ರಾಮಾಯಣದ 'ವಿಭೀಷಣ' ಮುಖೇಶ್ ಅಪಘಾತದಲ್ಲಿ ದುರ್ಮರಣ
ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ರಮಾನಂದ ಸಾಗರ್ ಅವರ ಜನಪ್ರಿಯ ಧಾರಾವಾಹಿ ರಾಮಾಯಣದಲ್ಲಿ ವಿಭೀಷಣ ಪಾತ್ರ ನಿರ್ವಹಿಸಿದ್ದ ನಟ ಮುಖೇಶ್ ರಾವಲ್ ಅವರ ಶವ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಕಿರುತೆರೆ, ಗುಜರಾತಿ ರಂಗಕರ್ಮಿಯಾಗಿ ಮುಖೇಶ್ ಹೆಸರು
ಮುಂಬೈ, ನವೆಂಬರ್ 17: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ರಮಾನಂದ ಸಾಗರ್ ಅವರ ಜನಪ್ರಿಯ ಧಾರಾವಾಹಿ ರಾಮಾಯಣದಲ್ಲಿ ವಿಭೀಷಣ ಪಾತ್ರ ನಿರ್ವಹಿಸಿದ್ದ ನಟ ಮುಖೇಶ್ ರಾವಲ್ ಅವರ ಶವ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಕಿರುತೆರೆ,
ಗುಜರಾತಿ ರಂಗಕರ್ಮಿಯಾಗಿ ಮುಖೇಶ್ ಹೆಸರು ಗಳಿಸಿದ್ದರು.
ಖಾಂಡಿವಿಲಿ ಪಶ್ಚಿಮ ಪ್ರದೇಶದಲ್ಲಿ ವಾಸವಾಗಿದ್ದ ರಾವಲ್, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ರಾಮಾಯಣ ಹೊರತಾಗಿ ಇವರು, ಗುಜರಾತಿ ಧಾರಾವಾಹಿ ಹಾಗೂ ಚಿತ್ರಗಳಲ್ಲಿ ನಟಿಸಿದ್ದರು. ಪ್ರಸ್ತುತ ಗುಜರಾತಿ ಟಿವಿ ಧಾರಾವಾಹಿ "ನಸ್ ನಸ್ ಮೈ ಖುನ್ನಾಸ್"ನಲ್ಲಿ ನಟಿಸುತ್ತಿದ್ದರು.

ಖಾಂಡಿವಿಲಿ ರೈಲು ನಿಲ್ದಾಣದ ಬಳಿ ಮಂಗಳವಾರ ಬೆಳಿಗ್ಗೆ ರಾವಲ್ ಶವ ಪತ್ತೆಯಾಗಿದೆ. ಆದರೆ, ಶವದ ಗುರುತು ಪತ್ತೆ ತಡವಾಗಿದೆ. ಶವ ಬಳಿ ಗುರುತು ಪತ್ತೆ ಹಚ್ಚಲು ಮೊಬೈಲ್ ಫೋನ್, ಪರ್ಸ್ ಯಾವುದು ಇರಲಿಲ್ಲ ಎಂದು ರೈಲ್ವೆ ಪೊಲೀಸರು ಹೇಳಿದ್ದಾರೆ. ರಾವತ್ (66) ರೈಲು ಹಳಿ ದಾಟುತ್ತಿದ್ದಾಗ ರೈಲು ಢಿಕ್ಕಿ ಹೊಡೆದು ಮೃತಪಟ್ಟಿರಬೇಕು ಎಂದು ಶಂಕೆ ವ್ಯಕ್ತವಾಗಿದೆ.
ಖಾಂಡಿವಿಲಿ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ಅವರಿಗೆ ವಿಷಯ ತಿಳಿದು ತಕ್ಷಣವೇ ಹಳಿ ಮೇಲೆ ಬಿದ್ದಿದ್ದ ಮುಖೇಶ್ ಅವರನ್ನುಆಸ್ಪತ್ರೆಗೆ ಸಾಗಿಸಿದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದರು.
ಬುಧವಾರ ಅವರ ಕುಟುಂಬದವರು ವಿವಿಧ ಆಸ್ಪತ್ರೆಗಳಲ್ಲಿ ಅವರ ಬಗ್ಗೆ ವಿಚಾರಣೆ ನಡೆಸಿತು. ಬಳಿಕ ಭಾವಚಿತ್ರದೊಂದಿಗೆ ಪೊಲೀಸ್ ಠಾಣೆಗಳಿಗೆ ತೆರಳಿದಾಗ, ರೈಲ್ವೆ ಪೊಲೀಸರ ಬಳಿ ವಿಚಾರಿಸುವಂತೆ ಪೊಲೀಸರು ಸೂಚಿಸಿದರು. ಬಳಿಕ ಅವರ ಮೃತದೇಹವನ್ನು ಅವರು ಧರಿಸಿದ್ದ ಬಟ್ಟೆಯ ಆಧಾರದಲ್ಲಿ ಪತ್ತೆ ಮಾಡಲಾಯಿತು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications