ಅಯ್ಯೋ ವಿಧಿಯೇ! ನಡೆದು ನಡೆದು ಸುಸ್ತಾಗಿ ರೈಲು ಹಳಿ ಮೇಲೆ ಮಲಗಿದ್ದರು
ಔರಂಗಾಬಾದ್, ಮೇ 8: ಮಹಾರಾಷ್ಟ್ರದಲ್ಲಿ ಇಂದು ಬೆಳಿಗ್ಗೆ ನಡೆದ ರೈಲು ಅಪಘಾತದ ಬಗ್ಗೆ ಇಡೀ ದೇಶವೇ ಮರುಕ ಪಡುತ್ತಿದೆ.
ಲಾಕ್ಡೌನ್ ನಲ್ಲಿ ಸಿಲುಕಿ ತಮ್ಮ ಊರುಗಳಿಗೆ ಛತ್ತೀಸ್ ಗಢದಿಂದ ಗುರುವಾರ ಮಹಾರಾಷ್ಟ್ರದ ಕಡೆ ಹೊರಟಿದ್ದ ವಲಸೆ ಕಾರ್ಮಿಕರು ಔರಂಗಾಬಾದ್ ಜಾಲ್ನಾ ನಡುವಿನ ರೈಲು ಹಳಿಯಲ್ಲಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. 16 ಕಾರ್ಮಿಕರು ಮೃತಪಟ್ಟಿದ್ದು, 3 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಲಾಕ್ಡೌನ್ ಪರಿಣಾಮವಾಗಿ ಊರಿಗೆ ತೆರಳಲು ಕಾರ್ಮಿಕರು ರೈಲ್ವೆ ಹಳಿಯಗುಂಟ ನಡೆದುಕೊಂಡು ಹೊರಟಿದ್ದರು.

ನಡೆದು ನಡೆದು ಸುಸ್ತಾಗಿ ಹಳಿ ಮೇಲೆ ಮಲಗಿದ್ದರು
ಛತ್ತೀಸ್ ಗಢನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮೃತರು ಲಾಕ್ಡೌನ್ ನಿಂದಾಗಿ ತಮ್ಮ ಊರುಗಳಿಗೆ ತಲುಪಲಾಗದೇ ತೊಂದರೆಗೊಳಗಾಗಿದ್ದರು. ರಸ್ತೆಯ ಮೂಲಕ ಹೊರಟರೆ ಕೋವಿಡ್ ಹಿನ್ನೆಲೆಯಲ್ಲಿ ಪೊಲೀಸರು ತಮ್ಮನ್ನು ಬಿಡುವುದಿಲ್ಲ ಎಂದು ತಿಳಿದು ಕಾರ್ಮಿಕರು ರೈಲು ಹಳಿಯ ಮೂಲಕ ಊರು ತಲುಪುವ ವಿಚಾರ ಮಾಡಿದ್ದಾರೆ. ರೈಲು ಹಳಿಗುಂಟ ನಡೆದು ನಡೆದು ಸುಸ್ತಾಗಿ ಔರಂಗಾಬಾದ್ ಜಾಲ್ನಾ ರೈಲು ಹಳಿಯ ಮೇಲೆಯೇ ನಿದ್ರೆಗೆ ಜಾರಿದ್ದಾರೆ. ಔರಂಗಾಬಾದ್ ಕಡೆಯಿಂದ ಬಂದ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರದಿದೆ. ಇದರಿಂದ ಸ್ಥಳದಲ್ಲೇ 14 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಔರಂಗಾಬಾದ್ ರೈಲ್ವೆ ಪೊಲೀಸ್ ತಿಳಿಸಿದ್ದಾರೆ.

ಕಾರ್ಮಿಕರನ್ನು ಗಮನಿಸಿದ್ದ ರೈಲು ಚಾಲಕ
ರೈಲು ಹಳಿಯ ಮೇಲೆ ಯಾರೋ ಇರುವುದನ್ನು ನೋಡಿದ ಗೂಡ್ಸ್ರೈಲು ಚಾಲಕ ರೈಲನ್ನು ನಿಲ್ಲಿಸಲು ಪ್ರಯತ್ನ ಪಟ್ಟಿದ್ದಾನೆ. ಆದರೆ, ವೇಗದಲ್ಲಿ ರೈಲು ಓಡುತ್ತಿದ್ದರಿಂದ ಕಾರ್ಮಿಕರ ಪ್ರಾಣ ಉಳಿಸಲು ಆಗಲಿಲ್ಲ ಎಂದು ರೈಲು ಚಾಲಕ ಔರಂಗಾಬಾದ್ ರೈಲ್ವೆ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

ಪ್ರಧಾನಿ ನರೇಂದ್ರ ಮೋದಿ ಕಂಬನಿ
ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾರ್ಮಿಕರ ಸಾವಿನಿಂದ ತೀವ್ರ ನೋವಾಗಿದೆ ಎಂದಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳಲು ರೈಲ್ವೆ ಸಚಿವಪಿಯೂಷ್ ಗೋಯಲ್ ಅವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

ಔರಂಗಾಬಾದ್ ಜಿಲ್ಲೆಯವರು
ಮೃತಪಟ್ಟ ಕಾರ್ಮಿಕರು ಛತ್ತೀಸ್ ಗಢದಿಂದ 47 ಕಿಮೀ ನಡೆದಿದ್ದರು. ಮೃತರೆಲ್ಲರೂ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯವರು ಎಂದು ವರದಿಗಳು ತಿಳಿಸಿವೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications