ರವಿ ಪೂಜಾರಿ ಗ್ಯಾಂಗ್ ಟಾರ್ಗೆಟ್ ಶಾರುಖ್ ಖಾನ್?
ಮುಂಬೈ, ನ.19 : ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಪಕ, ನಿರ್ದೇಶಕ ಮಹೇಶ್ ಭಟ್ ಹಾಗೂ ಅವರ ಇಡೀ ಕುಟುಂಬದ ನಾಶಕ್ಕೆ ಮೂಂದಾಗಿದ್ದ ಭೂಗತ ಪಾತಕಿಗಳು ಡಾನ್ ರವಿ ಪೂಜಾರಿ ಗ್ಯಾಂಗಿನವರು ಎಂದು ವಿಚಾರಣೆಯಿಂದ ತಿಳಿದು ಬಂದಿದೆ.
ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಪಾತಕಿಗಳ ಸಂಚು ವಿಫಲಗೊಳಿಸಿ ಎಲ್ಲಾ 13 ಮಂದಿಯನ್ನು ವಿಚಾರಣೆಗೊಳಪಡಿಸಿದ್ದರು. ಪೊಲೀಸರ ಮುಂದೆ ಸತ್ಯ ಹೊರ ಹಾಕಿದ್ದ ಪಾತಕಿಗಳು ಮಹೇಶ್ ಭಟ್ ಅಲ್ಲದೆ ಖ್ಯಾತ ಕೊರಿಯಾಗ್ರಾಫರ್ ಹಾಗೂ ನಿರ್ದೇಶಕಿ ಫರ್ಹಾ ಖಾನ್, ಶಾರುಖ್ ಖಾನ್ ಅವರ ರೆಡ್ ಚಿಲ್ಲಿಸ್ ಕಚೇರಿ ಮೇಲೆ ಕಣ್ಣಿಡುವಂತೆ ಸೂಚನೆ ಸಿಕ್ಕಿತ್ತು ಎಂದಿದ್ದಾರೆ.
ಕಳೆದ ಆಗಸ್ಟ್ ತಿಂಗಳಿನಲ್ಲಿ ಕಿಂಗ್ ಖಾನ್ ಶಾರುಖ್ ಅವರ ಗೆಳೆಯ ಚಿತ್ರ ನಿರ್ಮಾಪಕ ಕರೀಮ್ ಹಾಗೂ ಆಲಿ ಮೊರಾನಿ ಅವರ ಬಂಗಲೆಯ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಇದೇ ವೇಳೆಗೆ ಶಾರುಖ್ ಅವರ ರೆಡ್ ಚಿಲ್ಲೀಸ್ ಕಚೇರಿ ಮೇಲೆ ದಾಳಿ ವಿಫಲವಾಗಿತ್ತು. ಕಳೆದ 2 ತಿಂಗಳಿಂದ ನಿರ್ದೇಶಕ ಮಹೇಶ್ ಭಟ್ ಅವರ ಮನೆ ಹಾಗೂ ಕಚೇರಿ ಮೇಲೆ ಕಣ್ಣಿಟ್ಟಿದ್ದೆವು. ಅವರ ಮನೆಯಲ್ಲಿ ವಾಚ್ ಮನ್ ಕೆಲಸ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದು ವಿಫಲವಾಗಿತ್ತು.

ಹೀಗಾಗಿ ಶಾರುಖ್ ಖಾನ್, ಫರ್ಹಾಖಾನ್, ಮಹೇಶ್ ಭಟ್ ಸೇರಿದಂತೆ ಪ್ರಮುಖ ಬಾಲಿವುಡ್ ಗಣ್ಯರ ಕೊಲೆಗೆ ಸ್ಕೆಚ್ ರೆಡಿ ಮಾಡಿದ್ದೆವು, ಅದರೆ, ಖಾರ್ ಪ್ರದೇಶದಲ್ಲಿ ನಮ್ಮ ಚಲನವಲನದ ಬಗ್ಗೆ ಮಾಹಿತಿ ಸೋರಿಕೆಯಾಗಿದ್ದರಿಂದ ಸಿಕ್ಕಿಬಿದ್ದಿದ್ದೇವೆ ಎಂದು ಆರೋಪಿಗಳು ಹೇಳಿಕೆ ನೀಡಿದ್ದಾರೆ.
ಮುಂಬೈನ ಅಂಧೇರಿಯನ್ನು ಅಡ್ಡಾ ಮಾಡಿಕೊಂಡಿದ್ದ ಡಾನ್ ರವಿ ಪೂಜಾರಿ ಛೋಟಾರಾಜನ್ ಗ್ಯಾಂಗಿನ ಪ್ರಮುಖ ಪಂಟರ್, 90ರ ದಶಕದಲ್ಲೇ ದುಬೈಗೆ ಹಾರಿದ ರವಿ, ಮುಂಬೈನ ರಿಯಲ್ ಎಸ್ಟೇಟ್ ಹಾಗೂ ಹೋಟೆಲ್ ಮಾಲೀಕರನ್ನು ಬೆದರಿಸಿ ಹಣ ಗಳಿಸುತ್ತಿದ್ದ. ಆದರೆ, 2000 ಇಸವಿಯಲ್ಲಿ ದಾವೂದ್ ಇಬ್ರಾಹಿಂ ಗ್ಯಾಂಗ್ ರವಿ ಪೂಜಾರಿ ಹತ್ಯೆಗೆ ಯತ್ನ ನಡೆಸಿ ವಿಫಲವಾಗಿತ್ತು. [ಪಾತಕಿಗಳ ಸ್ಕೆಚ್ ಮಿಸ್, ಮಹೇಶ್ ಭಟ್ ಸುರಕ್ಷಿತ]
ನಂತರ ಅಲ್ಲಿಂದ ಆಸ್ಟ್ರೇಲಿಯಾಕ್ಕೆ ಹಾರಿದ ರವಿ ಪೂಜಾರಿ ಆಗಾಗ ಮಾಧ್ಯಮಗಳ ಜೊತೆ ಫೋನ್ ಕರೆ ಮೂಲಕ ಸಂಪರ್ಕಿಸುತ್ತಿದ್ದ. ದಾವೂದ್ ಇಬ್ರಾಹಿಂ ಹಾಗೂ ಛೋಟಾ ಶಕೀಲ್ ಅವರ ಆಪ್ತರು ಹಾಗೂ ಬೆಂಬಲಿಗರನ್ನು ಮುಗಿಸುವ ಕಾರ್ಯ ಕೈಗೊಂಡಿರುವುದಾಗಿ ಹೇಳುತ್ತಾ ಬಂದಿದ್ದಾನೆ.
ಸಹಾಯಕ ಪೊಲೀಸ್ ಆಯುಕ್ತ ಸುನೀಲ್ ದೇಶ್ ಮುಖ್ ಅವರ ತಂಡ ಪಾತಕಿಗಳ ವಿಚಾರಣೆ ಮುಂದುವರೆಸಿದ್ದು,ಇನ್ನಷ್ಟು ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications