ಮುಂಬೈ : ರೈಲ್ವೆ ಪಾದಚಾರಿ ಸೇತುವೆ ಕುಸಿತ, 4 ಸಾವು
ಮುಂಬೈ, ಮಾರ್ಚ್ 14 : ಮುಂಬೈನಲ್ಲಿ ರೈಲ್ವೆ ನಿಲ್ದಾಣದ ಪಾದಚಾರಿ ಸೇತುವೆ ಕುಸಿದುಬಿದ್ದಿದೆ. ಈ ಘಟನೆಯಲ್ಲಿ 34 ಜನರು ಗಾಯಗೊಂಡಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ.
ಗುರುವಾರ ರಾತ್ರಿ ಛತ್ರಪತಿ ಶಿವಾಜಿ ಟೆರ್ಮಿನಸ್ ರೈಲ್ವೆ ನಿಲ್ದಾಣದ ಹೊರಭಾಗದ ಪಾದಚಾರಿ ಸೇತುವೆ ಕುಸಿದುಬಿದ್ದಿದೆ. ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಭಂದಿ ರಕ್ಷಣಾ ಕಾರ್ಯಾಚಣೆ ನಡೆಸುತ್ತಿದ್ದಾರೆ.

ಆಜಾದ್ ಮೈದಾನ್ ಪೊಲೀಸ್ ಠಾಣೆ, ಟೈಮ್ಸ್ ಆಫ್ ಇಂಡಿಯಾ ಕಟ್ಟಡವನ್ನು ರೈಲ್ವೆ ನಿಲ್ದಾಣದೊಂದಿಗೆ ಈ ಸೇತುವೆ ಸಂಪರ್ಕ ಕಲ್ಪಿಸುತ್ತಿತ್ತು. ಗುರುವಾರ ರಾತ್ರಿ ಸೇತುವೆ ಕುಸಿದಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಸೇತುವೆ ಕುಸಿತದಿಂದಾಗಿ ರೈಲ್ವೆ ನಿಲ್ದಾಣದ ಹೊರಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬದಲಿ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸೆಂಟ್ ಜಾರ್ಜ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪಾದಚಾರಿ ಸೇತುವೆಯ ಬೀಮ್ಗಳು ಹಾಗೆ ಇದ್ದು ಕಾಂಕ್ರೀಟ್ ಭಾಗಗಳು ಮಾತ್ರ ಕುಸಿದು ರಸ್ತೆಗೆ ಬಿದ್ದಿವೆ. ಅವಶೇಷಗಳಡಿ 15ಕ್ಕೂ ಅಧಿಕ ಜನರು ಸಿಲುಕಿಹಾಕಿಕೊಂಡಿರುವ ಸಾಧ್ಯತೆ ಇದೆ. ಎನ್ಡಿಆರ್ಎಫ್ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
#WATCH Mumbai: A foot over bridge near Chhatrapati Shivaji Maharaj Terminus (CSMT) railway station has collapsed. Multiple injuries have been reported. pic.twitter.com/r43zS5eA0l
— ANI (@ANI) March 14, 2019
2018ರ ಜುಲೈ 4ರಂದು ಅಂಧೇರಿ ಪ್ರದೇಶದಲ್ಲಿ ಉಪನಗರ ರೈಲು ಮಾರ್ಗವನ್ನು ಸಂಪರ್ಕಿಸುವ ಪಾದಚಾರಿ ಸೇತುವೆ ಕುಸಿದು ಬಿದ್ದಿತ್ತು. ಈ ಅಪಘಾತದಲ್ಲಿ ಐವರು ಗಾಯಗೊಂಡಿದ್ದರು. 1971ರಲ್ಲಿ ನಿರ್ಮಿಸಿದ್ದ ಸೇತುವೆಯನ್ನು ಗೋಖಲೆ ಸೇತುವೆ ಎಂದು ಕರೆಯಲಾಗುತ್ತಿತ್ತು.
ಕಾಲ್ತುಳಿತದ ನೆನಪು : 2017ರ ಸೆಪ್ಟೆಂಬರ್ 29ರಂದು ಎಲ್ಫಿನ್ಸ್ಟನ್ ರೋಡ್ ರೈಲ್ವೆ ಸೇತುವೆಯಲ್ಲಿ ಕಾಲ್ತುಳಿತ ಉಂಟಾಗಿ 22 ಜನರು ಮೃತಪಟ್ಟಿದ್ದರು. ಸೇತುವೆ ಕುಸಿದಿದೆ ಎಂಬ ವದಂತಿಯೇ ಕಾಲ್ತುಳಿತಕ್ಕೆ ಕಾರಣವಾಗಿತ್ತು.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications