ಬಿಜೆಪಿ, ಆರೆಸ್ಸೆಸ್ ವಿರುದ್ಧ 10 ಪಟ್ಟು ಉತ್ಸಾಹದೊಂದಿಗೆ ಹೋರಾಡುತ್ತೇನೆ: ರಾಹುಲ್ ಗಾಂಧಿ
ಮುಂಬೈ, ಜುಲೈ 4: ರೆಸ್ಸೆಸ್ ಮತ್ತು ಬಿಜೆಪಿ ನಿಯಂತ್ರಣಕ್ಕೆ ಸಿಲುಕಿ ದೇಶ ಮತ್ತು ಜನರು ನಲುಗುವಂತಾಗುತ್ತಿದೆ. ತಮ್ಮ ಹೋರಾಟ ರಾಜಕೀಯವಾಗಿರದೆ, ಆರೆಸ್ಸೆಸ್ ಮತ್ತು ಬಿಜೆಪಿಯ ನಿಲುವುಗಳ ವಿರುದ್ಧವಾಗಿತ್ತು ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದ ಕಾಂಗ್ರೆಸ್ನ ನಿರ್ಗಮಿತ ಅಧ್ಯಕ್ಷ ರಾಹುಲ್ ಗಾಂಧಿ, ಮತ್ತಷ್ಟು ಪ್ರಬಲವಾಗಿ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧದ ಹೋರಾಟವನ್ನು ನಡೆಸುವುದಾಗಿ ಹೇಳಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಅರೆಸ್ಸೆಸ್ ಕೈವಾಡವಿದೆ ಎಂಬ ಹೇಳಿಕೆ ನೀಡಿದ್ದಕ್ಕೆ ಮಾನನಷ್ಟ ಪ್ರಕರಣ ಎದುರಿಸುತ್ತಿದ್ದ ರಾಹುಲ್ ಗಾಂಧಿ, ಮುಂಬೈನ ಸ್ಥಳೀಯ ನ್ಯಾಯಾಲಯಕ್ಕೆ ಗುರುವಾರ ಹಾಜರಾಗಿದ್ದರು. ಈ ಪ್ರಕರಣದಲ್ಲಿ ರಾಹುಲ್ ತಪ್ಪಿತಸ್ಥರಲ್ಲ ಎಂದು ನ್ಯಾಯಾಲಯ ಅವರನ್ನು ದೋಷಮುಕ್ತರನ್ನಾಗಿಸಿದೆ.
ನ್ಯಾಯಾಲಯದ ತೀರ್ಪಿನ ಬಳಿಕ ಮಾತನಾಡಿದ ರಾಹುಲ್, ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧದ ತಮ್ಮ ಸೈದ್ಧಾಂತಿಕ ಹೋರಾಟದಲ್ಲಿ ಇನ್ನು ಮುಂದೆ ಕಳೆದ ಐದು ವರ್ಷಕ್ಕಿಂತಲೂ ಹತ್ತು ಪಟ್ಟು ಹೆಚ್ಚು ಹುರುಪಿನೊಂದಿಗೆ ತೊಡಗಿಸಿಕೊಳ್ಳುವುದಾಗಿ ತಿಳಿಸಿದರು.
'ನಾನು ಬಡವರು, ರೈತರು ಮತ್ತು ಕಾರ್ಮಿಕರ ಜತೆಗಿದ್ದೇನೆ. ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧದ ಹೋರಾಟ ಮುಂದುವರಿಯಲಿದೆ' ಎಂದರು.

ಹತ್ತು ಪಟ್ಟು ಹೆಚ್ಚು ಹೋರಾಟ
ತಮ್ಮ ಹೋರಾಟವು ಸೈದ್ಧಾಂತಿಕ ಹೋರಾಟ ಎಂದು ಅವರು ಕರೆದಿದ್ದಾರೆ. 'ಕಳೆದ ಐದು ವರ್ಷಗಳಲ್ಲಿ ನಾನು ಮಾಡಿದ್ದಕ್ಕಿಂತಲೂ ಹತ್ತು ಪಟ್ಟು ಹೆಚ್ಚು ಉತ್ಸಾಹದೊಂದಿಗೆ ಅವರ ವಿರುದ್ಧ ಹೋರಾಟ ನಡೆಸಲಿದ್ದೇನೆ' ಎಂದು ಹೇಳಿದರು.
'ಆಕ್ರಮಣ ನಡೆಯುತ್ತಿದೆ. ನಾನು ಅದನ್ನು ಎಂಜಾಯ್ ಮಾಡುತ್ತಿದ್ದೇನೆ' ಎಂದ ಅವರು ತಮ್ಮ ಹೋರಾಟದ ಬಗ್ಗೆ ಹೆಚ್ಚೇನೂ ಹೇಳಲು ಹೋಗುವುದಿಲ್ಲ. ಹೇಳಬೇಕಿರುವುದ್ದನ್ನೆಲ್ಲ ಬುಧವಾರ ನಾಲ್ಕು ಪುಟಗಳ ರಾಜೀನಾಮೆ ಪತ್ರದಲ್ಲಿ ಸಾರ್ವಜನಿಕರಿಗೆ ತಿಳಿಸಿರುವುದಾಗಿ ಹೇಳಿದರು.

ಮಾನಹಾನಿ ಪ್ರಕರಣ
ಬಿಜೆಪಿ-ಆರೆಸ್ಸೆಸ್ ಸಿದ್ಧಾಂತಕ್ಕೂ ಗೌರಿ ಲಂಕೇಶ್ ಅವರ ಹತ್ಯೆಗೂ ನಂಟು ಬೆಸೆದಿದ್ದ ಕಾರಣಕ್ಕೆ ಆರೆಸ್ಸೆಸ್ ಕಾರ್ಯಕರ್ತ ಧ್ರುತಿಮಾನ್ ಜೋಶಿ ಎಂಬುವವರು 2017ರಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಸೀತಾರಾಮ್ ಯಚೂರಿ ಅವರ ವಿರುದ್ಧ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ರಾಹುಲ್ ತಪ್ಪಿತಸ್ಥರಲ್ಲ
ಮಾನಹಾನಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ರಾಹುಲ್ ತಪ್ಪಿತಸ್ಥರಲ್ಲ ಎಂದು ಆದೇಶಿಸಿ, ಶ್ಯೂರಿಟಿ ಪಡೆದು ರಾಹುಲ್ ಅವರನ್ನು ಬಿಡುಗಡೆ ಮಾಡಿದೆ. ಮಹಾತ್ಮಾ ಗಾಂಧಿ ಹತ್ಯೆ ಹಿಂದೆ ಆರ್.ಎಸ್.ಎಸ್ ಇದೆ ಎನ್ನುವ ಹೇಳಿಕೆಯನ್ನು ರಾಹುಲ್ ಗಾಂಧಿ ಮಾರ್ಚ್ 6, 2014ರಲ್ಲಿ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಭಿವಾಂಡಿ ನ್ಯಾಯಾಲಯದಲ್ಲಿ ಮತ್ತೊಂದು ದೂರಿನ ವಿಚಾರಣೆ ನಡೆಯುತ್ತಿದೆ.

ಆರೆಸ್ಸೆಸ್ ಅಪಾಯಕಾರಿ ಎಂದ ರಾಹುಲ್
ಈ ದೇಶದ ಸಂಸ್ಥೆಗಳನ್ನು ತನ್ನ ಹಿಡಿತಕ್ಕೆ ಪಡೆದುಕೊಳ್ಳುವ ಆರೆಸ್ಸೆಸ್ನ ಉದ್ದೇಶ ಈಗ ಪೂರ್ಣಗೊಂಡಿದೆ. ನಮ್ಮ ಪ್ರಜಾಪ್ರಭುತ್ವವು ಮೂಲಭೂತವಾಗಿ ದುರ್ಬಲವಾಗಿದೆ. ಈಗಿನಿಂದ ನಿಜವಾದ ಅಪಾಯ ಎದುರಾಗಲಿದೆ. ಭಾರತದ ಭವಿಷ್ಯದಲ್ಲಿ ಚುನಾವಣೆಗಳು ಮಾಯವಾಗಲಿದ್ದು, ಕೇವಲ ಆಚರಣೆಯಾಗಿ ಉಳಿಯಲಿವೆ.
ಆರೆಸ್ಸೆಸ್ ಅಧಿಕಾರವನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳುವುದು ಭಾರತದಲ್ಲಿ ಊಹಿಸಲು ಅಸಾಧ್ಯವಾದ ಮಟ್ಟದ ಹಿಂಸಾಚಾರ ಮತ್ತು ನೋವಿಗೆ ಎಡೆಮಾಡಿಕೊಡಲಿದೆ. ರೈತರು, ನಿರುದ್ಯೋಗಿ ಯುವಜನರು, ಮಹಿಳೆಯರು, ಬುಡಕಟ್ಟುಗಳು, ದಲಿತರು ಮತ್ತು ಅಲ್ಪಸಂಖ್ಯಾತರು ಅತಿ ಹೆಚ್ಚು ಸಂಕಷ್ಟ ಅನುಭವಿಸಲಿದ್ದಾರೆ. ಇದರ ಪರಿಣಾಮವಾಗಿ ನಮ್ಮ ದೇಶದ ಆರ್ಥಿಕತೆ ಮತ್ತು ಪ್ರತಿಷ್ಠೆ ನಾಶವಾಗಲಿದೆ. ಪ್ರಧಾನಿ ಅವರ ಗೆಲುವು ಅವರ ವಿರುದ್ಧದ ಭ್ರಷ್ಟಾಚಾರದ ಆರೋಪದಿಂದ ಮುಕ್ತಗೊಳಿಸಿದಂತೆ ಅಲ್ಲ. ಯಾವುದೇ ಹಣ ಅಥವಾ ಪಿತೂರಿಯು ಸತ್ಯದ ಬೆಳಕನ್ನು ಮುಚ್ಚಿಹಾಕಲಾರದು ಎಂದು ರಾಹುಲ್ ಗಾಂಧಿ ರಾಜೀನಾಮೆ ಪತ್ರದಲ್ಲಿ ಬರೆದಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications