ಸಂಜಯ್ ದತ್ಗೆ ಕ್ಷಮಾದಾನ ಏಕೆ ಸಿಗಲಿಲ್ಲ?
ಮುಂಬೈ, ಸೆಪ್ಟೆಂಬರ್ 24 : ಬಾಲಿವುಡ್ ನಟ ಸಂಜಯ್ ದತ್ ಕ್ಷಮಾದಾನ ಅರ್ಜಿಯನ್ನು ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ ರಾವ್ ತಿರಸ್ಕರಿಸಿದ್ದಾರೆ. ಪದೇ-ಪದೇ ಪೆರೋಲ್ ಪಡೆದು ಹೊರಬರುತ್ತಿದ್ದ ಮುನ್ನಾಭಾಯಿಗೆ ಅದೇ ಸಂಕಷ್ಟ ತಂದೊಡ್ಡಿದೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯಡಿ ಸಂಜಯ್ ದತ್ ಅಪರಾಧಿ ಎಂದು ಸಾಬೀತಾಗಿದ್ದು, 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ದತ್ ಯರವಾಡ ಜೈಲಿನಲ್ಲಿ ಶಿಕ್ಷೆಯನ್ನು ಅನುಭವಿಸುತ್ತಿದ್ದು, ಸದ್ಯ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದಾರೆ. [ಮಹಾರಾಷ್ಟ್ರಕ್ಕೆ ತಲೆನೋವಾದ ದತ್]

ಸಂಜಯ್ ದತ್ಗೆ ಕ್ಷಮಾದಾನ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರು ಮಹಾರಾಷ್ಟ್ರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ರಾಜ್ಯಪಾಲ ವಿದ್ಯಾಸಾಗರ ರಾವ್ ಗುರುವಾರ ತಿರಸ್ಕರಿಸಿದ್ದಾರೆ. [ಹೆಂಡ್ತೀನ್ನ ನೋಡ್ಕೋಬೇಕು; ಪೆರೋಲ್ ಕೊಡಿ]
ಸರ್ಕಾರದ ವರದಿ : ಕ್ಷಮಾದಾನ ಅರ್ಜಿಯನ್ನು ರಾಜ್ಯಪಾಲರು ಪರಿಶೀಲನೆ ನಡೆಸುವಾಗ ಮಹಾರಾಷ್ಟ್ರ ಗೃಹ ಸಚಿವಾಲಯದ ವರದಿಯನ್ನು ತರಿಸಿಕೊಂಡಿದ್ದಾರೆ. ಕ್ಷಮಾದಾನ ನೀಡುವುದು ಸರಿಯಲ್ಲ ಎಂದು ತನ್ನ ವರದಿಯಲ್ಲಿ ಸಚಿವಾಲಯ ಸ್ಪಷ್ಟಪಡಿಸಿತ್ತು. [ಟಾಡಾ ಕೋರ್ಟಿಗೆ ಶರಣಾದ ಸಂಜಯ್ ದತ್]
1996ರಲ್ಲಿ ಜೈಲು ಪಾಲಾಗಿದ್ದ ದತ್, 18 ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು. 2013ರಲ್ಲಿ ಸುಪ್ರೀಂಕೋರ್ಟ್ ಸಂಜಯ್ ದತ್ ಪೂರ್ಣ ಶಿಕ್ಷೆಯನ್ನು ಅನುಭವಿಸಬೇಕು ಎಂದು ಮತ್ತೆ ಜೈಲಿಗೆ ಕಳುಹಿಸಿತ್ತು. ಈ ಅಂಶವನ್ನು ಪರಿಗಣಿಸಿ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಸಂಜತ್ ದತ್ ಜೈಲಿಗೆ ಹೋದ ದಿನದಿಂದ ವಿವಾದಗಳು ಹುಟ್ಟಿಕೊಳ್ಳುತ್ತಿದ್ದು ಇವುಗಳನ್ನು ರಾಜ್ಯಪಾಲರು ಪರಿಗಣಿಸಿದ್ದಾರೆ. ದತ್ ಜೈಲಿನ ಅವಧಿ 2016ರ ಫೆಬ್ರವರಿಗೆ ಕೊನೆಗೊಳ್ಳಲಿದೆ. ಆದರೆ, ಈಗಾಗಲೇ ದತ್ 118 ದಿನಗಳ ಪೆರೋಲ್ ಪಡೆದಿದ್ದಾರೆ. ದತ್ಗೆ ಹಲವು ಬಾರಿ ಹೇಗೆ ಪೆರೋಲ್ ಸಿಕ್ಕಿದೆ? ಎಂಬುದು ಇನ್ನೂ ನಿಗೂಢ.
ದತ್ಗೆ ಪದೇ ಪದೇ ಪೆರೋಲ್ ಸಿಗುತ್ತಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪೆರೋಲ್ ಬಗ್ಗೆ ಪುಣೆಯ ಯರವಾಡ ಜೈಲಿನಿಂದ ವರದಿ ತರಿಸಿಕೊಂಡಿದ್ದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ದತ್ ಕ್ಷಮಾದಾನ ಅರ್ಜಿಯನ್ನು ತಿರಸ್ಕಾರ ಮಾಡಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications