ರಾವುತ್ ಬೆಂಬಲಕ್ಕೆ ಮಲ್ಲಿಕಾರ್ಜುನ ಖರ್ಗೆ: ಇಡಿ ಮೂಲಕ ಪ್ರತಿಪಕ್ಷಗಳನ್ನು ಹತ್ತಿಕ್ಕು ಪ್ರಯತ್ನ ಎಂದು ಆರೋಪ
ನವದೆಹಲಿ, ಆಗಸ್ಟ್. 1: ಬಂಧನಕ್ಕೊಳಗಾಗಿರುವ ಸಂಜಯ್ ರಾವುತ್ ಅವರನ್ನು ಬೆಂಬಲಿಸಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸರ್ಕಾರ ಪ್ರತಿಪಕ್ಷ ನಾಯಕರಿಗೆ ಕಿರುಕುಳ ನೀಡುವ ಮೂಲಕ ಸಂಸತ್ತಿನಲ್ಲಿ ಪ್ರತಿಪಕ್ಷಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಸಂಜಯ್ ರಾವುತ್ ಅವರು ಪಕ್ಷ ಹಾಗೂ ಪತ್ರಿಕೆ ನಡೆಸುತ್ತಿದ್ದಾರೆ. ಇಡಿ ತನಿಖೆ ವೇಳೆ ಅವರ ಮನೆಯಲ್ಲಿ 11 ಲಕ್ಷ ರೂಪಾಯಿ ಪತ್ತೆಯಾಗಿದ್ದು, ಅದರ ಆಧಾರದ ಮೇಲೆ ಇಡಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಇನ್ನು ಸಹ ಆಸ್ತಿ ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ಬದಲಾಗಿ ಇವರು ಗಂಟೆಗಟ್ಟಲೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.
ಸಂಜಯ್ ರಾವುತ್ ಅವರು ರಾಜ್ಯಸಭಾ ಸದಸ್ಯರಾಗಿದ್ದಾರೆ. ನೀವು ಅವರನ್ನು ಪ್ರತಿದಿನ ನೋಡುತ್ತೀರಿ. ಇಲ್ಲಿ ವಿರೋಧ ಪಕ್ಷವನ್ನು ಮುಗಿಸುವ ಧ್ಯೇಯವಾಕ್ಯದೊಂದಿಗೆ ಸಂಪೂರ್ಣವಾಗಿ ಕಿರುಕುಳ ನೀಡಲಾಗುತ್ತಿದೆ. ವಿರೋಧ ಮುಕ್ತ ಸಂಸತ್ತು ಮಾಡುವ ಹಿನ್ನೆಲೆಯಲ್ಲಿ ವಿರೋಧ ಪಕ್ಷವನ್ನು ಮುಗಿಸುವ ಚರ್ಚೆ ನಡೆಯುತ್ತಿದೆ. ಅದಕ್ಕಾಗಿಯೇ ಅವರು ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಆದರೆ ಸಂಜಯ್ ರಾವುತ್ ಕಾನೂನು ಹೋರಾಟ ನಡೆಸಲಿದ್ದಾರೆ ಎಂದು ಖರ್ಗೆ ಹೇಳಿದರು.
ಸಂಜಯ್ ರಾವತ್ ಬಂಧನ; ಏನಿದು 'ಪಾತ್ರ ಚಾಲ್' ಹಗರಣ?
ಪ್ರತಿಪಕ್ಷಗಳಿಂದ ಸಂಸತ್ತಿನಲ್ಲಿ ಒಂದೇ ಒಂದು ಸಮಸ್ಯೆ ಇಲ್ಲ. ಪ್ರತಿಭಟನೆಯನ್ನು ಅವರು ಸಂಸತ್ತಿನಲ್ಲಿ ವಿವಿಧ ರೀತಿಯಲ್ಲಿ ಕೈಗೆತ್ತಿಕೊಳ್ಳುತ್ತಾರೆ. ಈಗಾಗಲೇ ರಾಜ್ಯಸಭೆಯಲ್ಲಿ ಹಣದುಬ್ಬರವು ಹೆಚ್ಚಳದ ಬಗ್ಗೆ ನಾವು ಹೋರಾಡುತ್ತಿದ್ದೇವೆ. ಗುಜರಾತ್ನ ಕಳ್ಳಭಟ್ಟಿ ದುರಂತವು ಇಲ್ಲಿ ಒಂದು ಪ್ರಮುಖ ವಿಷಯವಾಗಿದೆ. ಇದರಲ್ಲಿ ಪ್ರಧಾನಿ ಮತ್ತು ಗೃಹ ಸಚಿವರ ತವರು ರಾಜ್ಯದಲ್ಲಿ ಬಹಳಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಷಯಗಳ ಬಗ್ಗೆ ನಮ್ಮ ಸದಸ್ಯರು ಸಭಾಧ್ಯಕ್ಷರಿಗೆ ನೋಟಿಸ್ ನೀಡಿದ್ದು, ಅದನ್ನು ಮುಂದುವರಿಸುತ್ತೇವೆ ಎಂದು ಅವರು ವಿವರಿಸಿದರು.
ಸ್ವಪ್ನಾ ಪಾಟ್ಕರ್ಗೆ ಸಂಜಯ್ ರಾವತ್ ಬೆದರಿಕೆ
ಇದಕ್ಕೂ ಮುನ್ನ ಜುಲೈ 31ರ ತಡರಾತ್ರಿಯಲ್ಲಿ ಹೊಸ ಬೆಳವಣಿಗೆಯೊಂದು ನಡೆದಿದ್ದು, ಶಿವಸೇನಾ ನಾಯಕನ ಆಪ್ತ ಸಹಾಯಕ ಸುಜಿತ್ ಪಾಟ್ಕರ್ ಅವರ ಪತ್ನಿ ಸ್ವಪ್ನಾ ಪಾಟ್ಕರ್ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಮುಂಬೈನಲ್ಲಿ ಸಂಜಯ್ ರಾವುತ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವಕೋಲಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504, 506 ಮತ್ತು 509 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಪ್ನಾ ಅವರ ಆಡಿಯೋ ಕ್ಲಿಪ್ ವೈರಲ್ ಆಗಿದ್ದು, ರಾವುತ್ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.
Breaking:ಸಂಜಯ್ ರಾವತ್ ಬಂಧನ, ಶಿವಸೇನೆಯಿಂದ ಬೃಹತ್ ಪ್ರತಿಭಟನೆ
ಸಂಜಯ್ ಸಹೋದರ ಸುನೀಲ್ ರಾವುತ್ ಹೇಳಿಕೆ
ಸ್ವಪ್ನಾ ಪಾಟ್ಕರ್ ಪತ್ರಾ ಚಾಲ್ ಭೂ ಪ್ರಕರಣದಲ್ಲಿ ಸಾಕ್ಷಿಯಾಗಿದ್ದಾರೆ. ಇದಕ್ಕಾಗಿ ಜಾರಿ ನಿರ್ದೇಶನಾಲಯವು ರಾವುತ್ ಅವರನ್ನು ಅವರ ನಿವಾಸದಲ್ಲಿ ಗಂಟೆಗಳ ವಿಚಾರಣೆ ನಂತರ ಭಾನುವಾರ ಬಂಧಿಸಿದೆ. ಭಾನುವಾರ ಬಂಧಿತವಾಗಿರುವ ಸಂಜಯ್ ರಾವುತ್ ಅವರನ್ನು ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸಂಜಯ್ ಸಹೋದರ ಸುನೀಲ್ ರಾವುತ್ ತಿಳಿಸಿದ್ದಾರೆ.
ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರು
ಈ ಮಧ್ಯೆ ಇಡಿ ಅಧಿಕಾರಿಗಳು ಸೋಮವಾರ ಶಿವಸೇನಾ ಸಂಸದ ಸಂಜಯ್ ರಾವುತ್ ಅವರನ್ನು ತಪಾಸಣೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪಿಟಿಐ ವರದಿಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದ ನಂತರ ಇಡಿ ದಕ್ಷಿಣ ಮುಂಬೈ ಕಚೇರಿಯಲ್ಲಿ ರಾತ್ರಿ ಕಳೆದ ರಾವುತ್ ಅವರನ್ನು ಸೋಮವಾರ ಮಧ್ಯಾಹ್ನ 12.30 ರ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಏಜೆನ್ಸಿಯ ಕಚೇರಿಯ ಹೊರಗೆ ನೆರೆದಿದ್ದ ಮಾಧ್ಯಮದ ಸಿಬ್ಬಂದಿಗೆ ಕೈ ಬೀಸುತ್ತಿರುವುದು ಕಂಡುಬಂದಿತು.
ತನಿಖೆಗೆ ಸಹಕರಿಸಲಿಲ್ಲ: ಇಡಿ ಅಧಿಕಾರಿಗಳು
ಭಾನುವಾರ ಮಧ್ಯರಾತ್ರಿಯ ನಂತರ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ನಲ್ಲಿರುವ ಇಡಿಯ ವಲಯ ಕಚೇರಿಯಲ್ಲಿ ಆರು ಗಂಟೆಗಳ ಕಾಲ ವಿಚಾರಣೆಯ ನಂತರ 60 ವರ್ಷದ ರಾವುತ್ ಅವರನ್ನು ಬಂಧಿಸಲಾಯಿತು. ಸೋಮವಾರ 12:05 ಗಂಟೆಗೆ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಅವರು ತನಿಖೆಗೆ ಸಹಕರಿಸಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.