ವಿಜ್ಞಾನ, ತಂತ್ರಜ್ಞಾನ ಬಿಟ್ಟು ಅಭಿವೃದ್ಧಿ ಅಸಾಧ್ಯ : ಮೋದಿ
ಮುಂಬಯಿ, ಜ. 3: ಭಾರತದ ಅಭಿವೃದ್ಧಿಯು ವಿಜ್ಞಾನ ಮತ್ತು ತಂತ್ರಜ್ಞಾನದೊಂದಿಗೆ ನೇರ ಸಂಬಂಧ ಹೊಂದಿದೆ. ಈ ಸಂಬಂಧವನ್ನು ಯಾವುದೇ ರಾಜಕೀಯ ಪ್ರೇರಿತ ನಿರ್ಧಾರವಾಗಲಿ, ಸಮಾಜದ ಒಲವಾಗಲಿ, ಇಕ್ವಿಟಿ, ನೈತಿಕತೆ ಇನ್ನಿತರ ಕಾರಣಗಳಿಂದ ಬೇರ್ಪಡಿಸುವುದು ಸಾಧ್ಯವೇ ಇಲ್ಲ...
ಮುಂಬಯಿ ವಿಶ್ವವಿದ್ಯಾಲಯದಲ್ಲಿ ಶನಿವಾರ ಆರಂಭವಾದ ಐದು ದಿನಗಳ 102ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (ಐಎಸ್ಸಿ) ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ ಮಾತುಗಳಿವು. ತಮ್ಮ ಭಾಷಣದಾದ್ಯಂತ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ಮೋದಿ ಒತ್ತಿ ಹೇಳಿದರು. ಇದಕ್ಕಾಗಿ ಶಿಕ್ಷಣ ಕ್ಷೇತ್ರದ ಪಾತ್ರವೂ ಅಗತ್ಯ ಎಂದರು. [ಎಸ್.ಎಲ್. ಬೈರಪ್ಪ ಕಾದಂಬರಿ ಯಾನ ವಿಮರ್ಶೆ]

ನರೇಂದ್ರ ಮೋದಿ ಹೇಳಿದ 10 ಪ್ರಮುಖ ಅಂಶಗಳು ಹೀಗಿವೆ...
1) ಸ್ಪರ್ಧಾತ್ಮಕತೆಯು ಇತರರು ಏನು ಮಾಡುತ್ತಿದ್ದಾರೆಂಬುದನ್ನು ಆಧರಿಸಿರುವುದಿಲ್ಲ. ನಿರಂತರ ಅಭಿವೃದ್ಧಿ ಹಾಗೂ ಸಂಶೋಧನೆಯನ್ನು ಅವಲಂಬಿಸಿದೆ.
2) ಆಡಳಿತ ಮತ್ತು ಅಭಿವೃದ್ಧಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬೇರ್ಪಡಿಸುವುದು ಸಾಧ್ಯವಿಲ್ಲ.
3) ವಿಜ್ಞಾನ ಮತ್ತು ತಂತ್ರಜ್ಞಾನ ದೇಶಗಳ ನಡುವಿನ ಅಂತರ ಕಡಿಮೆ ಮಾಡಬಲ್ಲದು, ಜಗತ್ತನ್ನು ಒಗ್ಗೂಡಿಸಬಲ್ಲದು ಹಾಗೂ ಶಾಂತಿ ತುಂಬಬಲ್ಲದು

4) ಭಾರತದ ಗ್ರಾಮೀಣ ಪ್ರದೇಶಗಳಿಗೆ ಸಹಕಾರಿಯಾಗುವ ತಂತ್ರಜ್ಞಾನ ಅಭಿವೃದ್ಧಿಪಡಿಸಬೇಕಾಗಿದೆ. ಆರೋಗ್ಯ ಅಭಿವೃದ್ಧಿ, ಉತ್ಪಾದನೆಯಲ್ಲಿ ಹೆಚ್ಚಳ, ಕೈಗಾರಿಕೆ ಬೆಳವಣಿಗೆ ಆಗಬೇಕಾಗಿದೆ.
5) ವಿಜ್ಞಾನ ಮತ್ತು ತಂತ್ರಜ್ಞಾನದಿಂದ ಯುದ್ಧ, ಅಸಮಾನತೆ, ಪರಿಸರ ನಾಶಗಳೂ ಹೆಚ್ಚಬಹುದು. ಇದರಿಂದ ಪಾರಾಗಲು ಬಡವರ ಅಭಿವೃದ್ಧಿ ಮತ್ತು ಸಮಾಜದಲ್ಲಿ ಅತ್ಯಂತ ನಿರ್ಲಕ್ಷಿತ ಜನರನ್ನು ತಲುಪುವ ಉದ್ದೇಶದಿಂದ ಸಂಶೋಧನೆ ನಡೆಸಬೇಕು. [ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಅಭಿವೃದ್ದಿ ಹೊಗಳಿದ ಪರಿಕ್ಕರ್]
6) ಭಾರತದಲ್ಲಿ ಡಿಜಿಟಲ್ ಸಂಪರ್ಕ ಹೆಚ್ಚಬೇಕು. ಶಾಲೆಗಳಲ್ಲಿಯೇ ಡಿಜಿಟಲ್ ಶಿಕ್ಷಣ ನೀಡಬೇಕು.

7) ವಿಜ್ಞಾನವು ಮಾನವನ ವಿದುಳಿನ ಕೊಡುಗೆಯೇ ಇರಬಹುದು. ಆದರೆ, ಮಿದುಳನ್ನು ನಮ್ಮ ಅಂತಃಕರಣವೇ ನಿಯಂತ್ರಿಸುತ್ತದೆ. ಆದ್ದರಿಂದ ವಿಜ್ಞಾನದ ಉದ್ದೇಶ ಮಾನವನ ಜೀವನವನ್ನು ಉತ್ತಮಗೊಳಿಸುವುದೇ ಆಗಿರಬೇಕು.
8) ಸಂಶೋಧನಾ ಪ್ರಸ್ತಾವನೆಗಳಿಗೆ ಅನುದಾನ ನೀಡಲು ಹೆಚ್ಚು ಸಮಯ ಪಡೆಯಬಾರದು. ಜೈವಿಕ ತಂತ್ರಜ್ಞಾನ, ನ್ಯಾನೋ ವಿಜ್ಞಾನ, ಕೃಷಿ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸ್ಪಷ್ಟ ನಿಯಂತ್ರಕ ಕಾರ್ಯನೀತಿಗಳು ಇರಬೇಕು. [ಅಮೆರಿಕಕ್ಕೆ ಹೊರಟ ಮಂಗಳೂರಿನ ವಿಜ್ಞಾನಿಗಳು]

9) ಸರ್ಕಾರದ ಪ್ರತಿ ಇಲಾಖೆಯ ಕಾರ್ಯಚಟುವಟಿಕೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಒತ್ತು ನೀಡಲು ಓರ್ವ ಅಧಿಕಾರಿ ಇರಬೇಕು. ಈ ನಿಟ್ಟಿನಲ್ಲಿ ಇಲಾಖೆಯ ಅನುದಾನದಲ್ಲಿ ಒಂದು ಭಾಗ ಉಪಯೋಗವಾಗುವಂತೆ ಆತ ನೋಡಿಕೊಳ್ಳಬೇಕು.
10) ಭಾರತೀಯ ಔಷಧ ಉದ್ಯಮಗಳು ಸಂಶೋಧನೆಯಲ್ಲಿ ಹೆಚ್ಚಿನ ಹಣ ತೊಡಗಿಸಿರುವ ಕಾರಣ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿವೆ. ಆದ್ದರಿಂದ ವಿಶ್ವವಿದ್ಯಾಲಯಗಳು ತೊಡಕಿನ ಕಾರ್ಯವಿಧಾನಗಳನ್ನು ಕಡಿಮೆ ಮಾಡಿ ಸಂಶೋಧನೆಯತ್ತ ಗಮನ ಕೇಂದ್ರೀಕರಿಸಬೇಕು. [ವಿಜ್ಞಾನಿಗಳ ಎದುರು ಪ್ರಣಬ್ ಮುಖರ್ಜಿ ಉಪನ್ಯಾಸ]

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಪ್ರತಿವರ್ಷ ನಡೆಸುವ ಭಾರತೀಯ ವಿಜ್ಞಾನ ಸಮಾವೇಶದಲ್ಲಿ ಜಗತ್ತಿನೆಲ್ಲೆಡೆಯಿಂದ ತಜ್ಞರು ಬಂದು ಪ್ರಬಂಧ ಮಂಡಿಸುತ್ತಾರೆ. ವಿಜ್ಞಾನ ಸಮಾವೇಶವನ್ನು 45 ವರ್ಷಗಳ ನಂತರ ಮುಂಬಯಿಯಲ್ಲಿ ನಡೆಸಲಾಗುತ್ತಿದೆ. ಮುಂಬಯಿಯು ಭಾರತದ ವಾಣಿಜ್ಯ ರಾಜಧಾನಿ ಎನ್ನಿಸಿಕೊಂಡಿದೆ. ಆದ್ದರಿಂದಲೇ ಇಲ್ಲಿ ಈ ಸಮಾವೇಶ ನಡೆಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.
Our future will be secure & global leadership possible, if we also prepare next gen of world class scientists,technologists & innovators: PM
— PMO India (@PMOIndia) January 3, 2015 -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications