ಹಿಂದಿಯನ್ನು ರಾಷ್ಟ್ರೀಯ ಭಾಷೆಯಾಗಿ ಸ್ವೀಕರಿಸಬಹುದು: ಸಂಜಯ್ ರಾವತ್
ಮುಂಬೈ: ದಕ್ಷಿಣ ಭಾರತದಲ್ಲಿ ಹಿಂದೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಸಿನಿಮಾ ರಂಗದಲ್ಲೂ ವಾದ-ವಿವಾದಗಳು ಜರುತ್ತಿವೆ. ಇದರ ಮಧ್ಯ ಶಿವಸೇನಾ ಮುಖಂಡ ಸಂಜಯ್ ರಾವತ್ 'ಒಂದು ದೇಶ, ಒಂದು ಭಾಷೆ' ಪರ ಬೆಂಬಲ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಹಿಂದಿ ಹೆಚ್ಚು ಜನರು ಮಾತನಾಡುವ ಭಾಷೆಯಾಗಿದ್ದು, ಅದನ್ನು ರಾಷ್ಟ್ರ ಭಾಷೆಯನ್ನಾಗಿ ಸ್ವೀಕರಿಸಬಹುದು ಎಂದು ಶನಿವಾರ ಹೇಳಿದ್ದಾರೆ. ಜೊತೆಗೆ ಕೇಂದ್ರ ಗೃಹ ಸಚಿವಾ ಅಮಿತ್ ಶಾ ಅವರು ಎಲ್ಲಾ ರಾಜ್ಯಗಳಲ್ಲಿ, ಒಂದು ಭಾಷೆಯ ಸವಾಲನ್ನು ಸ್ವೀಕರಿಸಬೇಕೆಂದು ತಿಳಿಸಿದ್ದಾರೆ.
ಹಿಂದಿ ರಾಷ್ಟ್ರೀಯ ಭಾಷೆಯಾಗಬೇಕೆಂದಿದ್ದ ಶಾ
ತಿಂಗಳ ಹಿಂದೆ ಗೃಹ ಸಚಿವಾ ಅಮಿತ್ ಶಾ ಒಂದು ದೇಶ, ಒಂದು ಭಾಷೆ ಯನ್ನು ಪ್ರತಿಪಾದಿಸಿ ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಸ್ವೀಕರಿಸಬೇಕು ಎಂದು ಹೇಳಿದ್ದರು. ನಂತರ ಸ್ಯಾಂಡಲ್ವುಡ್ ನಟ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ರಾಷ್ಟ್ರೀಯ ವಿಷಯವಾಗಿ ನಡೆದಿದ್ದ ವಾದ ದೇಶವ್ಯಾಪಿ ಚರ್ಚೆಯಾಗಿತ್ತು. ಇದೀಗ ರಾವತ್ ಹಿಂದಿ ಭಾಷೆಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬಹುದು ಎಂದು ಹೇಳಿಕೆ ನೀಡಿ ಮತ್ತೆ ವಿವಾದಕ್ಕೆ ತುಪ್ಪ ಸುರಿದಿದ್ದಾರೆ.

ಪಾನೀಪುರಿ ಮಾರುವವರು ಹಿಂದಿ ಮಾತನಾಡ್ತಾರೆ
ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಹಿಂದೆ ಏರಿಕೆ ಬಗ್ಗೆ ಮಾತನಾಡಿದ್ದ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಹಿಂದಿ ಕಲಿತವರು ಕೊಯಮತ್ತೂರಿನಲ್ಲಿ ಪಾನೀಪುರಿ ಮಾರುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು. ಅಂತಾರಾಷ್ಟ್ರೀಯ ಭಾಷೆಯಾಗಿರುವ ಇಂಗ್ಲಿಷ್ ಹಿಂದಿ ಭಾಷೆಗಿಂತಲೂ ಹೆಚ್ಚು ಮೌಲ್ಯಯುತವಾಗಿದೆ . ಹಿಂದಿ ಕಲಿಯಲು ತಮಿಳುನಾಡು ವಿದ್ಯಾರ್ಥಿಗಳು ಸಿದ್ಧರಿದ್ದಾರೆ. ಆದರು ಅದು ಐಚ್ಛಿಕವಾಗಿರಬೇಕೆ ಹೊರತು, ಕಡ್ಡಾಯವಾಗಿರಬಾರದು ಎಂದು ಅವರು ತಿಳಿಸಿದ್ದರು.
ಇಡೀ ದೇಶ ಒಪ್ಪಿಕೊಳ್ಳಬಹುದಾ ಒಂದೇ ಭಾಷೆ ಹಿಂದಿ ಮಾತ್ರ
ತಮಿಳುನಾಡಿನ ಸಚಿವರ ಹೇಳಿಕೆಗೆ ಶನಿವಾರ ಪ್ರತಿಕ್ರಿಯಿಸಿರುವ ಮೂಲತಃ ಮರಾಠಿಗರಾಗಿರು ರಾವತ್, ತಾವು ಮತ್ತು ತಮ್ಮ ಪಕ್ಷ ಹಿಂದಿ ಭಾಷೆಗೆ ಸದಾ ಗೌರವ ನೀಡುವುದಾಗಿ ತಿಳಿಸಿದ್ದಾರೆ. " ಹಿಂದಿಯಲ್ಲಿ ಮಾತನಾಡುವ ಅವಕಾಶ ಯಾವಾಗ ಸಿಕ್ಕರೂ ನಾನು ಹಿಂದಿಯಲ್ಲಿ ಮಾತನಾಡಲು ಬಯಸುತ್ತೇನೆ. ಏಕೆಂದರೆ ದೇಶದ ಜನತೆ ನಾನು ಮಾತನಾಡುವುದನ್ನು ಕೇಳಬೇಕೆಂದು ನಾನು ಬಯಸುತ್ತೇನೆ. ಇಡೀ ದೇಶ ಒಪ್ಪಿಕೊಳ್ಳಬಹುದಾದ ಏಕೈಕ ಭಾಷೆ ಎಂದರೆ ಹಿಂದಿ ಮಾತ್ರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಎಲ್ಲಾ ರಾಜ್ಯಗಳಲ್ಲೂ ಒಂದೇ ಭಾಷೆ ಇರಬೇಕು
ನಾನು ಯಾವುದೇ ಭಾಷೆಯನ್ನು ಅವಮಾನಿಸುತ್ತಿಲ್ಲ. ಆದರೆ ಒಂದು ದೇಶ, ಒಂದು ಸಂವಿಧಾನ, ಒಂದು ಲಾಂಛನ ಹೇಗಿ ಇದಿಯೋ, ಹಾಗೆ ದೇಶದಲ್ಲಿ ಒಂದು ಭಾಷೆ ಇರಬೇಕು. ಎಲ್ಲಾ ರಾಜ್ಯಗಳಲ್ಲಿ ಒಂದೇ ಭಾಷೆ ಇರಬೇಕು ಎಂಬ ಈ ಸವಾಲನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವೀಕರಿಸಬೇಕು ಎಂದು ಶಿವಸೇನಾ ಮುಖಂಡ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications