ಇಡಿ ವಿಚಾರಣೆಗೆ ರಾಜ್ ಠಾಕ್ರೆ ಹಾಜರು, ಮುಂಬೈನಲ್ಲಿ ಕರ್ಫ್ಯೂ
ಮುಂಬೈ, ಆಗಸ್ಟ್ 22: ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಪಕ್ಷದ ಮುಖ್ಯಸ್ಥ ರಾಜ್ ಠಾಕ್ರೆ ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾದರು. ಅವರೊಂದಿಗೆ ಪತ್ನಿ ಶರ್ಮಿಳಾ ಮತ್ತು ಮಗ ಅಮಿತ್, ಮಗಳು ಊರ್ವಶಿ ಸಹ ವಿಚಾರಣೆಗೆ ಹಾಜರಾದರು.
ರಾಜ್ ಠಾಕ್ರೆ ಅವರು ವಿಚಾರಣೆಗೆ ಹಾಜರಾಗಲು ಬರುವ ಮುನ್ನವೇ ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನಿಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಕೆಲವು ಎಂಎನ್ಎಸ್ ಮುಖಂಡರನ್ನು ಸಹ ಈಗಾಗಲೇ ಬಂಧಿಸಲಾಗಿದೆ.
ಐಎಲ್,ಎಫ್ಎಸ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿಯು ರಾಜ್ ಠಾಕ್ರೆ ಅವರಿಗೆ ಸಮನ್ಸ್ ನೀಡಿತ್ತು. ಇದನ್ನು ವಿರೋಧಿಸಿ ಎಂಎನ್ಎಸ್ ಪಕ್ಷದ ಕಾರ್ಯಕರ್ತರು ಮಹಾರಾಷ್ಟ್ರ ಬಂದ್ಗೆ ಕರೆ ನೀಡಿದ್ದರು. ಆದರೆ ರಾಜ್ ಠಾಕ್ರೆ ಮನವಿ ಮಾಡಿದ ನಂತರ ಬಂದ್ ವಾಪಸ್ ಪಡೆಯಲಾಗಿದೆ.

ಐಎಲ್,ಎಫ್ಎಸ್ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಹಾರಾಷ್ಟ್ರದ ಮಾಜಿ ಸಿಎಂ ಮಹೇಶ್ ಜೋಷಿ ಮಗ ಉಮೇಶ್ ಜೋಷಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. 2005 ರಲ್ಲಿ ಉಮೇಶ್ ಜೋಷಿ, ರಾಜ್ ಠಾಕ್ರೆ ಮತ್ತು ರಾಜನ್ ಶಿರೋಡ್ಕರ್ ಅವರುಗಳು ಒಟ್ಟಾಗಿ ಐಎಲ್ ಆಂಡ್ ಎಫ್ಎಸ್ ಸಂಸ್ಥೆಯ ಜೊತೆ ಸೇರಿ 421 ಕೋಟಿ ನೀಡಿ ಸ್ಥಳವೊಂದನ್ನು ಖರೀದಿಸಿ ಅಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಿದರು. 225 ಕೋಟಿ ಹಣವನ್ನು ಈ ಯೋಜನೆಗೆ ಐಎಲ್ ಆಂಡ್ ಎಫ್ಎಸ್ ಹೂಡಿಕೆ ಮಾಡಿತ್ತು.
2008 ರಲ್ಲಿ ಐಎಲ್ ಆಂಡ್ ಎಫ್ಎಸ್ ಸಂಸ್ಥೆಯು ತನ್ನ ಪಾಲಿನ ಶೇರುಗಳನ್ನು 90 ಕೋಟಿಗೆ ಬಿಕರಿಗಿಟ್ಟು ನಷ್ಟವನ್ನು ತೋರಿಸಿತು. ಅದೇ ವರ್ಷ ರಾಜ್ ಠಾಕ್ರೆ ಸಹ ತಮ್ಮ ಪಾಲಿನ ಶೇರುಗಳನ್ನು ಮಾರಾಟ ಮಾಡಿದರು. ಆದರೆ ಒಕ್ಕೂಟವು ಅವರು ಲಾಭ ಮಾಡಿದ್ದಾರೆ ಎಂದು ಆರೋಪ ಮಾಡಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications