ಗುದ್ದೋಡು ಪ್ರಕರಣದಲ್ಲಿ ಟ್ವಿಸ್ಟ್: ಸಲ್ಲೂ ಪರ ಸಾಕ್ಷಿ ಹೇಳಿದ ಡ್ರೈವರ್
ಮುಂಬೈ, ಮಾ.30: ನಟ ಸಲ್ಮಾನ್ ಖಾನ್ ಆರೋಪಿಯಾಗಿರುವ 2002ರ ಹಿಟ್ ಅಂಡ ರನ್ ಪ್ರಕರಣ ಮತ್ತೊಮ್ಮೆ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳು ಹೇಳಿಕೆ ದಾಖಲಿಸಿದ್ದು, ಸೋಮವಾರ ಸಲ್ಮಾನ್ ಖಾನ್ ಅವರ ಕಾರು ಚಾಲಕ ನೀಡಿದ ಹೇಳಿಕೆ ಸಲ್ಮಾನ್ ಖಾನ್ ಗೆ ವರವಾಗಿ ಪರಿಣಮಿಸುವ ಸಾಧ್ಯತೆ ಕಂಡು ಬಂದಿದೆ.
ಸಲ್ಮಾನ್ ಖಾನ್ ಅವರ ಕಾರು ಚಾಲಕ ಅಶೋಕ್ ಸಿಂಗ್ ನೀಡಿದ ಹೇಳಿಕೆ ಪ್ರಕಾರ ಘಟನೆ ನಡೆದ ದಿನ 2002ರ ಸೆಪ್ಟೆಂಬರ್ 28ರಂದು ಸಲ್ಮಾನ್ ಖಾನ್ ಅವರು ಕಾರು ಚಲಾಯಿಸುತ್ತಿರಲಿಲ್ಲ ಎಂದಿದ್ದಾರೆ. ಮಾ.27ರಂದು 49ವರ್ಷ ವಯಸ್ಸಿನ ಸಲ್ಮಾನ್ ಖಾನ್ ಅವರು ಕೋರ್ಟಿಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು. [ಸಲ್ಲೂ ಕೃಷ್ಣ ಮೃಗ ಬೇಟೆ ಕೇಸ್ ಅಪ್ಡೇಟ್ಸ್]

ಅಪಘಾತ ನಡೆದ ಸಂದರ್ಭದಲ್ಲಿ ತಮ್ಮ ಕಾರಿನ ಚಾಲಕ ಅಶೋಕ್ ಅವರು ವಾಹನ ಚಲಾಯಿಸುತ್ತಿದ್ದರು. ನಾನು ಕಾರು ಚಲಾಯಿಸುತ್ತಿರಲಿಲ್ಲ ಎಂದು ಸಲ್ಮಾನ್ ಹೇಳಿಕೆ ನೀಡಿದ್ದರು. ಜೊತೆಗೆ ಅಪಘಾತವಾದ ಸಂದರ್ಭದಲ್ಲಿ ಕುಡಿದು ವಾಹನ ಚಲಾಯಿಸಿದ ಆರೋಪವನ್ನು ತಳ್ಳಿ ಹಾಕಿದರು. ನಾನು ಅಂದು ಮದ್ಯಪಾನ ಮಾಡಿರಲಿಲ್ಲ ಎಂದು ಕೋರ್ಟಿನ ಮುಂದೆ ಹೇಳಿದರು. ಇಲ್ಲಿ ತನಕ ನನ್ನ ವಿರುದ್ಧ ಸಲ್ಲಿಸಿರುವ ಸಾಕ್ಷಿಗಳೆಲ್ಲ ಸುಳ್ಳು ಎಂದು ಸಲ್ಲೂ ಸ್ಪಷ್ಟಪಡಿಸಿದ್ದರು.
ಸೆ.28, 2002ರಂದು ಸಲ್ಮಾನ್ ಖಾನ್ ಅವರಿದ್ದ ಲ್ಯಾಂಡ್ ರೋವರ್ ವಾಹನ ಅಡ್ಡಾದಿಡ್ಡಿ ಚಲಿಸಿ ಫುಟ್ ಪಾತ್ ನಲ್ಲಿದ್ದ ಒಬ್ಬ ವ್ಯಕ್ತಿ ಸಾವಿಗೆ ಕಾರಣವಾಗಿತ್ತು. ಘಟನೆಯಲ್ಲಿ ನಾಲ್ವರ ಗಾಯಗೊಂಡಿದ್ದರು.[ಖಾನ್ ಗಳ ಚಿತ್ರಗಳನ್ನು ನಿಷೇಧಿಸಿ: ಸಾಧ್ವಿ ಪ್ರಾಚಿ ಕರೆ]
2002ರ ಹಿಟ್ ಅಂಡ್ ರನ್ ಕೇಸಿಗೆ ಸಂಬಂಧಿಸಿದಂತೆ ಕಾರು ಚಾಲನೆ ಮಾಡಿದ ವೇಳೆ ಸಲ್ಮಾನ್ ಅವರು ಕುಡಿದಿರಲಿಲ್ಲ. ಘಟನೆ ನಂತರ ನಾನು ಅವರನ್ನು ಭೇಟಿ ಮಾಡಿದ್ದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ನ್ಯಾಯಾಲಯಕ್ಕೆ ತಿಳಿಸಿದ್ದರಿಂದ ಪ್ರಕರಣಕ್ಕೆ ತಿರುವು ಸಿಕ್ಕಿತ್ತು.
Correction: Salman Khan Hit & Run case: Witness was cross examined who said he was driving the car: Pradeep Gharat, Public Prosecutor
— ANI (@ANI_news) March 30, 2015 ಆದರೆ, ಘಟನೆ ನಡೆದ ದಿನ ಸಲ್ಮಾನ್ ಖಾನ್ ಅವರ ದೇಹದ ರಕ್ತದಲ್ಲಿ ಮದ್ಯದ ಅಂಶ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿತ್ತು ಎಂದು ತಿಳಿದು ಬಂದಿದೆ. ತಜ್ಞರ ಹೇಳಿಕೆ ಪ್ರಕಾರ ರಕ್ತದಲ್ಲಿ ಆಲ್ಕೋಹಾಲ್ ಅಂಶ 30 ಮಿಲಿ ಗ್ರಾಮ್ ನಷ್ಟಿರಬಹುದು. ಸಲ್ಮಾನ್ ಅವರ ರಕ್ತದಲ್ಲಿ 62 ಮಿಲಿಗ್ರಾಂನಷ್ಟಿದೆ. ಹೀಗಾಗಿ ಸಲ್ಮಾನ್ ಖಾನ್ ಅವರು ಘಟನೆ ನಡೆದ ವೇಳೆ ಕಾರಿನಲ್ಲಿದ್ದರು ಹಾಗೂ ವಾಹನ ಚಲಾಯಿಸುವಾಗ ಕುಡಿದಿದ್ದರು ಎಂದು ಸಲ್ಮಾನ್ ವಿರುದ್ಧ ದಾಖಲೆ ಸಲ್ಲಿಸಲಾಗಿತ್ತು.
ಆದರೆ, ಈಗ ಸ್ವತಃ ಸಲ್ಮಾನ್ ಅವರು ಮೊದಲ ಬಾರಿಗೆ ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಅವರ ಕಾರಿನ ಚಾಲಕ ನೀಡಿರುವ ಹೇಳಿಕೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಕಾರು ಚಾಲಕ ಅಶೋಕ್ ಸಿಂಗ್ ನೀಡಿದ ಹೇಳಿಕೆ:
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications