'ಹನಿಮೂನ್ ವೇಳೆ ಸೆಕ್ಸ್ ನಿರಾಕರಣೆ ಕ್ರೌರ್ಯವಲ್ಲ'
ಮುಂಬೈ, ಮಾ.9: ಹನಿಮೂನ್ ವೇಳೆಯಲ್ಲಿ ನಿಮ್ಮ ಸಂಗಾತಿ ಸಂಭೋಗಕ್ಕೆ ನಿರಾಕರಿಸುವುದನ್ನು ಕ್ರೌರ್ಯ ಎಂದು ಪರಿಗಣಿಸಲಾಗದು ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದಂಪತಿಗಳ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ತೀರ್ಪನ್ನು ಬದಿಗೊತ್ತಿ ಈ ನಿರ್ಣಯವನ್ನು ಬಾಂಬೆ ಹೈಕೋರ್ಟ್ ನೀಡಿದೆ. ಅಷ್ಟೇ ಅಲ್ಲ, ಪತ್ನಿ ಒಮ್ಮೊಮ್ಮೆ ತನ್ನ ಕಚೇರಿಗೆ ಪ್ಯಾಂಟು, ಶರ್ಟು ತೊಟ್ಟು ಹೋಗುವುದಾಗಲೀ, ಅಥವಾ ಕಚೇರಿ ಕಾರ್ಯ ನಿಮಿತ್ತ ಬೇರೆ ಊರಿಗೆ ಪ್ರಯಾಣ ಮಾಡುವುದಾಗಲೀ ಯಾವುದು ಕ್ರೌರ್ಯ ಎನಿಸುವುದಿಲ್ಲ ಎಂದು ಕೋರ್ಟ್ ಹೇಳಿದೆ.
ದಂಪತಿಗಳ ವಿಚ್ಛೇದನ ಪ್ರಕರಣದ ವಿಚಾರಣೆ ವೇಳೆ ಉಚ್ಚನ್ಯಾಯಪೀಠದ ನ್ಯಾ. ವಿ.ಕೆ. ತಾಹಿಲ್ ರಮಣಿ ಮತ್ತು ನ್ಯಾ ಪಿ.ಎನ್. ದೇಶಮುಖ್ ಅವರು ಈ ಅಭಿಪ್ರಾಯಕ್ಕೆ ಬಂದಿದ್ದಾರೆ. ಗಂಡ ನೀಡಿದ ದೂರಿನ ಮೇರೆಗೆ 29 ವರ್ಷದ ಮಹಿಳೆ ವಿರುದ್ಧ ವಿಚ್ಛೇದನಕ್ಕೆ ಅನುಮತಿ ನೀಡಿದ್ದ ಕೆಳಗಿನ ಫ್ಯಾಮಿಲಿ ಕೋರ್ಟ್ ಆದೇಶವನ್ನು ಬಾಂಬೆ ಹೈಕೋರ್ಟ್ ತಳ್ಳಿಹಾಕಿದೆ. ಗಂಡ ಮತ್ತು ಹೆಂಡತಿ ಒಟ್ಟಿಗೆ ಬಾಳಲು ಸಾಕಷ್ಟು ಸಮಯಾವಕಾಶ ನೀಡದೇ ಬಹಳ ಬೇಗ ವಿಚ್ಛೇದನದ ತೀರ್ಮಾನಕ್ಕೆ ಬರುವುದು ಸಮಂಜಸವಲ್ಲ ಎಂದೂ ಕೂಡಾ ನ್ಯಾಯಾಲಯ ತಿಳಿ ಹೇಳಿದೆ.

ಪ್ರಕರಣದ ಹಿನ್ನೆಲೆ: 2009ರಲ್ಲಿ ಮದುವೆಯಾದ ನವದಂಪತಿ ಮಧುಚಂದ್ರಕ್ಕಾಗಿ ಮಹಾಬಲೇಶ್ವರ ತಾಣಕ್ಕೆ ಹೋಗಿದ್ದರು. ಆಗ, ಗಂಡ ಲೈಂಗಿಕ ಕ್ರಿಯೆಗೆ ಯತ್ನಿಸಿದ್ದಾನೆ. ಆದರೆ, ಪತ್ನಿ ಅದಕ್ಕೊಪ್ಪಲಿಲ್ಲ. ಇದರಿಂದ ಸಿಟ್ಟಿಗೆದ್ದ ಗಂಡ ಪ್ರಕರಣವನ್ನು ಕೋರ್ಟ್'ಗೆ ಎಳೆದ. ತನಗೆ ಸೆಕ್ಸ್ ನಿರಾಕರಿಸಿದ ಹೆಂಡತಿ ಮಾಡಿದ್ದು ಕ್ರೌರ್ಯದ ಕೆಲಸ ಎಂದು ವಾದಿಸಿದ.
ಮಹಿಳೆಯ ವಕೀಲರ ಪ್ರಕಾರ, ಹನಿಮೂನ್ ವೇಳೆ ಆಕೆ ಮೂರ್ನಾಲ್ಕು ದಿನ ಋತುಸ್ರಾವದಿಂದ ಬಾಧಿತಳಾಗಿದ್ದಳು. ಆಗಷ್ಟೇ ಆಕೆ ಗಂಡನೊಂದಿಗೆ ಸೆಕ್ಸ್ ಮಾಡಲು ಒಪ್ಪಲಿಲ್ಲವಂತೆ. ಹೀಗಾಗಿ, ಈಕೆ ಮಾಡಿದ್ದು ಸ್ವಲ್ಪವೂ ಕ್ರೌರ್ಯವಲ್ಲ. ಅಷ್ಟೇ ಅಲ್ಲ, ಆಕೆಯ ಪ್ರತಿಕ್ರಿಯೆ ತೀರಾ ಸಹಜವೇ ಆಗಿತ್ತು ಎಂದು ಮಹಿಳೆಯ ವಕೀಲರು ಮಾಡಿದ್ದ ವಾದವನ್ನ ಮುಂಬೈ ಹೈಕೋರ್ಟ್ ಪುರಸ್ಕರಿಸಿದೆ. ಈ ಮೂಲಕ ಡಿಸೆಂಬರ್ 2012ರಲ್ಲಿ ಕೌಟುಂಬಿಕ ನ್ಯಾಯಾಲಯ ನೀಡಿದ್ದ ವಿಚ್ಚೇದನ ಮಂಜೂರು ಆದೇಶವನ್ನು ತಳ್ಳಿ ಹಾಕಿರುವ ಹೈಕೋರ್ಟ್ ಮೇಲ್ಮನವಿ ಸಲ್ಲಿಸುವ ಅವಕಾಶವನ್ನು ಗಂಡನಿಗೆ ಒದಗಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications