ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಶಿವಸೇನೆಯವರು: ಸಾಮ್ನಾ ಘೋಷಣೆ
ಮುಂಬೈ, ಜೂನ್ 19: ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಶಿವಸೇನೆಯ ನಡುವೆ ಇದ್ದ ವೈಮನಸ್ಯ ಚುನಾವಣೆಯ ಫಲಿತಾಮಶದ ನಂತರ ಕೊಂಚ ತಣ್ಣಗಾಗಿತ್ತು. ಆದರೆ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ನಡುವಲ್ಲಿ ಮತ್ತೆ ಭಿನ್ನಾಭಿಪ್ರಾಯ ಏಳುವ ಎಲ್ಲಾ ಸೂಚನೆಗಳೂ ಕಾಣಿಸುತ್ತಿವೆ.
ಇತ್ತೀಚೆಗಷ್ಟೇ ಮಹಾರಾಷ್ಟ್ರದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರನ್ನು ಬಿಂಬಿಸಬೇಕು ಎಂಬ ಮಾತು ಕೇಳಿಬಂದಿತ್ತು. ಇದೀಗ ಶಿವಸೇನೆ ಮುಖವಾಣಿ 'ಸಾಮ್ನಾ' ಸಹ, "ಈ ಬಾರಿ ಮಹಾರಾಷ್ಟ್ರಕ್ಕೆ ಶಿವಸೇನೆ ಅಭ್ಯರ್ಥಿಯೇ ಮುಖ್ಯಮಂತ್ರಿಯಾಗಬೇಕು" ಎಂದು ಘೋಷಿಸಿದ್ದು, ಬಿಜೆಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಳ್ಳದೆ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟ. ಆದ್ದರಿಂದ ಈಗಾಗಲೇ ಮಹಾರಾಷ್ಟ್ರದ ಒಟ್ಟು 288 ಸ್ಥಾನಗಳ ಪೈಕಿ, ತಲಾ 135 ಸ್ಥಾನಗಳಲ್ಲಿ ಬಿಜೆಪಿ ಮತ್ತು ಶಿವಸೇನೆ ಸ್ಪರ್ಧಿಸಲಿವೆ. ಉಳಿದ 18 ಕ್ಷೇತ್ರಗಳಲ್ಲಿ ಎನ್ ಡಿಎ ಮೈತ್ರಿಕೂಟದ ಇತರ ಪಕ್ಷಗಳು ಸ್ಪರ್ಧಿಸಲಿವೆ.

ಉಭಯ ಪಕ್ಷಗಳೂ ಸಮಾನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿರುವುದರಿಂದ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಎರಡೂ ಪಕ್ಷಗಳಲ್ಲೂ ಸ್ಪರ್ಧೆ ಏರ್ಪಡುವುದು ಖಂಡಿತ.
ನಾವು ವಿಧಾನಸಭೆಯಲ್ಲಿ ಕೇಸರಿಯನ್ನು ಮೊಳಗಿಸಲು ಉತ್ಸುರಾಗಿದ್ದೇವೆ. ನಮ್ಮ ಪಕ್ಷದ ಸದಸ್ಯರೊಬ್ಬರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಿವಸೇನೆ ಹೇಳಿದ್ದಾಗಿ ಸಾಮ್ನಾ ವರದಿ ಮಾಡಿದೆ.
-
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post












Click it and Unblock the Notifications