ತಾಲಿಬಾನ್ನೊಂದಿಗೆ ಆರ್ಎಸ್ಎಸ್ ಹೋಲಿಕೆ: ಜಾವೇದ್ ಅಖ್ತರ್ಗೆ ಶೋಕಾಸ್ ನೋಟಿಸ್
ಥಾಣೆ, ಸೆಪ್ಟೆಂಬರ್ 28: ತಾಲಿಬಾನ್ನೊಂದಿಗೆ ಆರ್ಎಸ್ಎಸ್ ಹೋಲಿಕೆ ಮಾಡಿದ ಆರೋಪದ ಮೇಲೆ ಥಾಣೆ ಹೈಕೋರ್ಟ್ ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಥಾಣೆ ಹೈಕೋರ್ಟ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ವಿಶ್ವದಾದ್ಯಂತ ಬಲಪಂಥೀಯರು ಅಸಾಮಾನ್ಯ ಸಾಮ್ಯತೆಯನ್ನು ಹೊಂದಿದ್ದಾರೆ ಎಂದು 76 ವರ್ಷದ ಹಿರಿಯ ಗೀತೆ ರಚನೆಕಾರರಾಗಿರುವ ಜಾವೇದ್ ಅಖ್ತರ್ ಈ ತಿಂಗಳ ಆರಂಭದಲ್ಲಿ ಖಾಸಗಿ ಸುದ್ದಿ ವಾಹಿಯೊಂದಿಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ತಾಲಿಬಾನಿಗಳು ಇಸ್ಲಾಮಿಕ್ ದೇಶವನ್ನು ಬಯಸುತ್ತಾರೆ. ಈ ಜನರು ಹಿಂದೂ ರಾಷ್ಟ್ರವನ್ನು ಮಾಡಲು ಬಯಸುತ್ತಾರೆ ಎಂದು ನಾಗ್ಪುರ್ ಪ್ರಧಾನ ಕಚೇರಿಯ ಹಿಂದುತ್ವ ಸಂಘಟನೆಯ ಹೆಸರನ್ನು ಹೇಳದೆ ಜಾವೇದ್ ಅಖ್ತರ್ ಹೇಳಿದ್ದರು.

ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮತ್ತು ಜಂಟಿ ಸಿವಿಲ್ ನ್ಯಾಯಾಧೀಶರ (ಹಿರಿಯ ವಿಭಾಗ) ನ್ಯಾಯಾಲಯದಲ್ಲಿ ಆರ್ಎಸ್ಎಸ್ ಕಾರ್ಯಕರ್ತ ವಿವೇಕ್ ಚಂಪಾನೇಕರ್ ಸಲ್ಲಿಸಿರುವ ಮೊಕದ್ದಮೆಯಲ್ಲಿ 1 ಕೋಟಿ ರೂ. ಪರಿಹಾರವನ್ನು ಕೋರಿದ್ದಾರೆ. ನವೆಂಬರ್ 12 ರಂದು ಹಿಂತಿರುಗಿಸಬಹುದಾದ ನೋಟಿಸ್ ನೀಡಲು ನ್ಯಾಯಾಲಯ ಆದೇಶಿಸಿದೆ.
ಈ ಹಿಂದೆ, ಮಹಾರಾಷ್ಟ್ರ ಬಿಜೆಪಿ ಜಾವೇದ್ ಅಖ್ತರ್ ವಿರುದ್ಧ ಹಲವು ಬಾರಿ ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರದ ಶಾಸಕ ಮತ್ತು ಬಿಜೆಪಿ ವಕ್ತಾರ ರಾಮ್ ಕದಮ್ ಅವರು ಜಾವೇದ್ ಅಖ್ತರ್ ಆರ್ಎಸ್ಎಸ್ ಬಳಿ ಕ್ಷಮೆಯಾಚಿಸುವವರೆಗೂ ದೇಶದಲ್ಲಿ ಅವರ ಯಾವುದೇ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬಾರದೆಂದು ತಿಳಿಸಿದ್ದರು.
ಜಾವೇದ್ ಅಖ್ತರ್ ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ತಾಲಿಬಾನ್ ಮತ್ತು "ಹಿಂದೂ ರಾಷ್ಟ್ರವನ್ನು ಬಯಸುವವರಿಗೆ" ಸೈದ್ಧಾಂತಿಕ ಸಾಮ್ಯತೆ ಇದೆ ಎಂದು ಹೇಳಿದ್ದರು. ಬಿಜೆಪಿಯ ಸೈದ್ಧಾಂತಿಕ ಮಾತೃ ಸಂಘಟನೆಯಾಗಿರುವ ಆರೆಸ್ಸೆಸ್, ಭಾರತವು ಹಿಂದೂ 'ರಾಷ್ಟ್ರ' ಅಥವಾ ರಾಜ್ಯ ಎಂದು ಬಹಳ ಹಿಂದಿನಿಂದಲೂ ನಂಬಿದೆ ಎಂದು ಅವರು ಹೇಳಿದರು. ರಾಮ್ ಕದಮ್ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿ, ಅಖ್ತರ್ ಅವರ ಹೇಳಿಕೆ ನಾಚಿಕೆಗೇಡು ಎಂದು ಎಚ್ಚರಿಸಿದ್ದರು.
ಇದು ಆರ್ಎಸ್ಎಸ್ ಮತ್ತು ವಿಎಚ್ಪಿ ಕಾರ್ಯಕರ್ತರಿಗೆ ಮತ್ತು ಅವರ ಸಿದ್ಧಾಂತವನ್ನು ನಂಬಿರುವ ಕೋಟಿಗಟ್ಟಲೆ ಜನರಿಗೆ ಅವಮಾನಕರವಾಗಿದೆ. ಮತ್ತೊಂದೆಡೆ, ಜಾವೇದ್ ಅಖ್ತರ್ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಎದುರಿಸುತ್ತಿದ್ದಾರೆ. ಜಾವೇದ್ ಅಖ್ತರ್ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಂಗನಾ ವಿರುದ್ಧ ಈ ಪ್ರಕರಣ ದಾಖಲಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications