ಸಂಜಯ್ ದತ್ಗೆ ಕ್ಷಮಾದಾನ ಏಕೆ ಸಿಗಲಿಲ್ಲ?
ಮುಂಬೈ, ಸೆಪ್ಟೆಂಬರ್ 24 : ಬಾಲಿವುಡ್ ನಟ ಸಂಜಯ್ ದತ್ ಕ್ಷಮಾದಾನ ಅರ್ಜಿಯನ್ನು ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ ರಾವ್ ತಿರಸ್ಕರಿಸಿದ್ದಾರೆ. ಪದೇ-ಪದೇ ಪೆರೋಲ್ ಪಡೆದು ಹೊರಬರುತ್ತಿದ್ದ ಮುನ್ನಾಭಾಯಿಗೆ ಅದೇ ಸಂಕಷ್ಟ ತಂದೊಡ್ಡಿದೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯಡಿ ಸಂಜಯ್ ದತ್ ಅಪರಾಧಿ ಎಂದು ಸಾಬೀತಾಗಿದ್ದು, 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ದತ್ ಯರವಾಡ ಜೈಲಿನಲ್ಲಿ ಶಿಕ್ಷೆಯನ್ನು ಅನುಭವಿಸುತ್ತಿದ್ದು, ಸದ್ಯ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದಾರೆ. [ಮಹಾರಾಷ್ಟ್ರಕ್ಕೆ ತಲೆನೋವಾದ ದತ್]

ಸಂಜಯ್ ದತ್ಗೆ ಕ್ಷಮಾದಾನ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರು ಮಹಾರಾಷ್ಟ್ರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ರಾಜ್ಯಪಾಲ ವಿದ್ಯಾಸಾಗರ ರಾವ್ ಗುರುವಾರ ತಿರಸ್ಕರಿಸಿದ್ದಾರೆ. [ಹೆಂಡ್ತೀನ್ನ ನೋಡ್ಕೋಬೇಕು; ಪೆರೋಲ್ ಕೊಡಿ]
ಸರ್ಕಾರದ ವರದಿ : ಕ್ಷಮಾದಾನ ಅರ್ಜಿಯನ್ನು ರಾಜ್ಯಪಾಲರು ಪರಿಶೀಲನೆ ನಡೆಸುವಾಗ ಮಹಾರಾಷ್ಟ್ರ ಗೃಹ ಸಚಿವಾಲಯದ ವರದಿಯನ್ನು ತರಿಸಿಕೊಂಡಿದ್ದಾರೆ. ಕ್ಷಮಾದಾನ ನೀಡುವುದು ಸರಿಯಲ್ಲ ಎಂದು ತನ್ನ ವರದಿಯಲ್ಲಿ ಸಚಿವಾಲಯ ಸ್ಪಷ್ಟಪಡಿಸಿತ್ತು. [ಟಾಡಾ ಕೋರ್ಟಿಗೆ ಶರಣಾದ ಸಂಜಯ್ ದತ್]
1996ರಲ್ಲಿ ಜೈಲು ಪಾಲಾಗಿದ್ದ ದತ್, 18 ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು. 2013ರಲ್ಲಿ ಸುಪ್ರೀಂಕೋರ್ಟ್ ಸಂಜಯ್ ದತ್ ಪೂರ್ಣ ಶಿಕ್ಷೆಯನ್ನು ಅನುಭವಿಸಬೇಕು ಎಂದು ಮತ್ತೆ ಜೈಲಿಗೆ ಕಳುಹಿಸಿತ್ತು. ಈ ಅಂಶವನ್ನು ಪರಿಗಣಿಸಿ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಸಂಜತ್ ದತ್ ಜೈಲಿಗೆ ಹೋದ ದಿನದಿಂದ ವಿವಾದಗಳು ಹುಟ್ಟಿಕೊಳ್ಳುತ್ತಿದ್ದು ಇವುಗಳನ್ನು ರಾಜ್ಯಪಾಲರು ಪರಿಗಣಿಸಿದ್ದಾರೆ. ದತ್ ಜೈಲಿನ ಅವಧಿ 2016ರ ಫೆಬ್ರವರಿಗೆ ಕೊನೆಗೊಳ್ಳಲಿದೆ. ಆದರೆ, ಈಗಾಗಲೇ ದತ್ 118 ದಿನಗಳ ಪೆರೋಲ್ ಪಡೆದಿದ್ದಾರೆ. ದತ್ಗೆ ಹಲವು ಬಾರಿ ಹೇಗೆ ಪೆರೋಲ್ ಸಿಕ್ಕಿದೆ? ಎಂಬುದು ಇನ್ನೂ ನಿಗೂಢ.
ದತ್ಗೆ ಪದೇ ಪದೇ ಪೆರೋಲ್ ಸಿಗುತ್ತಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪೆರೋಲ್ ಬಗ್ಗೆ ಪುಣೆಯ ಯರವಾಡ ಜೈಲಿನಿಂದ ವರದಿ ತರಿಸಿಕೊಂಡಿದ್ದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ದತ್ ಕ್ಷಮಾದಾನ ಅರ್ಜಿಯನ್ನು ತಿರಸ್ಕಾರ ಮಾಡಲಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications