ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕಾಂಗ್ರೆಸ್ಸಿನಿಂದ ಹಿರಿಯ ನಾಯಕ ಸತೀಶ್ ಉಚ್ಚಾಟನೆ
ಮುಂಬೈ(ಮಹಾರಾಷ್ಟ್ರ), ಫೆಬ್ರವರಿ 23: ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಚತುರ್ವೇದಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪ ಹೊರೆಸಲಾಗಿದೆ. ಮಹಾರಾಷ್ಟ್ರದ ಮಾಜಿ ಸಚಿವ ಸತೀಶ್ ರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯು ಗುರುವಾರ(ಫೆಬ್ರವರಿ 23) ದಂದು ಪತ್ರಿಕಾ ಪ್ರಕಟಣೆ ಹೊರಡಿಸಿ, ಈ ಕೂಡಲೇ ಹಿರಿಯ ನಾಯಕ ಸತೀಶ್ ಚತುರ್ವೇದಿ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ ಎಂದು ತಿಳಿಸಿದೆ.
2017ರಲ್ಲಿ ನಡೆದ ನಾಗ್ಪುರ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳ ಪರ ನಿಂತು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರು. ಇದರಿಂದಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲುಂಟಾಯಿತು.
ಈ ಕುರಿತಂತೆ ಜನವರಿ 23ರಂದು ಸತೀಶ್ ಚತುರ್ವೇದಿ ಅವರಿಗೆ ಶೋಕಾಸ್ ನೋಟಿಸ್ ನೀಡಿ, ಈ ಬಗ್ಗೆ ಸ್ಪಷ್ಟನೆ ಕೋರಲಾಗಿತ್ತು. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಅವರ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಲಾಗಿದ್ದು, ಪಕ್ಷದಿಂದ ಉಚ್ಚಾಟಿಸಲಾಗಿದೆ.
Comments
English summary
Senior Congress leader Satish Chaturvedi was expelled from the party for anti-party activities on Friday.
Story first published: Friday, February 23, 2018, 17:31 [IST]