ಶೀನಾ ಬೋರಾ ಡಿಎನ್ಎ ಪರೀಕ್ಷೆ ವರದಿ ಬಹಿರಂಗ
ಮುಂಬೈ, ಸೆ. 07: ಶೀನಾ ಬೋರಾ ಡಿಎನ್ಎ ಪರೀಕ್ಷೆ ವರದಿ ಸೋಮವಾರ ಬಹಿರಂಗಗೊಂಡಿದೆ. ತಲೆ ಬುರುಡೆ, ಮೂಳೆಗಳ ಪರೀಕ್ಷೆಯ ನಂತರ ರಾಯಗಢದಲ್ಲಿ ಸಿಕ್ಕ ಶವ ಶೀನಾ ಅವರದ್ದೇ ಎಂದು ಮುಂಬೈ ಪೊಲೀಸರು ಘೋಷಿಸಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಂದ್ರಾಣಿ ವಿರುದ್ಧ ಪೊಲೀಸರಿಗೆ ಬಲವಾದ ಸಾಕ್ಷಿ ದೊರಕಿದ್ದಂತಾಗಿದೆ.
ಈ ನಡುವೆ ಮಿಖಾಯಿಲ್ ಬೋರಾ ಹಾಗೂ ಇಂದ್ರಾಣಿ ಅವರ ಡಿಎನ್ಎ ವರದಿಯನ್ನು ಕೂಡಾ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿದ್ದರು. ಇದರ ವರದಿಯೂ ಪ್ರಕಟವಾಗಿದ್ದು, ಮಿಖಾಯಿಲ್ ಬೋರಾ ಡಿಎನ್ಎ ಮಾದರಿ ಹಾಗೂ ಇಂದ್ರಾಣಿ ಮುಖರ್ಜಿ ಡಿಎನ್ಎ ಮಾದರಿ ಮ್ಯಾಚ್ ಆಗುತ್ತಿದೆ. [ಶೀನಾ ಬೋರಾ ಹತ್ಯೆ :ಇಲ್ಲಿ ತನಕದ ಪ್ರಮುಖ ಬೆಳವಣಿಗೆಗಳು]

ಬಂಧನ ವಿಸ್ತರಣೆ: ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ 9ಎಕ್ಸ್ ಮಾಧ್ಯಮ ಸಮೂಹದ ಸಹ ಸಂಸ್ಥಾಪಕ ಇಂದ್ರಾಣಿ ಮುಖರ್ಜಿ ಹಾಗೂ ಸಂಜೀವ್ ಖನ್ನಾ ಹಾಗೂ ಕಾರು ಚಾಲಕ ಶ್ಯಾಮ್ ರಾಯ್ ಅವರ ನ್ಯಾಯಾಂಗ ಬಂಧನದ ಅವಧಿ ಸೋಮವಾರಕ್ಕೆ ಮುಕ್ತಾಯಗೊಂಡಿತ್ತು. ಇಂದು ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮುಂಬೈಯ ವೊರ್ಲಿಯಲ್ಲಿನ ಇಂದ್ರಾಣಿ ನಿವಾಸಕ್ಕೆ ತೆರಳಿ ಮುಂಬೈ ಪೊಲೀಸರು ಭಾನುವಾರ ತೀವ್ರ ತಪಾಸಣೆ ನಡೆಸಿದ್ದರು. ಘಟನೆ ನಡೆದ ದಿನದ ಪ್ರಾತ್ಯಕ್ಷಿಕೆಯನ್ನು ನೀಡುವಂತೆ ಇಂದ್ರಾಣಿಯನ್ನು ಕೇಳಿಕೊಂಡಿದ್ದರು. ಶೀನಾಳನ್ನು ಹತ್ಯೆ ಮಾಡಿದ ದಿನ ನಂತರ ಗ್ಯಾರೇಜಿನಲ್ಲಿ ಕಾರಿನಲ್ಲಿ ಶವವನ್ನು ಮಲಗಿಸಿ ಅದನ್ನು ಅಲಂಕಾರ ಮಾಡಿದ ರೀತಿ, ಮಹಾರಾಷ್ಟ್ರದ ರಾಯಗಡಕ್ಕೆ ತೆಗೆದುಕೊಂಡು ಹೋಗಿ ದಹನ ಮಾಡಿದ್ದೆಲ್ಲವನ್ನು ಇಂದ್ರಾಣಿ ವಿವರಿಸಿದ್ದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications