ರಾಮ ಮಂದಿರ ನಿರ್ಮಾಣದಿಂದ ಬಡವರ ಹೊಟ್ಟೆ ತುಂಬುತ್ತಾ ಎನ್ನುವ ಪ್ರಶ್ನೆಗೆ RSS ಮುಖ್ಯಸ್ಥರು ಕೊಟ್ಟ ಉತ್ತರ
ಮುಂಬೈ, ಜ 28: ಅಸಂಖ್ಯಾತ ಹಿಂದೂಗಳ ಕನಸಿನ, ಅಯೋಧ್ಯೆಯಲ್ಲಿನ ರಾಮ ಮಂದಿರ ನಿರ್ಮಾಣ ಸಂಬಂಧ ನಿಧಿ ಸಂಗ್ರಹ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟಿನ ಸದಸ್ಯರೂ ಆಗಿರುವ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು, ಸಚಿವರುಗಳು, ರಾಜಕೀಯ ಮುಖಂಡರು ನಿಧಿ ಸಂಗ್ರಹ ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಜಾತ್ಯಾತೀಯವಾಗಿ ಮಂದಿರ ನಿರ್ಮಾಣಕ್ಕೆ ಭಾರೀ ಪ್ರಮಾಣದಲ್ಲಿ ನಿಧಿ ಹರಿದು ಬರುತ್ತಿದೆ. ಈ ನಡುವೆ, 'ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಿಂದ ಬಡವರ ಹೊಟ್ಟೆ ತುಂಬುತ್ತಾ ಎನ್ನುವ ಪ್ರಶ್ನೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘಟನೆಯ ಸರಸಂಘ ಸಂಚಾಲಕರು ಉತ್ತರವನ್ನು ನೀಡಿದ್ದಾರೆ.

ಮಹಾರಾಷ್ಟ್ರದ ಯುವಜನ ಮತ್ತು ಕ್ರೀಡಾ ಸಚಿವಾಲಯ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮೋಹನ್ ಭಾಗ್ವತ್ ಭಾಗವಹಿಸಿದ್ದರು. ಈ ವೇಳೆ, ವಿದ್ಯಾರ್ಥಿನಿಯೊಬ್ಬರು ಮೇಲಿನ ಪ್ರಶ್ನೆಯನ್ನು ಕೇಳಿದ್ದಾರೆ.
ಅದಕ್ಕೆ ಉತ್ತರಿಸಿದ ಭಾಗ್ವತ್, "ರಾಮ ಮಂದಿರ ನಿರ್ಮಾಣವಾಗದಿದ್ದರೂ ಬಡವರು ಉದ್ದಾರವಾಗಿದೆಯಾ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಮಾಡುವ ವಿಚಾರ ಮುಖ್ಯವಲ್ಲ. ನಮ್ಮ ದೇಶದ ಸಂಸ್ಕೃತಿಯ ಆದರ್ಶ ಪುರುಷ ಶ್ರೀರಾಮ".
"ಶ್ರೀರಾಮ ನಮ್ಮ ಆದರ್ಶ ಪುರುಷ ಎನ್ನುವುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಅವನ ಜನ್ಮಭೂಮಿಯಲ್ಲಿ ಅವನಿಗೆ ಉತ್ತಮವಾದ ಸ್ಮಾರಕ/ದೇವಾಲಯ ಆಗಬೇಕಿದೆ. ವಿಚಾರ ಇಷ್ಟೇ"ಎಂದು ಮೋಹನ್ ಭಾಗ್ವತ್ ಹೇಳಿದ್ದಾರೆ. ಭಾಗ್ವತ್ ಅವರ ಈ ಉತ್ತರಕ್ಕೆ ಭಾರೀ ಕರತಾಡನ ವ್ಯಕ್ತವಾಯಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications