ಬಿಸೋ ದೊಣ್ಣೆಯಿಂದ ಪಾರಾದ ಸಲ್ಮಾನ್ ಖಾನ್
ಮುಂಬೈ, ಮೇ 8 : ಮುಂಬೈ ಸೆಷನ್ಸ್ ಕೋರ್ಟ್ 2002ರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ಅವರಿಗೆ ವಿಧಿಸಿದ್ದ 5 ವರ್ಷದ ಜೈಲು ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಅಮಾನತುಗೊಳಿಸಿದೆ. ಶುಕ್ರವಾರ ಸಲ್ಮಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಈ ಆದೇಶ ನೀಡಿದೆ.
ಮೇ 6 ರ ಬುಧವಾರ ಮುಂಬೈ ಸೆಷೆನ್ಸ್ ಕೋರ್ಟ್ ಸಲ್ಮಾನ್ ಖಾನ್ ಅವರಿಗೆ 5 ವರ್ಷದ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ನೀಡಿತ್ತು. [ಸಲ್ಮಾನ್ ಜೈಲು ತಪ್ಪಿಸಿಕೊಂಡಿದ್ದು ಹೇಗೆ?]
ಶುಕ್ರವಾರ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಅಭಯ್ ತಿಪ್ಸೆ ಅವರು ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು, ಸೆಷೆನ್ಸ್ ಕೋರ್ಟ್ಗೆ ಶರಣಾಗಿ ಜಾಮೀನು ಪಡೆಯುವಂತೆ ಆದೇಶ ನೀಡಿದರು. [ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ : ಸತ್ತ ನೂರುಲ್ಲಾ ಪತ್ನಿ]

ಸಮಯ 5.51 : ಜಾಮೀನು ಪಡೆದು ನಿವಾಸಕ್ಕೆ ವಾಪಸ್ ಹೊರಟ ಸಲ್ಮಾನ್ ಖಾನ್
ಸಮಯ 5.41 : ಬಾಂಬೆ ಹೈಕೋರ್ಟ್ ಆದೇಶದಂತೆ 30 ಸಾವಿರ ರೂ. ವೈಯಕ್ತಿಕ ಬಾಂಡ್ಗೆ ಸಹಿ ಹಾಕಿ ಸಲ್ಮಾನ್ ಜಾಮೀನು ಪ್ರಕ್ರಿಯೆಗಳನ್ನು ಮುಗಿಸಬೇಕಾಗಿದೆ.
ಸಮಯ 5.30 : ಬಾಂಬೆ ಹೈಕೋರ್ಟ್ ಆದೇಶದಂತೆ ಕೋರ್ಟ್ಗೆ ಶರಣಾದ ಸಲ್ಮಾನ್ ಖಾನ್
ಸಮಯ 12.50 : ಸಲ್ಮಾನ್ ಖಾನ್ ಬಾಂದ್ರಾ ನಿವಾಸದ ಮುಂದೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸುತ್ತಿದ್ದಾರೆ
ಸಮಯ 12.37 : ಸಲ್ಮಾನ್ ಸೆಷನ್ಸ್ ಕೋರ್ಟ್ಗೆ ಶರಣಾಗಿ ಷರತ್ತು ಬದ್ಧ ಜಾಮೀನು ಪಡೆಯಬೇಕು
ಸಮಯ 12.35 : ಸಲ್ಮಾನ್ ಖಾನ್ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟ ಬಾಂಬೆ ಹೈಕೋರ್ಟ್, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ
ಸಮಯ 12.27 : ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸುವಾಗ ಅವರನ್ನು ಜೈಲಿಗೆ ಏಕೆ ಕಳಿಸಬೇಕು?, ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ನಿಮ್ಮ ವಿರೋಧವೇಕೆ? ಎಂದು ಜಡ್ಜ್ ಅಭಯ್ ತಿಪ್ಸೆ ಸಂದೀಪ್ ಶಿಂಧೆ ಅವರನ್ನು ಪ್ರಶ್ನಿಸಿದರು
ಸಮಯ 12.15 : ಸಲ್ಮಾನ್ ಖಾನ್ಗೆ ಜಾಮೀನು ದೊರೆಯಲಿ ಎಂದು ಅಭಿಮಾನಿಗಳು ವಿಶೇಷ ಪೂಜೆ ನಡೆಸುತ್ತಿದ್ದಾರೆ. ವಾರಣಾಸಿಯಲ್ಲಿ ಪೂಜೆ ನಡೆಯುತ್ತಿದೆ.
#SalmanBailOrJail Prayers being offered for @BeingSalmanKhan in Varanasi. via @ANI_news pic.twitter.com/DqdhyfOLP5
— CNN-IBN News (@ibnlive) May 8, 2015 ಸಮಯ 12.09 : ಕಮಲ್ ಖಾನ್ ಈಗ ಬ್ರಿಟನ್ನಲ್ಲಿ ನೆಲೆಸಿದ್ದು, ಅಲ್ಲಿಯ ಪೌರತ್ವ ಪಡೆದುಕೊಂಡಿದ್ದಾರೆ. ಆದ್ದರಿಂದ ಅವರ ವಿಚಾರಣೆ ನಡೆಸಿಲ್ಲ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸಂದೀಪ್ ಶಿಂಧೆ ವಾದ ಮಂಡಿಸಿದರು [ಸಲ್ಮಾನ್ ಗುದ್ದೋಡು ಪ್ರಕರಣದ timeline]
ಸಮಯ 12 ಗಂಟೆ : ಸಲ್ಮಾನ್ ಪರ ವಕೀಲ ಅಮಿತ್ ದೇಸಾಯಿ ವಾದ ಮಂಡನೆ ಮುಕ್ತಾಯ
ಸಮಯ 11.58 : ಬಾಂಬೆ ಹೈಕೋರ್ಟ್ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಲ್ಮಾನ್ ಖಾನ್ ಅಭಿಮಾನಿ
A fan of Salman Khan tried to attempt suicide outside Mumbai HC, now taken to hospital #SalmanVerdict
— ANI (@ANI_news) May 8, 2015 ಸಮಯ 11.42 : ಘಟನೆ ನಡೆದ ದಿನ ಸಲ್ಮಾನ್ ಖಾನ್ ಕಾರು ಓಡಿಸುತ್ತಿದ್ದರು ಎಂಬುದನ್ನು ಸಾಬೀತು ಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಮಿತ್ ದೇಸಾಯಿ ವಾದ ಮಂಡಿಸಿದರು
Altaf was the one who was driving that day: Amit Desai #SalmanVerdict
— ANI (@ANI_news) May 8, 2015 ಸಮಯ 11.35 : ಘಟನೆ ನಡೆದ ದಿನ ಸಲ್ಮಾನ್ ಸ್ನೇಹಿತ ಕಮಲ್ ಖಾನ್ ಕಾರಿನಲ್ಲಿದ್ದರು. ಆದರೆ, ಸೆಷನ್ಸ್ ಕೋರ್ಟ್ ಅವರ ಹೇಳಿಕೆಯನ್ನು ಪಡೆದಿಲ್ಲ ಎಂದು ಅಮಿತ್ ದೇಸಾಯಿ ವಾದ ಮಂಡಿಸಿದರು
ಸಮಯ 11.30 : ಸಲ್ಮಾನ್ ಖಾನ್ ಬಾಡಿಗಾರ್ಡ್ ರವೀಂದ್ರ ಪಾಟೀಲ್ ನೀಡಿರುವ ಹೇಳಿಕೆ ಪರಿಶೀಲಿಸುತ್ತಿರುವ ನ್ಯಾಯಮೂರ್ತಿಗಳು

ಸಮಯ 11.23 : ಸಲ್ಮಾನ್ ಖಾನ್ ಅವರಿಗೆ ಮುಂಬೈ ಸೆಷನ್ಸ್ ಕೋರ್ಟ್ ನೀಡಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಡಬೇಕು ಎಂದು ಅಮಿತ್ ದೇಸಾಯಿ ವಾದ ಮಂಡಿಸಿದರು.
Sentence should be suspended, it is not a matter of 304(2) but 304(1): Salman Khan's lawyer Amit Desai #SalmanVerdict
— ANI (@ANI_news) May 8, 2015 ಸಮಯ 11.20 : ಸಲ್ಮಾನ್ ಖಾನ್ಗೆ ಜಾಮೀನು ನೀಡಬಾರದು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸಂದೀಪ್ ಶಿಂಧೆ ಕೋರ್ಟ್ಗೆ ಆಕ್ಷೇಪಣೆ ಸಲ್ಲಿಸಿದರು
ಸಮಯ 11.14 : ನ್ಯಾಯಮೂರ್ತಿ ಅಭಯ್ ತಿಪ್ಸೆ ಅವರ ಪೀಠದಲ್ಲಿ ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಆರಂಭ
ಸಮಯ 10.45 : ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಬಾಂಬೆ ಹೈಕೋರ್ಟ್ ಮುಂದೆ ಫುಟ್ಪಾತ್ ವ್ಯಾಪಾರಿಗಳು ಪ್ರತಿಭಟನೆ ಆರಂಭಿಸಿದ್ದಾರೆ
ಸಮಯ 10.31 : ಸಲ್ಮಾನ್ ಖಾನ್ ಪ್ರಕರಣದ ಅರ್ಜಿಯ ವಿಚಾರಣೆ 11.15ಕ್ಕೆ ಆರಂಭವಾಗುವ ಸಾಧ್ಯತೆ ಇದೆ
ಸಮಯ 10.14 : ಪಬ್ಲಿಕ್ ಪ್ರಾಸಿಕ್ಯೂಟರ್ ಸಂದೀಪ್ ಶಿಂಧೆ ಬಾಂಬೆ ಹೈಕೋರ್ಟ್ಗೆ ಆಗಮಿಸಿದ್ದಾರೆ
Public Prosecutor Sandeep Shinde reaches HC for Salman Khan's hearing#SalmanVerdict
— ANI (@ANI_news) May 8, 2015 ಸಮಯ 10 ಗಂಟೆ : ಸಲ್ಮಾನ್ ಪರ ಹೈಕೋರ್ಟ್ನಲ್ಲಿ ಹರೀಶ್ ಸಾಳ್ವೆ ಬದಲು ಅಮಿತ್ ದೇಸಾಯಿ ವಾದ ಮಂಡಿಸಲಿದ್ದಾರೆ
ಸಮಯ 9.30 : ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆಯ ಹಿನ್ನಲೆಯಲ್ಲಿ ಬಾಂಬೆ ಹೈಕೋರ್ಟ್ ಸುತ್ತ-ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications