ರಾಹುಲ್ ಗಾಂಧಿಗೆ ಮಾತಿನ ಪೆಟ್ಟು ಕೊಟ್ಟ ಬಾಲಿವುಡ್ ನಟ ರಿಷಿ
ಮುಂಬೈ, ಸೆಪ್ಟೆಂಬರ್ 13: ದೇಶದ ಪ್ರತಿಯೊಂದು ರಂಗದಲ್ಲಿ ವಂಶ ಪಾರಂಪರ್ಯ ಆಡಳಿತಗಳು, ಅಧಿಕಾರಗಳು ಚಾಲ್ತಿಯಲ್ಲಿವೆ ಎಂದು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ತೀವ್ರವಾಗಿ ಟೀಕಿಸಿದ್ದಾರೆ.
ಸುಮಾರು 106 ವರ್ಷಗಳ ಭಾರತೀಯ ಸಿನಿಮಾದಲ್ಲಿ ಕಪೂರ್ ವಂಶದಿಂದಾದ ಸೇವೆಯೇ ಸುಮಾರು 90 ವರ್ಷಗಳಷ್ಟಿದೆ. ದೇವರ ದಯೆಯಿಂದ ಕಪೂರ್ ವಂಶ ತನ್ನ ನಾಲ್ಕನೇ ತಲೆಮಾರಿನ ಕುಡಿಯೂ ಬೆಳ್ಳಿ ತೆರೆಯಲ್ಲಿ ನಟಿಸುವುದನ್ನು ನೋಡಿದೆ.

ಪೃಥ್ವಿರಾಜ್ ಕಪೂರ್, ರಾಜ್ ಕಪೂರ್, ರಣಧೀರ್ ಕಪೂರ್ ಹಾಗೂ ರಣಬೀರ್ ಕಪೂರ್ - ಕಪೂರ್ ಕುಟುಂಬದ ನಾಲ್ಕು ತಲೆಮಾರುಗಳ ನಟರಾಗಿದ್ದಾರೆ. ಕಪೂರ್ ವಂಶಸ್ಥರಂತೆಯೇ ಉಳಿದ ಕುಟುಂಬಗಳಲ್ಲೂ ಅವರವರ ಮಕ್ಕಳು, ಮೊಮ್ಮಕ್ಕಳು ಚಿತ್ರನಟರಾಗಿ ಬೆಳೆದಿದ್ದಾರೆ.
ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ನಾಲ್ಕೂ ತಲೆಮಾರುಗಳ ನಟರು ಜನರ ಪ್ರೀತಿ, ಅಭಿಮಾನ, ಆಶೀರ್ವಾದಗಳಿಂದ ಮಾತ್ರ ಗುರುತಿಸಲ್ಪಟ್ಟವರೇ ವಿನಃ ಯಾರೋ ಕಟ್ಟಿದ ಸಾಮ್ರಾಜ್ಯದಲ್ಲಿ ವಿರಾಜಮಾನರಾದವರಲ್ಲ.
Rahul Gandhi.In the 106 years of Indian cinema of India, Kapoor's contribution is 90 years. And each generation is chosen by public on merit
— Rishi Kapoor (@chintskap) September 12, 2017
ವಂಶಪಾರಂಪರ್ಯದ ಬಗ್ಗೆ ಮಾತನಾಡುವಾಗ ಅದಕ್ಕೊಂದು ಸಾಧನೆಯ ಬಣ್ಣವಿರಬೇಕು. ಸುಮ್ಮನೇ ವಂಶಪಾರಂಪರ್ಯವಿದೆ ಎಂದು ಏನನ್ನೋ ಹೇಳುವುದಲ್ಲ.
By God's grace we are in 4 generations.Prithviraj Kapoor.Raj Kapoor.Randhir Kapoor.Ranbir Kapoor-Males.Besides all others. You see otherwise
— Rishi Kapoor (@chintskap) September 12, 2017
ಹಾಗಾಗಿ, ವಂಶ ಪಾರಂಪರ್ಯತೆ ಬಗ್ಗೆ ಸುಮ್ಮನೇ ಇಂಥ ಬಾಲಿಶವಾದ ಭಾಷಣ ಮಾಡುವುದನ್ನು ಬಿಟ್ಟು ಕಠಿಣ ಪರಿಶ್ರಮ ಪಟ್ಟು ಜನರ ಪ್ರೀತಿ, ವಿಶ್ವಾಸ ಗಳಿಸಿರಿ ಎಂದು ರಿಷಿ ಕಪೂರ್ ಕಿಡಿ ಕಾರಿದ್ದಾರೆ.
So don't bullshit people on "Dynasty" You have to earn people's respect and love through hard work not zabardasti and gundagardi.
— Rishi Kapoor (@chintskap) September 12, 2017
ಮಂಗಳವಾರ (ಸೆ. 12), ಬರ್ಕ್ ಲೀಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ 'ವಂಶ ಪಾರಂಪರ್ಯ ರಾಜಕಾರಣ' ಎಂಬ ವಿಷಯದ ಬಗ್ಗೆ ಪ್ರವಚನ ನೀಡಿದ್ದ ರಾಹುಲ್ ಗಾಂಧಿ, ''ವಂಶ ಪಾರಂಪರ್ಯತೆ ಎಂಬುದು ರಾಜಕೀಯ ಮಾತ್ರವಲ್ಲದೆ ಎಲ್ಲಾ ರಂಗಗಳಲ್ಲೂ ಇದೆ. ಭಾರತದ ವಾಣಿಜ್ಯ ಕ್ಷೇತ್ರದಲ್ಲಿ ಅಂಬಾನಿ ಪುತ್ರರು (ಮುಖೇಶ್ ಹಾಗೂ ಅನಿಲ್), ತಮಿಳುನಾಡು ರಾಜಕೀಯದಲ್ಲಿ ಕರುಣಾನಿಧಿ ಪುತ್ರ ಸ್ಟಾಲಿನ್, ಉತ್ತರ ಪ್ರದೇಶದಲ್ಲಿ ಮುಲಾಯಂ ಪುತ್ರ ಅಖಿಲೇಶ್, ಸಿನಿಮಾ ರಂಗದಲ್ಲಿ ಅಮಿತಾಭ್ ಬಚ್ಚನ್ ಪುತ್ರ ಅಭಿಷೇಕ್ ಬಚ್ಚನ್... ಹೀಗೆ ಎಲ್ಲವೂ ವಂಶಪಾರಂಪರ್ಯವಾಗಿ ಮುನ್ನಡೆಯುತ್ತಿದೆ ಎಂದಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications