ಮಾಲೆಗಾಂವ್ ಸ್ಫೋಟದ ಬಗ್ಗೆ ಗೊತ್ತೇ ಇಲ್ಲ ಎಂದ ಸಂಸದೆ ಸಾಧ್ವಿ ಪ್ರಗ್ಯಾ
ಮುಂಬೈ, ಜೂನ್ 7: ಕಳೆದ ಎರಡು ವಾರ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದ 2008ರ ಮಾಲೆಗಾಂವ್ ಬಾಂಬ್ ಸ್ಫೋಟದ ಆರೋಪಿ, ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಮುಂಬೈನ ವಿಶೇಷ ನ್ಯಾಯಾಲಯದ ಮುಂದೆ ಶುಕ್ರವಾರ ಹಾಜರಾದರು.
ಈ ವೇಳೆ ಎನ್ಐಎ ವಿಶೇಷ ನ್ಯಾಯಾಧೀಶ ವಿಎಸ್ ಪಡಾಲ್ಕರ್, ಸ್ಫೋಟಕ್ಕೆ ಸಂಬಂಧಿಸಿದಂತೆ ಏನಾದರೂ ಹೇಳುವುದು ಇದೆಯೇ ಎಂದು ಪ್ರಶ್ನಿಸಿದಾಗ ಸಾಧ್ವಿ 'ನನಗೇನೂ ಗೊತ್ತಿಲ್ಲ' ಎಂದು ಉತ್ತರಿಸಿದರು.
ಸಾಧ್ವಿ ಅವರಿಗೆ ಕೂರಲು ಅನುಕೂಲವಾಗುವಂತೆ ಬೆಂಚ್ನ ಮೇಲೆ ಕೇಸರಿ ಬಣ್ಣದ ಮೃದುವಾದ ಬಟ್ಟೆ ಹಾಸಲಾಗಿತ್ತು. ಕೇಸರಿ ಉಡುಪು ಧರಿಸಿ ಬಂದಿದ್ದ ಸಾಧ್ವಿ ಅವರನ್ನು ಆರೋಪಿ ಕಟಕಟೆಗೆ ಬರುವಂತೆ ಸೂಚಿಸಲಾಯಿತು. ವಿಚಾರಣೆ ವೇಳೆ 2008ರ ಸೆಪ್ಟೆಂಬರ್ 29ರಂದು ನಡೆದ ಸ್ಫೋಟದ ಬಗ್ಗೆ ತಿಳಿದಿದೆಯೇ ಎಂದು ನ್ಯಾಯಾಲಯ ಪ್ರಶ್ನಿಸಿತು.

ಈ ಸಂದರ್ಭದಲ್ಲಿ ಕರ್ಚೀಫ್ ತೆಗೆದ ಸಾಧ್ವಿ ಮುಖ ಒರೆಸಿಕೊಂಡರು. '116 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರ ಹೇಳಿಕೆಯಂತೆ ಬಾಂಬ್ ಸ್ಫೋಟ ಸಂಭವಿಸಿದೆ. ಅದನ್ನು ಯಾರು ಮಾಡಿದ್ದು ಎಂದು ನಾನು ಕೇಳುತ್ತಿಲ್ಲ. 2008 ಸೆಪ್ಟೆಂಬರ್ನಲ್ಲಿ ಬಾಂಬ್ ಸ್ಫೋಟ ನಡೆದಿದ್ದರ ಬಗ್ಗೆ ನಿಮಗೆ ಗೊತ್ತಿದೆಯೇ?' ಎಂದು ನ್ಯಾಯಾಧೀಶರು ಕೇಳಿದರು. ಆಗ ಸಾಧ್ವಿ 'ನನಗೆ ಯಾವುದೇ ಮಾಹಿತಿ ಇಲ್ಲ; ಎಂದರು.
ಪ್ರಕರಣದ ವಿಚಾರಣೆ ಕುರಿತು ಕೇಳಿದಾಗ ನ್ಯಾಯಾಲಯವು ಎಷ್ಟು ಜನ ಸಾಕ್ಷಿಗಳನ್ನು ವಿಚಾರಣೆ ಮಾಡಿದೆ ಎಂಬುದು ತಮಗೆ ಅರಿವಿಲ್ಲ ಎಂದು ಹೇಳಿದರು.
ಸಾಧ್ವಿ ಅವರು ಗುರುವಾರ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವುದರಿಂದ ವಿನಾಯಿತಿ ನೀಡಬೇಕು ಎಂದು ವಕೀಲರು ಕೋರಿದ್ದರು. ಒಂದು ದಿನದ ವಿನಾಯಿತಿ ನೀಡುತ್ತೇನೆ. ಆದರೆ, ಶುಕ್ರವಾರವೂ ಗೈರಾದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications