ಸಚಿನ್ ತೆಂಡೂಲ್ಕರ್ ಭದ್ರತೆ ಹಿಂಪಡೆದ ಠಾಕ್ರೆ, ಮಗನಿಗೆ ಭದ್ರತೆ ಹೆಚ್ಚಳ
ಮುಂಬೈ, ಡಿಸೆಂಬರ್ 25: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಮಹಾರಾಷ್ಟ್ರ ಮೈತ್ರಿ ಸರ್ಕಾರ ಹಿಂಪಡೆದಿದ್ದು, ಸಿಎಂ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆಗೆ ಭದ್ರತೆ ಹೆಚ್ಚು ಮಾಡಲಾಗಿದೆ.
ಸಚಿನ್ ತೆಂಡೂಲ್ಕರ್ ಗೆ ಎಕ್ಸ್ ಭದ್ರತೆ ಒದಗಿಸಲಾಗಿತ್ತು, ಅದನ್ನು ಹಿಂಪಡೆದಿರುವ ಮಹಾರಾಷ್ಟ್ರ ಸರ್ಕಾರ, ಸಿಎಂ ಪುತ್ರ ಶಿವಸೇನಾ ಶಾಸಕ ಆದಿತ್ಯ ಠಾಕ್ರೆಗೆ ನೀಡಲಾಗಿದ್ದ 'ವೈ ಪ್ಲಸ್' ಭದ್ರತೆಯನ್ನು ಹೆಚ್ಚು ಮಾಡಿ ಜೆಡ್ ಭದ್ರತೆ ಒದಗಿಸಿದೆ.
ಮಹಾರಾಷ್ಟ್ರದಲ್ಲಿ ನಲವತ್ತಕ್ಕೂ ಹೆಚ್ಚು ಮಂದಿ ವಿಐಪಿ ಗಳಿಗೆ ಭದ್ರತೆ ಹಿಂಪಡೆಯಲಾಗಿದೆ. ಕೆಲವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇನ್ನು ಕೆಲವರಿಗೆ ಹೊಸದಾಗಿ ಭದ್ರತೆ ನೀಡಲಾಗಿದೆ.

ಸಚಿನ್ ಗೆ ಒಬ್ಬ ಕಾನ್ಸ್ಟೇಬಲ್ ಅನ್ನು ಭದ್ರತೆಗೆ ನೀಡಲಾಗಿತ್ತು. ಅದನ್ನು ಹಿಂಪಡೆಯಲಾಗಿದೆ. ಆದರೆ ಅವರಿಗೆ ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆ ಮುಂದುವರೆಯಲಿದೆ ಎಂದು ಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸಚಿನ್ ಜೊತೆಗೆ ಮಹಾರಾಷ್ಟ್ರ ಬಿಜೆಪಿ ನಾಯಕ ಏಕನಾಥ್ ಖಾಡಸೆ ಅವರಿಗೆ ನೀಡಲಾಗಿದ್ದ ಭದ್ರತೆಯನ್ನೂ ಕಡಿತಗೊಳಿಸಲಾಗಿದ್ದು, ಅವರಿಗೆ ನೀಡಲಾಗಿದ್ದ ಪೊಲೀಸ್ ಎಸ್ಕಾರ್ಟ್ ಅನ್ನು ಹಿಂಪಡೆಯಲಾಗಿದೆ.
ಉತ್ತರ ಪ್ರದೇಶ ಮಾಜಿ ರಾಜ್ಯಪಾಲ ರಾಮ ನಾಯಕ್ ಅವರಿಗೆ ನೀಡಲಾಗಿದ್ದ ಜೆಡ್ ಪ್ಲಸ್ ಭದ್ರತೆ ಹಿಂಪಡೆದು 'ಎಕ್ಸ್' ಹಂತದ ಭದ್ರತೆ ಇಳಿಸಲಾಗಿದೆ. ಖ್ಯಾತ ವಕೀಲ ಉಜ್ವಲ್ ನಿಕಮ್ ಅವರಿಗೆ ನೀಡಲಾಗಿದ್ದ ಜೆಡ್ ಪಲ್ಸ್ ಭದ್ರತೆಯಲ್ಲಿಯೂ ಕಡಿತಗೊಳಿಸಿ 'ವೈ' ಹಂತದ ಭದ್ರತೆ ನೀಡಲಾಗಿದೆ.
ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರಿಗೆ ನೀಡಲಾಗಿದ್ದ ಭದ್ರತೆ ಹೆಚ್ಚು ಮಾಡಿ 'ವೈ' ನಿಂದ 'ಜೆಡ್' ದರ್ಜೆಗೆ ಏರಿಸಲಾಗಿದೆ.
ಬೆದರಿಕೆ ಗ್ರಹಿಕೆ ಸಮಿತಿ ಸಭೆಯ ನಂತರ ಈ ತೀರ್ಮಾನವನ್ನು ಮಹಾರಾಷ್ಟ್ರ ಸರ್ಕಾರ ತೆಗೆದುಕೊಂಡಿದೆ. 'ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಮತ್ತು ಇತರ ಇಲಾಖೆಗಳ ಮಾಹಿತಿ ಆಧರಿಸಿ ಸೂಕ್ಷ್ಮ ವರದಿ ತಯಾರಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ' ಎಂದು ಅಧಿಕಾರಿಗಳು ಹೇಳಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications