ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಗ್ಯಾ ಸಿಂಗ್ ಗೆ ಜಾಮೀನಿಲ್ಲ
ಮುಂಬೈ, ಜೂನ್ 28: ಮಾಲೆಗಾಂವ್ ಸ್ಫೋಟ 2008ರ ಆರೋಪಿಯಾಗಿರುವ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಗೆ ರಾಷ್ಟ್ರೀಯ ತನಿಖಾ ದಳ ಕೋರ್ಟಿನಿಂದ ಮಂಗಳವಾರ ಕಹಿ ಸುದ್ದಿ ಸಿಕ್ಕಿದೆ. ಸಾಧ್ವಿ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ತನಿಖೆ ನಡೆಸಿರುವ ರಾಷ್ಟ್ರೀಯ ತನಿಖಾ ದಳವು ಕೋರ್ಟಿಗೆ ನೀಡಿರುವ ವರದಿಯಂತೆ ಸಾಧ್ವಿ ಅವರಿಗೆ ರಿಲೀಫ್ ಸಿಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ವಿಶೇಷ ನ್ಯಾ. ಶ್ರೀಪಾದ್ ತೆಕಾಲೆ ಅವರು ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿ ಜಾಮೀನು ನೀಡಲು ತಿರಸ್ಕರಿಸಿದ್ದಾರೆ.
ಮಾಲೆಂಗಾವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬದವರು ಸಾಧ್ವಿ ವಿರುದ್ಧ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.[ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಗೆ ರಿಲೀಫ್?]

ಸಾಧ್ವಿ ಅವರ ವಿರುದ್ಧ ಹಾಕಿರುವ ಚಾರ್ಚ್ ಶೀಟ್ ಪೇಲವವಾಗಿದ್ದು, ಯಾವುದೇ ರೀತಿಯಲ್ಲೂ ಆಕೆ ವಿರುದ್ಧ ಸಾಕ್ಷಿ ಸಿಕ್ಕಿಲ್ಲ. 2008ರ ಮಾಲೆಗಾಂವ್ ಸ್ಫೋಟಕ್ಕೆ ಕಾರಣವಾದ ಮೋಟರ್ ಸೈಕಲ್ ಸಾಧ್ವಿಗೆ ಸೇರಿದ್ದು ಎಂಬ ಕಾರಣಕ್ಕೆ ಮಹಾರಾಷ್ಟ್ರ ಉಗ್ರ ನಿಗ್ರಹ ದಳ (ಎಟಿಎಸ್) ದವರು ಸಾಧ್ವಿಯನ್ನು ಬಂಧಿಸಿದ್ದರು.
ಈ ಪ್ರಕರಣದ ಆರೋಪಿಗಳಾಗಿ ಸಾಧ್ವಿ ಪ್ರಗ್ಯಾ ಸಿಂಗ್, ಪುಣೆಯ ಅಭಿನವ್ ಭರತ್, ಸೇನಾಧಿಕಾರಿ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಅವರನ್ನು ಮೋಕಾ ಕಾಯ್ದೆಯಡಿ ಪೊಲೀಸರು ಬಂಧಿಸಿ, ಜೈಲಿಗೆ ಕಳಿಸಿದ್ದರು. ಆದರೆ, Maharashtra Control of Organised Crimes Act (ಮೋಕಾ) ಕಾಯ್ದೆ ಅಡಿಯಲ್ಲಿ ಸಾಧ್ವಿ ವಿರುದ್ಧ ಹಾಕಲಾದ ಆರೊಪಗಳೆಲ್ಲವೂ ತಿರಸ್ಕರಿಸಲ್ಪಟ್ಟಿದೆ.
ತನಿಖೆ ಕೈಗೆತ್ತಿಕೊಂಡ ಎಟಿಎಸ್ ಆರಂಭದಲ್ಲೇ ಸಾಧ್ವಿಯೇ ಈ ಸ್ಫೋಟ ಹಿಂದಿನ ರೂವಾರಿ ಎಂದು ಹೇಳಿಕೆ ನೀಡಿತ್ತು. ನಂತರ ಎನ್ ಐಎ ತನಿಖೆ ನಡೆಸಿ, ಈ ಬಗ್ಗೆ ಯಾವುದೇ ಸಾಕ್ಷಿ ಸಿಕ್ಕಿಲ್ಲ ಎಂದಿದೆ. ಸ್ಫೋಟಕ್ಕೆ ಕಾರಣವಾದ ಮೋಟರ್ ಸೈಕಲ್ ಸಾಧ್ವಿ ಹೆಸರಿನಲ್ಲಿ ನೋಂದಣಿಯಾಗಿತ್ತು, ರಾಮಚಂದ್ರ ಕಲಸಂಘ್ರ ಅವರು ಘಟನೆಗೂ ಮುನ್ನ ಎರಡು ವರ್ಷಗಳಿಂದ ಈ ಬೈಕನ್ನು ಬಳಸುತ್ತಿದ್ದರು.
ಹೀಗಾಗಿ ಸಾಧ್ವಿ ಅವರ ವಿರುದ್ಧ ಸಾಕ್ಷಿಗಳಿಲ್ಲ ಎಂದು ಕೋರ್ಟಿಗೆ ಎನ್ ಐಎ ತಿಳಿಸಲಿದೆ. ಇದರಿಂದಾಗಿ 8 ವರ್ಷಗಳ ನಂತರ ಜೈಲಿನಿಂದ ಸಾಧ್ವಿ ಹೊರಬರುವ ಸಾಧ್ಯತೆ ಹೆಚ್ಚಿದೆ (ಒನ್ಇಂಡಿಯಾ ಸುದ್ದಿ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications