ಇಡಿ ವಿಚಾರಣೆಗೆ ರಾಜ್ ಠಾಕ್ರೆ ಹಾಜರು, ಮುಂಬೈನಲ್ಲಿ ಕರ್ಫ್ಯೂ
ಮುಂಬೈ, ಆಗಸ್ಟ್ 22: ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಪಕ್ಷದ ಮುಖ್ಯಸ್ಥ ರಾಜ್ ಠಾಕ್ರೆ ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾದರು. ಅವರೊಂದಿಗೆ ಪತ್ನಿ ಶರ್ಮಿಳಾ ಮತ್ತು ಮಗ ಅಮಿತ್, ಮಗಳು ಊರ್ವಶಿ ಸಹ ವಿಚಾರಣೆಗೆ ಹಾಜರಾದರು.
ರಾಜ್ ಠಾಕ್ರೆ ಅವರು ವಿಚಾರಣೆಗೆ ಹಾಜರಾಗಲು ಬರುವ ಮುನ್ನವೇ ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನಿಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಕೆಲವು ಎಂಎನ್ಎಸ್ ಮುಖಂಡರನ್ನು ಸಹ ಈಗಾಗಲೇ ಬಂಧಿಸಲಾಗಿದೆ.
ಐಎಲ್,ಎಫ್ಎಸ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿಯು ರಾಜ್ ಠಾಕ್ರೆ ಅವರಿಗೆ ಸಮನ್ಸ್ ನೀಡಿತ್ತು. ಇದನ್ನು ವಿರೋಧಿಸಿ ಎಂಎನ್ಎಸ್ ಪಕ್ಷದ ಕಾರ್ಯಕರ್ತರು ಮಹಾರಾಷ್ಟ್ರ ಬಂದ್ಗೆ ಕರೆ ನೀಡಿದ್ದರು. ಆದರೆ ರಾಜ್ ಠಾಕ್ರೆ ಮನವಿ ಮಾಡಿದ ನಂತರ ಬಂದ್ ವಾಪಸ್ ಪಡೆಯಲಾಗಿದೆ.

ಐಎಲ್,ಎಫ್ಎಸ್ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಹಾರಾಷ್ಟ್ರದ ಮಾಜಿ ಸಿಎಂ ಮಹೇಶ್ ಜೋಷಿ ಮಗ ಉಮೇಶ್ ಜೋಷಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. 2005 ರಲ್ಲಿ ಉಮೇಶ್ ಜೋಷಿ, ರಾಜ್ ಠಾಕ್ರೆ ಮತ್ತು ರಾಜನ್ ಶಿರೋಡ್ಕರ್ ಅವರುಗಳು ಒಟ್ಟಾಗಿ ಐಎಲ್ ಆಂಡ್ ಎಫ್ಎಸ್ ಸಂಸ್ಥೆಯ ಜೊತೆ ಸೇರಿ 421 ಕೋಟಿ ನೀಡಿ ಸ್ಥಳವೊಂದನ್ನು ಖರೀದಿಸಿ ಅಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಿದರು. 225 ಕೋಟಿ ಹಣವನ್ನು ಈ ಯೋಜನೆಗೆ ಐಎಲ್ ಆಂಡ್ ಎಫ್ಎಸ್ ಹೂಡಿಕೆ ಮಾಡಿತ್ತು.
2008 ರಲ್ಲಿ ಐಎಲ್ ಆಂಡ್ ಎಫ್ಎಸ್ ಸಂಸ್ಥೆಯು ತನ್ನ ಪಾಲಿನ ಶೇರುಗಳನ್ನು 90 ಕೋಟಿಗೆ ಬಿಕರಿಗಿಟ್ಟು ನಷ್ಟವನ್ನು ತೋರಿಸಿತು. ಅದೇ ವರ್ಷ ರಾಜ್ ಠಾಕ್ರೆ ಸಹ ತಮ್ಮ ಪಾಲಿನ ಶೇರುಗಳನ್ನು ಮಾರಾಟ ಮಾಡಿದರು. ಆದರೆ ಒಕ್ಕೂಟವು ಅವರು ಲಾಭ ಮಾಡಿದ್ದಾರೆ ಎಂದು ಆರೋಪ ಮಾಡಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications