ಪಠ್ಯ ಪುಸ್ತಕ ಸೇರಿದ 'ಕ್ರಿಕೆಟ್ ದೇವರು' ಸಚಿನ್
ಮುಂಬೈ, ಮೇ.28: ಕ್ರಿಕೆಟ್ ಜಗತ್ತಿನ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆ ಕೊನೆಗೂ ಪಠ್ಯ ಪುಸ್ತಕವಾಗಿದೆ. ಮಹಾರಾಷ್ಟ್ರ ಸರ್ಕಾರ ಸುಮಾರು ಒಂದೂವರೆ ವರ್ಷದ ನಂತರ ಹಲವು ವರ್ಷಗಳ ಬೇಡಿಕೆಯನ್ನು ಪುರಸ್ಕರಿಸಿದೆ.
ಮಹಾರಾಷ್ಟ್ರ ಸರ್ಕಾರ ನಾಲ್ಕನೇ ತರಗತಿ ವಿದ್ಯಾರ್ಥಿಗಳು ಇನ್ಮುಂದೆ ಸಚಿನ್ ಅವರ ಕ್ರಿಕೆಟ್ ವೃತ್ತಿ ಬದುಕಿನ ಕೆಲವು ಪ್ರಮುಖ ಅಂಶಗಳನ್ನು ಪಠ್ಯ ರೂಪದಲ್ಲಿ ಓದಬಹುದಾಗಿದೆ. ಮರಾಠಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಚಿನ್ ಕುರಿತ ಪಾಠಗಳು ಓದಲು ಸಿಗಲಿವೆ. ಈ ವರ್ಷದ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದು ಮಹಾರಾಷ್ಟ್ರ ಶಿಕ್ಷಣ ಸಚಿವ ರಾಜೇಂದ್ರ ದರ್ದಾ ಅವರು ಪಿಟಿಐಗೆ ಹೇಳಿದ್ದಾರೆ.

ಭಾರತ ಕ್ರಿಕೆಟ್ ನ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಅವರ ಕೆಲವು ಅಂಶಗಳನ್ನು ಶಾಲಾ ಪಠ್ಯ ಕ್ರಮದಲ್ಲಿ ಸೇರಿಸಲು ಮಹಾರಾಷ್ಟ್ರ ಸರ್ಕಾರ ಕಳೆದ ವರ್ಷವೇ ನಿರ್ಧರಿಸಿತ್ತು. ತಾಂತ್ರಿಕ ತೊಂದರೆಯಿಂದ ಮುಂದಿನ ಶೈಕ್ಷಣಿಕ ವರ್ಷದ ತನಕ ಕಾಯಬೇಕು. ಮಹಾರಾಷ್ಟ್ರದಲ್ಲಿನ ಶಾಲಾ ಮಕ್ಕಳು ಸಚಿನ್ ಬಗ್ಗೆ ಪಾಠ ಕೇಳಲಿದ್ದಾರೆ. ಸಚಿನ್ ತೆಂಡೂಲ್ಕರ್ ಅವರನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಲು ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ಮಕ್ಕಳು ಅವರಿಂದ ಪ್ರೇರೆಪಿತರಾಗುವ ವಿಶ್ವಾಸವಿದೆ ಎಂದು ಶಾಲಾ ಶಿಕ್ಷಣ ಸಚಿವ ರಾಜೇಂದ್ರ ದಾರ್ದಾ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಕ್ರಿಕೆಟ್ ಜಗತ್ತಿನ 'ವಾಲ್' ಭಾರತೀಯ ಕ್ರಿಕೆಟ್ ನ ಅದ್ಭುತ ಆಟಗಾರ, ಮಾಜಿ ಕ್ರಿಕೆಟರ್ ರಾಹುಲ್ ದ್ರಾವಿಡ್ ಅವರ ಸಾಧನೆ ಈಗ ಪಠ್ಯ ಪುಸ್ತಕ ರೂಪದಲ್ಲಿ ಲಭ್ಯವಿದೆ. ಹತ್ತನೇ ತರಗತಿಯ ಎರಡನೇ ಭಾಷಾ ವಿಷಯ ಕನ್ನಡದಲ್ಲಿ ರಾಹುಲ್ ಬಗ್ಗೆ ಓದಬಹುದು ಎಂಬ ಸಂತಸದ ಸುದ್ದಿ ಬಂದಿತ್ತು. ಇದರ ಬೆನ್ನಲ್ಲೇ ಸಚಿನ್ ಕುರಿತಂತೆ ಪಾಠ ಕೇಳುವ ಸೌಭಾಗ್ಯ ಮಕ್ಕಳಿಗೆ ಸಿಕ್ಕಿದೆ.
ಕ್ರಿಕೆಟ್ ಪಟುವೊಬ್ಬರ ಬಗ್ಗೆ ಪಠ್ಯಕ್ರಮದಲ್ಲಿ ಅಳವಡಿಸಿರುವುದು ಇದೇ ಮೊದಲಲ್ಲ ಈ ಹಿಂದೆ ಚಂದ್ರಕಾಂತ್ ಗುಲಬ್ರೋ 'ಚಂದು' ಬೊರ್ಡೆ ಮತ್ತು ಸುನಿಲ್ ಗವಾಸ್ಕರ್ ಕುರಿತು ಪಾಠಗಳು ಬಂದಿವೆ. ಈ ನಡುವೆ ಸಚಿನ್ ಕುರಿತಂತೆ ಪಾಠಗಳು ಮಕ್ಕಳು ಓದುವಂತಾಗಲು ಮಹಾರಾಷ್ಟ್ರ ನವನಿರ್ಮಾನ್ ಸೇನಾ ನಡೆಸಿದ ಹೋರಾಟವೇ ಕಾರಣ ಎಂದು ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications