ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಾಲಿವುಡ್ ನಟಿ
ಮುಂಬೈ, ಮಾ 28: ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ಈಗ ಮತ್ತೊಂದು ಸುದ್ದಿ ಮಾಡಿದ್ದಾರೆ. ಈ ಬಾರಿ ಏನಪ್ಪಾಂದ್ರೆ, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಮುಂಬೈ ಆಗ್ನೇಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದೇನೆ. ಭಾರತದಲ್ಲಿ ಮಹಿಳೆಯರಿಗೆ ಸುರಕ್ಷಿತೆ ಅನ್ನುವುದೇ ಇಲ್ಲ. ಅದರಲ್ಲೂ ಪ್ರಮುಖವಾಗಿ ಮೆಟ್ರೋ ನಗರಗಳಲ್ಲಿ ಮಹಿಳೆಯರ ಸುರಕ್ಷಿತೆಯ ಬಗ್ಗೆ ಹೆಚ್ಚಿನ ಒತ್ತು ನೀಡಲು ಚುನಾವಣಾ ಕಣಕ್ಕೆ ಧುಮುಕುತ್ತಿದ್ದೇನೆಂದು ರಾಖಿ ಹೇಳಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಪ್ರಮುಖ ರಾಜಕೀಯ ಪಕ್ಷವೊಂದು ನನಗೆ ಟಿಕೆಟ್ ನೀಡಲು ಮುಂದಾಗಿತ್ತು. ಆದರೆ ನಾನು ಅವರ ಆಫರ್ ಅನ್ನು ತಿರಸ್ಕರಿಸಿದೆ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿ ಜಯಗಳಿಸುತ್ತೇನೆ ಎಂದು ರಾಖಿ ಸಾವಂತ್ ವಿಶ್ವಾಸದ ಮಾತನ್ನಾಡಿದ್ದಾರೆ.
ಮುಂಬೈ ಆಗ್ನೇಯ ಕ್ಷೇತ್ರದಲ್ಲಿ ರಾಖಿ ಸಾವಂತ್ ಅವರು ಕಾಂಗ್ರೆಸ್ಸಿನ ಗುರುದಾಸ್ ಕಾಮತ್, ಶಿವಸೇನೆಯ ಗಜಾನನ್ ಕೀರ್ತೀಕರ್, ಮಹಾರಾಷ್ಟ್ರ ನವನಿರ್ಮಾಣ ವೇದಿಕೆಯ ಮಹೇಶ್ ಮಂಜ್ರೇಕರ್ ಮತ್ತು ಆಮ್ ಆದ್ಮಿ ಪಕ್ಷದ ಮಾಯಾಂಕ್ ಗಾಂಧಿ ಅವರನ್ನು ಎದುರಿಸಲಿದ್ದಾರೆ.
ಸಿನಿಮಾ ಅಸೋಸಿಯೇಷನ್ ಚುನಾವಣೆಗೂ ರಾಖಿ ಸ್ಪರ್ಧಿಸಲಿದ್ದಾರೆ. ಮುಂದೆ ಓದಿ,,

ಸಿನಿಮಾ ಅಸೋಸಿಯೇಷನ್
ಸಿನಿಮಾ ಮತ್ತು ಟಿವಿ ಆರ್ಟಿಸ್ಟ್ ಅಸೋಸಿಯೇಷನ್ (CINTAA) ಚುನಾವಣೆಗೆ ಕೂಡಾ ರಾಖಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಕಲಾವಿದರಿಗೆ ಸಿಗಬೇಕಾದ ಗೌರವ, ಕಲಾವಿದರ ಅಭಿವೃದ್ಧಿಗಾಗಿ ಶ್ರಮಿಸುವುದು ರಾಖಿ ಸಾವಂತ್ ಅಜೆಂಡಾ.

ಬಿಜೆಪಿಗೆ ಮತಹಾಕಿ ಅಂದಿದ್ದರು
ಈ ಹಿಂದೆ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದಾಗ ಬಿಜೆಪಿ ಕೈಹಿಡಿಯುವ ಸುಳಿವನ್ನು ರಾಖಿ ಸಾವಂತ್ ನೀಡಿದ್ದರು. ಬಿಜೆಪಿಗೆ ಮತ ನೀಡಿ, ಮೋದಿಯೇ ಪ್ರಧಾನಿ ಹುದ್ದೆಗೆ ಅತ್ಯಂತ ಸೂಕ್ತ ಆಯ್ಕೆ ಎಂದಿದ್ದರು.

ಬಿಜೆಪಿ ಕಚೇರಿಯಲ್ಲಿ ರಾಖಿ ಕಟ್ಟಿದ ಸಾವಂತ್
ದಿಢೀರನೇ ಬಿಜೆಪಿ ಕಚೇರಿಗೆ ಹಾಜರಾಗಿದ್ದ ಸಾವಂತ್, ರಾಜನಾಥ್ ಸಿಂಗ್ ಸಮಕ್ಷಮದಲ್ಲಿ ಅಲ್ಲಿದ್ದ ಮಾಜಿ ಸೈನಿಕರಿಗೆ ರಾಖಿ ಕಟ್ಟಿ ಸಂಭ್ರಮಿಸಿ ಎಲ್ಲರ ಜೊತೆ ಚಹಾ ಸೇವಿಸಿದ್ದರು.

ರಾಹುಲ್ ಮದುವೆಯಾಗಲು ಸಿದ್ದ
ರಾಹುಲ್ ಗಾಂಧಿ ಮದುವೆಯಾಗಲು ನಾನು ಸಿದ್ದ, ಆದರೆ ಒಂದು ಕಂಡಿಷನ್. ದೇಶದ ಪ್ರಧಾನಿ ಮಾತ್ರ ನರೇಂದ್ರ ಮೋದಿಯವರೇ ಆಗ ಬೇಕು ಎಂದು ರಾಖಿ ಸಾವಂತ್ ಹೇಳಿದ್ದರು.

ಕೇಜ್ರಿವಾಲ್ ಮೋಸ ಮಾಡಿದ್ರು
ದೆಹಲಿಯ ಜನತೆ ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿದರು. ಆದರೆ ಕೇಜ್ರಿವಾಲ್ ಅಧಿಕಾರ ನಡೆಸದೇ ಪಲಾಯನಗೈದರು ಎಂದು ರಾಖಿ ಲೇವಡಿ ಮಾಡಿದ್ದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications