ದಾವೂದ್ ಕರೆ ಸ್ವೀಕರಿಸಿದ ಮಹಾರಾಷ್ಟ್ರದ ರಾಜಕಾರಣಿಗೆ ಯಾರು?
ಮುಂಬೈ, ಏಪ್ರಿಲ್ 27: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರು ಕರಾಚಿಯಲ್ಲಿ ನೆಲೆಸಿ ಅಲ್ಲಿಂದ ಮಹಾರಾಷ್ಟ್ರದ ಕೆಲ ರಾಜಕಾರಣಿಗಳು, ಸೆಲೆಬ್ರಿಟಿಗಳಿಗೆ ಕರೆ ಮಾಡುತ್ತಿರುವ ಬಗ್ಗೆ ಮಾಹಿತಿ ಹೊರಬಂದಿದೆ.
ದಾವೂದ್ ನೆಲೆಸಿರುವ ಮನೆ ಹಾಗೂ ಮುಂಬೈನಲ್ಲಿರುವ ಆತನ ಕುಟುಂಬಸ್ಥರ ನಡುವಿನ ಫೋನ್ ಕರೆ ವಿವರಗಳನ್ನು ಕಲೆ ಹಾಕುತ್ತಿರುವ ತನಿಖಾ ಸಂಸ್ಥೆಗೆ ಈ ವಿವರ ತಿಳಿದು ಬಂದಿದೆ.ಮಹಾರಾಷ್ಟ್ರದ ರಾಜಕಾರಣಿಗಳೊಂದಿಗೆ ನಿರಂತರವಾಗಿ ದಾವೂದ್ ಸಂಪರ್ಕದಲ್ಲಿದ್ದಾನೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ದಾವೂದ್ ಕುಟುಂಬಸ್ಥರು ಸಹ ಭಾರತದಲ್ಲಿರುವ ಹಲವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ಗುಜರಾತಿನ ವಡೋದರಾ ಮೂಲದ ಹ್ಯಾಕರ್ ಮನೀಷ್ ಭಾಂಗ್ಲೆ ಮತ್ತು ಅವರ ಸ್ನೇಹಿತ ಜಯೇಶ್ ಶಾ ಮೊದಲಿಗೆ ವಿಷಯ ಹೊರ ಹಾಕಿದ್ದರು. ಪಾಕಿಸ್ತಾನ ಟೆಲಿಕಾಂ ಕಂಪನಿಯ ವೆಬ್ಸೈಟ್ ಹ್ಯಾಕ್ ಮಾಡಿದಾಗ ಈ ಮಾಹಿತಿ ಸಿಕ್ಕಿತ್ತು.
ಕರಾಚಿಯಲ್ಲಿರುವ ದಾವೂದ್ ಮನೆಗೆ 4 ಸ್ಥಿರ ದೂರವಾಣಿ ಸಂಪರ್ಕ ಪಡೆಯಲಾಗಿದೆ. ಸೆಪ್ಟೆಂಬರ್ 5, 2015 ರಿಂದ ಏಪ್ರಿಲ್ 5, 2016ರ ತನಕದ ಕರೆ ವಿವರಗಳನ್ನು ಪಡೆಯಲಾಗಿದೆ. ಕರಾಚಿ ಫೋನ್ ಸಂಪರ್ಕ ದಾವೂದ್ ಮಡದಿ ಮೆಹಜಬೀನ್ ಶೇಖ್ ಹೆಸರಿನಲ್ಲಿ ಪಡೆಯಲಾಗಿದೆ. -021-3587**19, -021-3587**39, -021-3587**99, -021-3587**99 ಎಂದು ತಿಳಿದು ಬಂದಿದ್ದು ಇದನ್ನೂ ಭಾರತದ ಗುಪ್ತಚರ ಸಂಸ್ಥೆಯ ಹಿರಿಯ ಅಧಿಕಾರಿಗಳೂ ಸಹ ದೃಢಪಡಿಸಿದ್ದಾರೆ.
ಪಾಕಿಸ್ತಾನದ ಸಂಖ್ಯೆಗಳಿಂದ ಭಾರತದಲ್ಲಿರುವ ದೂರವಾಣಿ ಸಂಖ್ಯೆಗಳಿಗೆ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿರುವ 4 ನಂಬರ್ಗಳಿಗೆ ಸತತವಾಗಿ ಕರೆ ಮಾಡಲಾಗಿದೆ. ಆದರೆ, ಮಹಾರಾಷ್ಟ್ರದ ಯಾವ ರಾಜಕಾರಣಿಗಳಿಗೆ ಕರೆ ಮಾಡಲಾಗಿತ್ತು ಎಂಬ ವಿಷಯವನ್ನು ಮಾಧ್ಯಮ ಸಂಸ್ಥೆ ಇನ್ನೂ ಬಹಿರಂಗ ಪಡಿಸಿಲ್ಲ. (ಒನ್ ಇಂಡಿಯಾ ಸುದ್ದಿ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications