ಬಿಸೋ ದೊಣ್ಣೆಯಿಂದ ಪಾರಾದ ಸಲ್ಮಾನ್ ಖಾನ್
ಮುಂಬೈ, ಮೇ 8 : ಮುಂಬೈ ಸೆಷನ್ಸ್ ಕೋರ್ಟ್ 2002ರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ಅವರಿಗೆ ವಿಧಿಸಿದ್ದ 5 ವರ್ಷದ ಜೈಲು ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಅಮಾನತುಗೊಳಿಸಿದೆ. ಶುಕ್ರವಾರ ಸಲ್ಮಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಈ ಆದೇಶ ನೀಡಿದೆ.
ಮೇ 6 ರ ಬುಧವಾರ ಮುಂಬೈ ಸೆಷೆನ್ಸ್ ಕೋರ್ಟ್ ಸಲ್ಮಾನ್ ಖಾನ್ ಅವರಿಗೆ 5 ವರ್ಷದ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ನೀಡಿತ್ತು. [ಸಲ್ಮಾನ್ ಜೈಲು ತಪ್ಪಿಸಿಕೊಂಡಿದ್ದು ಹೇಗೆ?]
ಶುಕ್ರವಾರ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಅಭಯ್ ತಿಪ್ಸೆ ಅವರು ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು, ಸೆಷೆನ್ಸ್ ಕೋರ್ಟ್ಗೆ ಶರಣಾಗಿ ಜಾಮೀನು ಪಡೆಯುವಂತೆ ಆದೇಶ ನೀಡಿದರು. [ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ : ಸತ್ತ ನೂರುಲ್ಲಾ ಪತ್ನಿ]

ಸಮಯ 5.51 : ಜಾಮೀನು ಪಡೆದು ನಿವಾಸಕ್ಕೆ ವಾಪಸ್ ಹೊರಟ ಸಲ್ಮಾನ್ ಖಾನ್
ಸಮಯ 5.41 : ಬಾಂಬೆ ಹೈಕೋರ್ಟ್ ಆದೇಶದಂತೆ 30 ಸಾವಿರ ರೂ. ವೈಯಕ್ತಿಕ ಬಾಂಡ್ಗೆ ಸಹಿ ಹಾಕಿ ಸಲ್ಮಾನ್ ಜಾಮೀನು ಪ್ರಕ್ರಿಯೆಗಳನ್ನು ಮುಗಿಸಬೇಕಾಗಿದೆ.
ಸಮಯ 5.30 : ಬಾಂಬೆ ಹೈಕೋರ್ಟ್ ಆದೇಶದಂತೆ ಕೋರ್ಟ್ಗೆ ಶರಣಾದ ಸಲ್ಮಾನ್ ಖಾನ್
ಸಮಯ 12.50 : ಸಲ್ಮಾನ್ ಖಾನ್ ಬಾಂದ್ರಾ ನಿವಾಸದ ಮುಂದೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸುತ್ತಿದ್ದಾರೆ
ಸಮಯ 12.37 : ಸಲ್ಮಾನ್ ಸೆಷನ್ಸ್ ಕೋರ್ಟ್ಗೆ ಶರಣಾಗಿ ಷರತ್ತು ಬದ್ಧ ಜಾಮೀನು ಪಡೆಯಬೇಕು
ಸಮಯ 12.35 : ಸಲ್ಮಾನ್ ಖಾನ್ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟ ಬಾಂಬೆ ಹೈಕೋರ್ಟ್, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ
ಸಮಯ 12.27 : ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸುವಾಗ ಅವರನ್ನು ಜೈಲಿಗೆ ಏಕೆ ಕಳಿಸಬೇಕು?, ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ನಿಮ್ಮ ವಿರೋಧವೇಕೆ? ಎಂದು ಜಡ್ಜ್ ಅಭಯ್ ತಿಪ್ಸೆ ಸಂದೀಪ್ ಶಿಂಧೆ ಅವರನ್ನು ಪ್ರಶ್ನಿಸಿದರು
ಸಮಯ 12.15 : ಸಲ್ಮಾನ್ ಖಾನ್ಗೆ ಜಾಮೀನು ದೊರೆಯಲಿ ಎಂದು ಅಭಿಮಾನಿಗಳು ವಿಶೇಷ ಪೂಜೆ ನಡೆಸುತ್ತಿದ್ದಾರೆ. ವಾರಣಾಸಿಯಲ್ಲಿ ಪೂಜೆ ನಡೆಯುತ್ತಿದೆ.
#SalmanBailOrJail Prayers being offered for @BeingSalmanKhan in Varanasi. via @ANI_news pic.twitter.com/DqdhyfOLP5
— CNN-IBN News (@ibnlive) May 8, 2015 ಸಮಯ 12.09 : ಕಮಲ್ ಖಾನ್ ಈಗ ಬ್ರಿಟನ್ನಲ್ಲಿ ನೆಲೆಸಿದ್ದು, ಅಲ್ಲಿಯ ಪೌರತ್ವ ಪಡೆದುಕೊಂಡಿದ್ದಾರೆ. ಆದ್ದರಿಂದ ಅವರ ವಿಚಾರಣೆ ನಡೆಸಿಲ್ಲ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸಂದೀಪ್ ಶಿಂಧೆ ವಾದ ಮಂಡಿಸಿದರು [ಸಲ್ಮಾನ್ ಗುದ್ದೋಡು ಪ್ರಕರಣದ timeline]
ಸಮಯ 12 ಗಂಟೆ : ಸಲ್ಮಾನ್ ಪರ ವಕೀಲ ಅಮಿತ್ ದೇಸಾಯಿ ವಾದ ಮಂಡನೆ ಮುಕ್ತಾಯ
ಸಮಯ 11.58 : ಬಾಂಬೆ ಹೈಕೋರ್ಟ್ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಲ್ಮಾನ್ ಖಾನ್ ಅಭಿಮಾನಿ
A fan of Salman Khan tried to attempt suicide outside Mumbai HC, now taken to hospital #SalmanVerdict
— ANI (@ANI_news) May 8, 2015 ಸಮಯ 11.42 : ಘಟನೆ ನಡೆದ ದಿನ ಸಲ್ಮಾನ್ ಖಾನ್ ಕಾರು ಓಡಿಸುತ್ತಿದ್ದರು ಎಂಬುದನ್ನು ಸಾಬೀತು ಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಮಿತ್ ದೇಸಾಯಿ ವಾದ ಮಂಡಿಸಿದರು
Altaf was the one who was driving that day: Amit Desai #SalmanVerdict
— ANI (@ANI_news) May 8, 2015 ಸಮಯ 11.35 : ಘಟನೆ ನಡೆದ ದಿನ ಸಲ್ಮಾನ್ ಸ್ನೇಹಿತ ಕಮಲ್ ಖಾನ್ ಕಾರಿನಲ್ಲಿದ್ದರು. ಆದರೆ, ಸೆಷನ್ಸ್ ಕೋರ್ಟ್ ಅವರ ಹೇಳಿಕೆಯನ್ನು ಪಡೆದಿಲ್ಲ ಎಂದು ಅಮಿತ್ ದೇಸಾಯಿ ವಾದ ಮಂಡಿಸಿದರು
ಸಮಯ 11.30 : ಸಲ್ಮಾನ್ ಖಾನ್ ಬಾಡಿಗಾರ್ಡ್ ರವೀಂದ್ರ ಪಾಟೀಲ್ ನೀಡಿರುವ ಹೇಳಿಕೆ ಪರಿಶೀಲಿಸುತ್ತಿರುವ ನ್ಯಾಯಮೂರ್ತಿಗಳು

ಸಮಯ 11.23 : ಸಲ್ಮಾನ್ ಖಾನ್ ಅವರಿಗೆ ಮುಂಬೈ ಸೆಷನ್ಸ್ ಕೋರ್ಟ್ ನೀಡಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಡಬೇಕು ಎಂದು ಅಮಿತ್ ದೇಸಾಯಿ ವಾದ ಮಂಡಿಸಿದರು.
Sentence should be suspended, it is not a matter of 304(2) but 304(1): Salman Khan's lawyer Amit Desai #SalmanVerdict
— ANI (@ANI_news) May 8, 2015 ಸಮಯ 11.20 : ಸಲ್ಮಾನ್ ಖಾನ್ಗೆ ಜಾಮೀನು ನೀಡಬಾರದು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸಂದೀಪ್ ಶಿಂಧೆ ಕೋರ್ಟ್ಗೆ ಆಕ್ಷೇಪಣೆ ಸಲ್ಲಿಸಿದರು
ಸಮಯ 11.14 : ನ್ಯಾಯಮೂರ್ತಿ ಅಭಯ್ ತಿಪ್ಸೆ ಅವರ ಪೀಠದಲ್ಲಿ ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಆರಂಭ
ಸಮಯ 10.45 : ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಬಾಂಬೆ ಹೈಕೋರ್ಟ್ ಮುಂದೆ ಫುಟ್ಪಾತ್ ವ್ಯಾಪಾರಿಗಳು ಪ್ರತಿಭಟನೆ ಆರಂಭಿಸಿದ್ದಾರೆ
ಸಮಯ 10.31 : ಸಲ್ಮಾನ್ ಖಾನ್ ಪ್ರಕರಣದ ಅರ್ಜಿಯ ವಿಚಾರಣೆ 11.15ಕ್ಕೆ ಆರಂಭವಾಗುವ ಸಾಧ್ಯತೆ ಇದೆ
ಸಮಯ 10.14 : ಪಬ್ಲಿಕ್ ಪ್ರಾಸಿಕ್ಯೂಟರ್ ಸಂದೀಪ್ ಶಿಂಧೆ ಬಾಂಬೆ ಹೈಕೋರ್ಟ್ಗೆ ಆಗಮಿಸಿದ್ದಾರೆ
Public Prosecutor Sandeep Shinde reaches HC for Salman Khan's hearing#SalmanVerdict
— ANI (@ANI_news) May 8, 2015 ಸಮಯ 10 ಗಂಟೆ : ಸಲ್ಮಾನ್ ಪರ ಹೈಕೋರ್ಟ್ನಲ್ಲಿ ಹರೀಶ್ ಸಾಳ್ವೆ ಬದಲು ಅಮಿತ್ ದೇಸಾಯಿ ವಾದ ಮಂಡಿಸಲಿದ್ದಾರೆ
ಸಮಯ 9.30 : ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆಯ ಹಿನ್ನಲೆಯಲ್ಲಿ ಬಾಂಬೆ ಹೈಕೋರ್ಟ್ ಸುತ್ತ-ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications