ಮಹಾರಾಷ್ಟ್ರ ರಾಜ್ಯಪಾಲರ ವಿರುದ್ಧ ಸುಪ್ರೀಂ ಮೊರೆ ಹೋದ ಶಿವಸೇನಾ

ನವದೆಹಲಿ, ನವೆಂಬರ್ 12: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಆಹ್ವಾನ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ, ಶಿವಸೇನಾಕ್ಕೆ ಕಡಿಮೆ ಅವಧಿ ನೀಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂಕೋರ್ಟಿಗೆ ಮೊರೆ ಹೋಗಲಾಗಿದೆ.

ಸರ್ಕಾರ ರಚನೆಗೆ ಅಗತ್ಯ ಬೆಂಬಲವಿದೆ ಎಂದು 24 ಗಂಟೆಗಳಲ್ಲಿ ತೋರಿಸುವಂತೆ ಶಿವಸೇನಾಕ್ಕೆ ಸೂಚಿಸಲಾಗಿತ್ತು. ಆದರೆ ಬಿಜೆಪಿಗೆ 48 ಗಂಟೆಗಳನ್ನು ನೀಡಲಾಗಿದೆ, ಈ ರೀತಿಯ ತಾರತಮ್ಯ ನೀತಿಗೆ ಅಕ್ಷೇಪಿಸಿದರೂ ಫಲ ಸಿಗಲಿಲ್ಲ ಎಂದು ಶಿವಸೇನಾ ಆರೋಪಿಸಿದೆ.

ಶಿವಸೇನಾ ಪರವಾಗಿ ವಕೀಲ ಸುನಿಲ್ ಫರ್ನಾಂಡೀಸ್, ಹಿರಿಯ ವಕೀಲ ದೇವದತ್ ಕಾಮತ್ ಅವರು ಸುಪ್ರೀಂಕೋರ್ಟಿನಲ್ಲಿ ಅರ್ಜಿ ಹಾಕಲಾಗಿದೆ. ಶಿವಸೇನಾ ಪರ ವಾದಿಸಲು ಹಿರಿಯ ಅಡ್ವೋಕೇಟ್ ಕಪಿಲ್ ಸಿಬಾಲ್ ರನ್ನು ಆಯ್ಕೆ ಮಾಡಲಾಗಿದೆ.

Sena moves SC over Governors refusal to extend time given to form govt

ಎನ್ಸಿಪಿ ಹಾಗೂ ಕಾಂಗ್ರೆಸ್ ಬೆಂಬಲವಿರುವ ಪತ್ರವನ್ನು ತಲುಪಿಸಲು ಸೂಕ್ತ ಕಾಲಾವಕಾಶವನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ನೀಡಲಿಲ್ಲ. ಹೆಚ್ಚುವರಿ 3 ದಿನಗಳ ಕಾಲಾವಕಾಶಕ್ಕೂ ಆಸ್ಪದ ನೀಡದೆ ರಾಜ್ಯಪಾಲರು ಅನ್ಯಾಯ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಿದೆ.

ಈ ನಡುವೆಗೆ ಎನ್ಸಿಪಿಗೆ ಮಂಗಳವಾರ ಸಂಜೆ 8:30ರೊಳಗೆ ಅಗತ್ಯ ಬೆಂಬಲದೊಂದಿಗೆ ಸರ್ಕಾರ ರಚನೆ ಹಕ್ಕು ಪ್ರತಿಪಾದಿಸಲು ರಾಜ್ಯಪಾಲರು ಸಮಯ ನಿಗದಿ ಮಾಡಿದ್ದರು. ಆದರೆ ಇದಕ್ಕೂ ಮುನ್ನವೇ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಕಳಿಸಿದ್ದಾರೆ. ರಾಷ್ಟ್ರಪತಿಗಳು ಸಂಜೆ 5:30ರ ಸುಮಾರಿಗೆ ಪತ್ರಕ್ಕೆ ಅಂಕಿತ ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+