇಳೆ, ಕೋರ್ಟ್ ಈ ತೀರ್ಪನ್ನು ನೀಡಿದೆ.
"ವಯಸ್ಸಿನ ಮಹಿಳೆಗೆ ಯಾವ ವೃತ್ತಿಯನ್ನು ಆಯ್ಕೆಮಾಡಿಕೊಳ್ಳಬೇಕು ಎನ್ನುವ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಹಕ್ಕಿದೆ. ಕಾನೂನು ಚೌಕಟ್ಟಿನಲ್ಲಿ ವೇಶ್ಯಾವಾಟಿಕೆ ಅಪರಾಧವಲ್ಲ ಮತ್ತು ಕಾನೂನಿಗೆ ವಿರುದ್ದವಲ್ಲ"ಎನ್ನುವ ತೀರ್ಪನ್ನು ಹೈಕೋರ್ಟ್ ನೀಡಿದೆ.
ಏನಿದು ಪ್ರಕರಣ: ಮುಂಬೈ ಮಹಾನಗರಿಯ ಮಲಾಡ್ ಅತಿಥಿಗೃಹದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಮೂವರು ಮಹಿಳೆಯರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಂಧಿತ ಮಹಿಳೆಯರು ಸುಮಾರು ಇಪ್ಪತ್ತು ವಯಸ್ಸಿನವರಾಗಿದ್ದರು ಮತ್ತು ಕಳೆದ ವರ್ಷ ಈ ಘಟನೆ ನಡೆದಿತ್ತು.

ಮೂವರು ಮಹಿಳೆಯರ ಜೊತೆಗೆ, ಬ್ರೋಕರ್ ಅನ್ನು ಕೂಡಾ ಪೊಲೀಸರು ಬಂಧಿಸಿದ್ದರು. ಬಂಧನದ ವಿರುದ್ದ ಮಹಿಳೆಯರು ಮೆಟ್ರೋಪಾಲಿಟನ್ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲಿ, ಈ ಮಹಿಳೆಯರ ಅರ್ಜಿ ವಜಾಗೊಂಡಿತ್ತು.
ಇದನ್ನು ಪ್ರಶ್ನಿಸಿ ಮೂವರು ಮಹಿಳೆಯರು ಬಾಂಬೆ ಹೈಕೋರ್ಟಿನ ಮೊರೆ ಹೋಗಿದ್ದರು. ಈಗ, ಮೆಟ್ರೋಪಾಲಿಟನ್ ಆದೇಶವನ್ನು ಬಾಂಬೆ ಹೈಕೋರ್ಟ್ ಅನೂರ್ಜಿತಗೊಳಿಸಿ, ವೇಶ್ಯಾವಾಟಿಕೆ ಕಾನೂನಿಗೆ ವಿರುದ್ದವಲ್ಲ ಎಂದಿದೆ. ಆದರೆ..
"ವಾಣಿಜ್ಯ ಉದ್ದೇಶಕ್ಕಾಗಿ ಲೈಂಗಿಕ ಶೋಷಣೆಗೆ ಒಳಪಡಿಸುವುದು, ನಿಂದಿಸುವುದು, ಬ್ಲ್ಯಾಕ್ ಮೇಲ್ ಮಾಡುವುದು ತಪ್ಪು. ಸಾರ್ವಜನಿಕ ಸ್ಥಳದಲ್ಲಿ ಈ ಚಟುವಟಿಕೆ ನಡೆಸುತ್ತಿದ್ದರೆ ಅದು ಕಾನೂನಿಗೆ ವಿರುದ್ದವಾದದ್ದು"ಎಂದು ಬಾಂಬೆ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications