ಶೀನಾ ಬೋರಾ ಡಿಎನ್ಎ ಪರೀಕ್ಷೆ ವರದಿ ಬಹಿರಂಗ
ಮುಂಬೈ, ಸೆ. 07: ಶೀನಾ ಬೋರಾ ಡಿಎನ್ಎ ಪರೀಕ್ಷೆ ವರದಿ ಸೋಮವಾರ ಬಹಿರಂಗಗೊಂಡಿದೆ. ತಲೆ ಬುರುಡೆ, ಮೂಳೆಗಳ ಪರೀಕ್ಷೆಯ ನಂತರ ರಾಯಗಢದಲ್ಲಿ ಸಿಕ್ಕ ಶವ ಶೀನಾ ಅವರದ್ದೇ ಎಂದು ಮುಂಬೈ ಪೊಲೀಸರು ಘೋಷಿಸಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಂದ್ರಾಣಿ ವಿರುದ್ಧ ಪೊಲೀಸರಿಗೆ ಬಲವಾದ ಸಾಕ್ಷಿ ದೊರಕಿದ್ದಂತಾಗಿದೆ.
ಈ ನಡುವೆ ಮಿಖಾಯಿಲ್ ಬೋರಾ ಹಾಗೂ ಇಂದ್ರಾಣಿ ಅವರ ಡಿಎನ್ಎ ವರದಿಯನ್ನು ಕೂಡಾ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿದ್ದರು. ಇದರ ವರದಿಯೂ ಪ್ರಕಟವಾಗಿದ್ದು, ಮಿಖಾಯಿಲ್ ಬೋರಾ ಡಿಎನ್ಎ ಮಾದರಿ ಹಾಗೂ ಇಂದ್ರಾಣಿ ಮುಖರ್ಜಿ ಡಿಎನ್ಎ ಮಾದರಿ ಮ್ಯಾಚ್ ಆಗುತ್ತಿದೆ. [ಶೀನಾ ಬೋರಾ ಹತ್ಯೆ :ಇಲ್ಲಿ ತನಕದ ಪ್ರಮುಖ ಬೆಳವಣಿಗೆಗಳು]

ಬಂಧನ ವಿಸ್ತರಣೆ: ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ 9ಎಕ್ಸ್ ಮಾಧ್ಯಮ ಸಮೂಹದ ಸಹ ಸಂಸ್ಥಾಪಕ ಇಂದ್ರಾಣಿ ಮುಖರ್ಜಿ ಹಾಗೂ ಸಂಜೀವ್ ಖನ್ನಾ ಹಾಗೂ ಕಾರು ಚಾಲಕ ಶ್ಯಾಮ್ ರಾಯ್ ಅವರ ನ್ಯಾಯಾಂಗ ಬಂಧನದ ಅವಧಿ ಸೋಮವಾರಕ್ಕೆ ಮುಕ್ತಾಯಗೊಂಡಿತ್ತು. ಇಂದು ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮುಂಬೈಯ ವೊರ್ಲಿಯಲ್ಲಿನ ಇಂದ್ರಾಣಿ ನಿವಾಸಕ್ಕೆ ತೆರಳಿ ಮುಂಬೈ ಪೊಲೀಸರು ಭಾನುವಾರ ತೀವ್ರ ತಪಾಸಣೆ ನಡೆಸಿದ್ದರು. ಘಟನೆ ನಡೆದ ದಿನದ ಪ್ರಾತ್ಯಕ್ಷಿಕೆಯನ್ನು ನೀಡುವಂತೆ ಇಂದ್ರಾಣಿಯನ್ನು ಕೇಳಿಕೊಂಡಿದ್ದರು. ಶೀನಾಳನ್ನು ಹತ್ಯೆ ಮಾಡಿದ ದಿನ ನಂತರ ಗ್ಯಾರೇಜಿನಲ್ಲಿ ಕಾರಿನಲ್ಲಿ ಶವವನ್ನು ಮಲಗಿಸಿ ಅದನ್ನು ಅಲಂಕಾರ ಮಾಡಿದ ರೀತಿ, ಮಹಾರಾಷ್ಟ್ರದ ರಾಯಗಡಕ್ಕೆ ತೆಗೆದುಕೊಂಡು ಹೋಗಿ ದಹನ ಮಾಡಿದ್ದೆಲ್ಲವನ್ನು ಇಂದ್ರಾಣಿ ವಿವರಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications