ಎರಡನೇ ಅವಧಿಗೆ ಮುಂದುವರಿಯದಿರಲು ರಘುರಾಮ್ ರಾಜನ್ ನಿರ್ಧಾರ
ಮುಂಬೈ, ಜೂನ್ 18 : ಬಿಜೆಪಿ ನಾಯಕ ಡಾ. ಸುಬ್ರಮಣಿಯನ್ ಸ್ವಾಮಿ ಅವರಿಂದ ತೀವ್ರ ಟೀಕೆಗೆ ಒಳಗಾಗಿದ್ದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಡಾ. ರಘುರಾಮ್ ರಾಜನ್ ಅವರು, ಸೆಪ್ಟೆಂಬರ್ 4ರ ನಂತರ ಎರಡನೇ ಅವಧಿಗೆ ಮುಂದುವರಿಯದಿರಲು ನಿರ್ಧರಿಸಿ ಅಚ್ಚರಿ ಮೂಡಿಸಿದ್ದಾರೆ.
ಈ ಸಂಗತಿಯನ್ನು ಆರ್ಬಿಐನ ಉದ್ಯೋಗಿಗಳಿಗೆ ಶನಿವಾರ ಬರೆದಿರುವ ಸುದೀರ್ಘ ಪತ್ರದಲ್ಲಿ ರಘುರಾಮ್ ರಾಜನ್ ಅವರು ಸ್ಪಷ್ಟಪಡಿಸಿದ್ದು, ಸೆಪ್ಟೆಂಬರ್ ನಂತರ ತಾವು ತಮಗೆ ಪ್ರಿಯವಾದ ಶೈಕ್ಷಣಿಕ ಕ್ಷೇತ್ರಕ್ಕೆ ಮರಳುವುದಾಗಿ ತಿಳಿಸಿದ್ದು, ಅಗತ್ಯವಿದ್ದಾಗ ದೇಶ ಸೇವೆಗೆ ಯಾವಾಗಲೂ ಸಿದ್ಧರಿರುವುದಾಗಿ ನುಡಿದಿದ್ದಾರೆ.
ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಚೀಫ್ ಎಕಾನಾಮಿಸ್ಟ್ ಆಗಿದ್ದ ರಘುರಾಮ್ ರಾಜನ್ (53), 2013ರಲ್ಲಿ ಮೂರು ವರ್ಷಗಳ ಅವಧಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಗವರ್ನರ್ ಆಗಿ ನೇಮಕವಾಗಿದ್ದರು.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿಗಳಿಗೆ ಬರೆದಿರುವ ಪತ್ರದಲ್ಲಿ, ಅಂದಿದ್ದ ಆರ್ಥಿಕ ಸ್ಥಿತಿ, ತಾವು ಮೂರು ವರ್ಷಗಳಲ್ಲಿ ತೆಗೆದುಕೊಂಡ ಕ್ರಮಗಳು, ಸಿಬ್ಬಂದಿಗಳ ಸಹಕಾರದೊಂದಿಗೆ ತಾವು ಮಾಡಿದ ಸಾಧನೆಗಳ ಬಗ್ಗೆ ವಿಸ್ತಾರವಾಗಿ ರಘುರಾಮ್ ರಾಜನ್ ಬರೆದಿದ್ದಾರೆ.
"ನಾನು ರಿಸರ್ವ್ ಬ್ಯಾಂಕ್ನ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಾಗ ಭಾರತದ ಆರ್ಥಿಕ ಸ್ಥಿತಿ ಅತೀ ದುರ್ಬಲವಾಗಿತ್ತು. ಆದರೆ, ಮೂರು ವರ್ಷಗಳಲ್ಲಿ ಭಾರತದ ಆರ್ಥಿಕ ಸ್ಥಿತಿ ಅತ್ಯುತ್ತಮವಾಗಿದ್ದು, ವಿಶ್ವದಲ್ಲಿ ಅತೀ ವೇಗವಾಗಿ ಬೆಳೆಯುತ್ತಿದೆ. ಹಣದುಬ್ಬರವೂ ಅರ್ಧದಷ್ಟು ತಗ್ಗಿದೆ" ಎಂದು ಪತ್ರದಲ್ಲಿ ಅವರು ಬರೆದುಕೊಂಡಿದ್ದಾರೆ.
ರಘುರಾಮ್ ರಾಜನ್ ಅವರ ಈ ನಿರ್ಧಾರದಿಂದ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅಚ್ಚರಿ ವ್ಯಕ್ತಪಡಿಸಿದ್ದರೆ, ಅವರ ಟೀಕಾಕಾರರಲ್ಲಿ ಮೊದಲ ಸ್ಥಾನದಲ್ಲಿರುವ ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಭಾರತದ ಆರ್ಥಿಕ ಸ್ಥಿತಿಯನ್ನು ರಘುರಾಮ್ ರಾಜನ್ ದುರ್ಬಲಗೊಳಿಸುತ್ತಿದ್ದಾರೆ, ಅವರನ್ನು ಪದಚ್ಯುತಿಗೊಳಿಸಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಅವರು ಕೇಂದ್ರ ಸರಕಾರವನ್ನು ಒತ್ತಾಯಿಸುತ್ತ ಬಂದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಅವರನ್ನು ಮುಂದುವರಿಸಬೇಕೋ ಬಿಡಬೇಕೋ ಎಂಬ ಸಂಗತಿ ಚರ್ಚೆಯ ವಿಷಯವೇ ಆಗಬಾರದು ಎಂದು ಮಾಧ್ಯಮಗಳಿಗೆ ನರೇಂದ್ರ ಮೋದಿ ತಿರುಗೇಟು ನೀಡಿದ್ದರು.
ಇದರ ಜೊತೆಗೆ, ಮುಂದಿನ ಗವರ್ನರ್ ಯಾರಾಗಲಿದ್ದಾರೆ ಎಂಬ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಸದ್ಯದಲ್ಲಿಯೇ ಮುಂದಿನ ರಿಸರ್ವ್ ಬ್ಯಾಂಕ್ ಗವರ್ನರನ್ನು ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿಕೆ ನೀಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications