ವಿಜ್ಞಾನ, ತಂತ್ರಜ್ಞಾನ ಬಿಟ್ಟು ಅಭಿವೃದ್ಧಿ ಅಸಾಧ್ಯ : ಮೋದಿ
ಮುಂಬಯಿ, ಜ. 3: ಭಾರತದ ಅಭಿವೃದ್ಧಿಯು ವಿಜ್ಞಾನ ಮತ್ತು ತಂತ್ರಜ್ಞಾನದೊಂದಿಗೆ ನೇರ ಸಂಬಂಧ ಹೊಂದಿದೆ. ಈ ಸಂಬಂಧವನ್ನು ಯಾವುದೇ ರಾಜಕೀಯ ಪ್ರೇರಿತ ನಿರ್ಧಾರವಾಗಲಿ, ಸಮಾಜದ ಒಲವಾಗಲಿ, ಇಕ್ವಿಟಿ, ನೈತಿಕತೆ ಇನ್ನಿತರ ಕಾರಣಗಳಿಂದ ಬೇರ್ಪಡಿಸುವುದು ಸಾಧ್ಯವೇ ಇಲ್ಲ...
ಮುಂಬಯಿ ವಿಶ್ವವಿದ್ಯಾಲಯದಲ್ಲಿ ಶನಿವಾರ ಆರಂಭವಾದ ಐದು ದಿನಗಳ 102ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (ಐಎಸ್ಸಿ) ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ ಮಾತುಗಳಿವು. ತಮ್ಮ ಭಾಷಣದಾದ್ಯಂತ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ಮೋದಿ ಒತ್ತಿ ಹೇಳಿದರು. ಇದಕ್ಕಾಗಿ ಶಿಕ್ಷಣ ಕ್ಷೇತ್ರದ ಪಾತ್ರವೂ ಅಗತ್ಯ ಎಂದರು. [ಎಸ್.ಎಲ್. ಬೈರಪ್ಪ ಕಾದಂಬರಿ ಯಾನ ವಿಮರ್ಶೆ]

ನರೇಂದ್ರ ಮೋದಿ ಹೇಳಿದ 10 ಪ್ರಮುಖ ಅಂಶಗಳು ಹೀಗಿವೆ...
1) ಸ್ಪರ್ಧಾತ್ಮಕತೆಯು ಇತರರು ಏನು ಮಾಡುತ್ತಿದ್ದಾರೆಂಬುದನ್ನು ಆಧರಿಸಿರುವುದಿಲ್ಲ. ನಿರಂತರ ಅಭಿವೃದ್ಧಿ ಹಾಗೂ ಸಂಶೋಧನೆಯನ್ನು ಅವಲಂಬಿಸಿದೆ.
2) ಆಡಳಿತ ಮತ್ತು ಅಭಿವೃದ್ಧಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬೇರ್ಪಡಿಸುವುದು ಸಾಧ್ಯವಿಲ್ಲ.
3) ವಿಜ್ಞಾನ ಮತ್ತು ತಂತ್ರಜ್ಞಾನ ದೇಶಗಳ ನಡುವಿನ ಅಂತರ ಕಡಿಮೆ ಮಾಡಬಲ್ಲದು, ಜಗತ್ತನ್ನು ಒಗ್ಗೂಡಿಸಬಲ್ಲದು ಹಾಗೂ ಶಾಂತಿ ತುಂಬಬಲ್ಲದು

4) ಭಾರತದ ಗ್ರಾಮೀಣ ಪ್ರದೇಶಗಳಿಗೆ ಸಹಕಾರಿಯಾಗುವ ತಂತ್ರಜ್ಞಾನ ಅಭಿವೃದ್ಧಿಪಡಿಸಬೇಕಾಗಿದೆ. ಆರೋಗ್ಯ ಅಭಿವೃದ್ಧಿ, ಉತ್ಪಾದನೆಯಲ್ಲಿ ಹೆಚ್ಚಳ, ಕೈಗಾರಿಕೆ ಬೆಳವಣಿಗೆ ಆಗಬೇಕಾಗಿದೆ.
5) ವಿಜ್ಞಾನ ಮತ್ತು ತಂತ್ರಜ್ಞಾನದಿಂದ ಯುದ್ಧ, ಅಸಮಾನತೆ, ಪರಿಸರ ನಾಶಗಳೂ ಹೆಚ್ಚಬಹುದು. ಇದರಿಂದ ಪಾರಾಗಲು ಬಡವರ ಅಭಿವೃದ್ಧಿ ಮತ್ತು ಸಮಾಜದಲ್ಲಿ ಅತ್ಯಂತ ನಿರ್ಲಕ್ಷಿತ ಜನರನ್ನು ತಲುಪುವ ಉದ್ದೇಶದಿಂದ ಸಂಶೋಧನೆ ನಡೆಸಬೇಕು. [ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಅಭಿವೃದ್ದಿ ಹೊಗಳಿದ ಪರಿಕ್ಕರ್]
6) ಭಾರತದಲ್ಲಿ ಡಿಜಿಟಲ್ ಸಂಪರ್ಕ ಹೆಚ್ಚಬೇಕು. ಶಾಲೆಗಳಲ್ಲಿಯೇ ಡಿಜಿಟಲ್ ಶಿಕ್ಷಣ ನೀಡಬೇಕು.

7) ವಿಜ್ಞಾನವು ಮಾನವನ ವಿದುಳಿನ ಕೊಡುಗೆಯೇ ಇರಬಹುದು. ಆದರೆ, ಮಿದುಳನ್ನು ನಮ್ಮ ಅಂತಃಕರಣವೇ ನಿಯಂತ್ರಿಸುತ್ತದೆ. ಆದ್ದರಿಂದ ವಿಜ್ಞಾನದ ಉದ್ದೇಶ ಮಾನವನ ಜೀವನವನ್ನು ಉತ್ತಮಗೊಳಿಸುವುದೇ ಆಗಿರಬೇಕು.
8) ಸಂಶೋಧನಾ ಪ್ರಸ್ತಾವನೆಗಳಿಗೆ ಅನುದಾನ ನೀಡಲು ಹೆಚ್ಚು ಸಮಯ ಪಡೆಯಬಾರದು. ಜೈವಿಕ ತಂತ್ರಜ್ಞಾನ, ನ್ಯಾನೋ ವಿಜ್ಞಾನ, ಕೃಷಿ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸ್ಪಷ್ಟ ನಿಯಂತ್ರಕ ಕಾರ್ಯನೀತಿಗಳು ಇರಬೇಕು. [ಅಮೆರಿಕಕ್ಕೆ ಹೊರಟ ಮಂಗಳೂರಿನ ವಿಜ್ಞಾನಿಗಳು]

9) ಸರ್ಕಾರದ ಪ್ರತಿ ಇಲಾಖೆಯ ಕಾರ್ಯಚಟುವಟಿಕೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಒತ್ತು ನೀಡಲು ಓರ್ವ ಅಧಿಕಾರಿ ಇರಬೇಕು. ಈ ನಿಟ್ಟಿನಲ್ಲಿ ಇಲಾಖೆಯ ಅನುದಾನದಲ್ಲಿ ಒಂದು ಭಾಗ ಉಪಯೋಗವಾಗುವಂತೆ ಆತ ನೋಡಿಕೊಳ್ಳಬೇಕು.
10) ಭಾರತೀಯ ಔಷಧ ಉದ್ಯಮಗಳು ಸಂಶೋಧನೆಯಲ್ಲಿ ಹೆಚ್ಚಿನ ಹಣ ತೊಡಗಿಸಿರುವ ಕಾರಣ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿವೆ. ಆದ್ದರಿಂದ ವಿಶ್ವವಿದ್ಯಾಲಯಗಳು ತೊಡಕಿನ ಕಾರ್ಯವಿಧಾನಗಳನ್ನು ಕಡಿಮೆ ಮಾಡಿ ಸಂಶೋಧನೆಯತ್ತ ಗಮನ ಕೇಂದ್ರೀಕರಿಸಬೇಕು. [ವಿಜ್ಞಾನಿಗಳ ಎದುರು ಪ್ರಣಬ್ ಮುಖರ್ಜಿ ಉಪನ್ಯಾಸ]

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಪ್ರತಿವರ್ಷ ನಡೆಸುವ ಭಾರತೀಯ ವಿಜ್ಞಾನ ಸಮಾವೇಶದಲ್ಲಿ ಜಗತ್ತಿನೆಲ್ಲೆಡೆಯಿಂದ ತಜ್ಞರು ಬಂದು ಪ್ರಬಂಧ ಮಂಡಿಸುತ್ತಾರೆ. ವಿಜ್ಞಾನ ಸಮಾವೇಶವನ್ನು 45 ವರ್ಷಗಳ ನಂತರ ಮುಂಬಯಿಯಲ್ಲಿ ನಡೆಸಲಾಗುತ್ತಿದೆ. ಮುಂಬಯಿಯು ಭಾರತದ ವಾಣಿಜ್ಯ ರಾಜಧಾನಿ ಎನ್ನಿಸಿಕೊಂಡಿದೆ. ಆದ್ದರಿಂದಲೇ ಇಲ್ಲಿ ಈ ಸಮಾವೇಶ ನಡೆಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.
Our future will be secure & global leadership possible, if we also prepare next gen of world class scientists,technologists & innovators: PM
— PMO India (@PMOIndia) January 3, 2015 -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications