ಶೀನಾ ಬೋರಾ ಹತ್ಯೆ : ಈ ದಿನದ ಪ್ರಮುಖ ಬೆಳವಣಿಗೆಗಳು
ಮುಂಬೈ, ಸೆ. 03: ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಇಂದ್ರಾಣಿ ಮುಖರ್ಜಿ ಅವರ ಸದ್ಯದ ಪತಿ ಪೀಟರ್ ಮುಖರ್ಜಿ ಅವರನ್ನು ಮುಂಬೈ ಪೊಲೀಸರು ತೀವ್ರವಾಗಿ ವಿಚಾರಣೆಗೊಳಪಡಿಸಿದ್ದಾರೆ. ಪೀಟರ್ ಅವರ ಲ್ಯಾಪ್ ಟಾಪ್ ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಕೊಲೆಯ ಉದ್ದೇಶ ಪತ್ತೆಯಲ್ಲಿ ತೊಡಗಿದ್ದಾರೆ. ಈ ದಿನದ ಪ್ರಮುಖ ಬೆಳವಣಿಗೆಗಳು ಇಲ್ಲಿವೆ:
ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಇಂದ್ರಾಣಿ ಮುಖರ್ಜಿ, ಆಕೆಯ ಮಾಜಿ ಪತಿ ಸಂಜೀವ್ ಖನ್ನಾ ಮತ್ತು ಕಾರು ಚಾಲಕ ಶ್ಯಾಮ್ ರಾಯ್ ಅವರ ಪೊಲೀಸ್ ಕಸ್ಟಡಿಯನ್ನು ಸೆಪ್ಟಂಬರ್ ಐದರ ತನಕ ವಿಸ್ತರಣೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು. [150 ಕೋಟಿ ರು ಗಾಗಿ ಶೀನಾ ಬೋರಾ ಹತ್ಯೆ ನಡೆಯಿತೆ?]
ಶೀನಾ ಹತ್ಯೆ ಮಾಡಿದ್ದು ನಾನೇ ಎಂದು ಇಂದ್ರಾಣಿ ವಿಚಾರಣೆ ವೇಳೆ ಒಪ್ಪಿಕೊಂಡಿರುವ ಮಾಹಿತಿ ಹೊರಬಂದ ಮೇಲೆ ಈಗ ಕೊಲೆ ಉದ್ದೇಶದ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಶೀನಾ ಬಳಿ ಇದ್ದ 150 ಕೋಟಿ ರು 'ಸೇಫ್ ಮೊತ್ತ' ವೇ ಕೊಲೆಗೆ ಕಾರಣ ಎಂಬ ಅನುಮಾನ ಬಂದಿರುವ ಹಿನ್ನಲೆಯಲ್ಲಿ ಮತ್ತೊಮ್ಮೆ ಪೀಟರ್ ಮುಖರ್ಜಿ ವಿಚಾರಣೆ ನಡೆಸಲಾಗಿದೆ. ಈ ನಡುವೆ ಶೀನಾ ತಂದೆ ಎನ್ನಲಾದ ಸಿದ್ದಾರ್ಥ್ ಅವರ ಉಲ್ಟಾ ಹೇಳಿಕೆಗಳು ಪೊಲೀಸರ ನಿದ್ದೆಗೆಡಿಸಿವೆ

ಆರ್ಥಿಕ ಅವ್ಯವಹಾರ, ಆಸ್ತಿ ಕಬಳಿಕೆ ಕಾರಣವೇ?
ಆರ್ಥಿಕ ಅವ್ಯವಹಾರ, ಆಸ್ತಿ ಕಬಳಿಕೆ ಕಾರಣವೇ ಎಂದು ಪ್ರಶ್ನಿಸಿ ಸುಮಾರು 9 ಗಂಟೆಗಳ ಕಾಲ ಸ್ಟಾರ್ ಇಂಡಿಯಾ ಸಿಇಒ ಪೀಟರ್ ಮುಖರ್ಜಿ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದರು. ಶೀನಾ ಬೋರಾ ಹತ್ಯೆಯಾದ ದಿನ(ಏ. 24, 2012) ನಾನು ರೋಮ್ ನಲ್ಲಿದ್ದೆ ಎಂದು ಪೀಟರ್ ಹೇಳಿಕೆ ನೀಡಿದ್ದು, ಇಂದ್ರಾಣಿಗೆ ಕಾನೂನಾತ್ಮಕವಾಗಿ ನೆರವು ನೀಡುವ ಬಗ್ಗೆ ಯಾವುದೇ ಪ್ರಶ್ನೆಗೆ ಉತ್ತರಿಸಿಲ್ಲ.

ಶೀನಾ ಬೋರಾ ತಂದೆ ವಿಚಾರಣೆ
ಶೀನಾ ಬೋರಾ ಅವರ ತಂದೆ ಸಿದ್ದಾರ್ಥ್ ದಾಸ್ ಅವರ ವಿಚಾರಣೆ ನಡೆಸಿದ ಪೊಲೀಸರು ಕೇಳಿದ ಪ್ರಶ್ನೆಗೆ ಸಿದ್ದಾರ್ಥ್ ಉತ್ತರಿಸಿಲ್ಲ. ಶೀನಾ ಜೈವಿಕ ತಂದೆ ನಾನೇ ಎಂದು ಒಪ್ಪಿಕೊಂಡಿಲ್ಲ. ಸಿದ್ದಾರ್ಥ್ ಹಾಗೂ ಇಂದ್ರಾಣಿ ಇಬ್ಬರು ಕೋಲ್ಕತ್ತಾದ ಡಮ್ ಡಮ್ ನಲ್ಲಿ ಲ್ಲಿ ಲಿವ್ ಇನ್ ಸಂಬಂಧದಲ್ಲಿದ್ದರು.

ಸಿದ್ದಾರ್ಥ್ ಉಲ್ಟಾ ಹೇಳಿಕೆ
ಕೆಲ ದಿನಗಳ ಹಿಂದೆ ವಿಚಾರಣೆ ವೇಳೆ ಸಿದ್ದಾರ್ಥ್ ಪೊಲೀಸರ ಮುಂದೆ ನಾನೇ ಶೀನಾ ಹಾಗೂ ಮೈಖಲ್ ಬೋರಾ ಅವರ ತಂದೆ ಬೇಕಾದರೆ ಡಿಎನ್ ಎ ಪರೀಕ್ಷೆಗೂ ಸಿದ್ಧ ಎಂದಿದ್ದರು. ಇಂದ್ರಾಣಿ ಜೊತೆ ಮದುವೆಯಾಗಿಲ್ಲ, ಲಿವ್ ಇನ್ ಸಂಬಂಧದಲ್ಲಿದ್ದೆ. 1980ರಲ್ಲಿ ಒಟ್ಟಿಗೆ ಇದ್ದೆವು. ಮಗಳನ್ನು ಕೊಂದಿದ್ದರೆ ಇಂದ್ರಾಣಿಯನ್ನು ನೇಣಿಗೆ ಹಾಕಿ ಎಂದು ಹೇಳಿಕೆ ನೀಡಿದ್ದ ಸಿದ್ದಾರ್ಥ್ ಇಂದು ಶೀನಾ ನನ್ನ ಮಗಳು ಎಂದು ಹೇಳಲು ಹಿಂದೇಟು ಹಾಕುತ್ತಿದ್ದಾರೆ.

ಸಂಜೀವ್ ಖನ್ನಾ ಪಾತ್ರದ ಬಗ್ಗೆ
ಸಂಜೀವ್ ಖನ್ನಾ ಪಾತ್ರದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇಂದ್ರಾಣಿಗೆ ಕೊಲೆ ಮಾಡಲು ನೆರವಾಗಿದ್ದು ಮಾತ್ರವೇ? ಶ್ಯಾಮ್ ರಾಯ್ ಹಾಗೂ ಸಂಜೀವ್ ಖನ್ನಾ ಅವರು ಕೊಲೆಯನ್ನು ಮುಚ್ಚಿ ಹಾಕಲು ಮಾತ್ರ ಯತ್ನಿಸಿದರೆ?
ಇಂದ್ರಾಣಿಗೆ ಎರಡನೇ ಪತಿ ಸಂಜೀವ್ ಖನ್ನಾನಿಂದ ಇನ್ನೊಂದು ಪುತ್ರಿ ವಿಧಿ ಕೂಡ ಇದ್ದಾಳೆ. ಈಕೆ ಸದ್ಯ ಇಂಗ್ಲೆಂಡ್ನಲ್ಲಿದ್ದು, ಪೀಟರ್ ಮುಖರ್ಜಿ ಈಕೆಯನ್ನು ದತ್ತು ತೆಗೆದುಕೊಂಡಿದ್ದಾರೆ. ಶೀನಾಳನ್ನು ಹತ್ಯೆಗೈದರೆ ಪೀಟರ್ ಮುಖರ್ಜಿಯ ಎಲ್ಲ ಆಸ್ತಿಯೂ ವಿಧಿಗೆ ಸಲ್ಲುತ್ತದೆ-
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ












Click it and Unblock the Notifications