ಬಡವರೊಂದಿಗೆ ನಂಟು ಕಳೆದುಕೊಂಡ ಬಿಜೆಪಿ: ಶಿವಸೇನಾ ಆರೋಪ
ಮುಂಬೈ, ಜೂನ್ 25: ಬಡಜನರೊಂದಿಗಿನ ಸಂಪರ್ಕವನ್ನೇ ಬಿಜೆಪಿ ಕಳೆದುಕೊಂಡಿದೆ ಎಂದು ಶಿವಸೇನಾ ಆರೋಪಿಸಿದೆ.
ಬಿಜೆಪಿಯು ಕಳೆದ ತಿಂಗಳು ಆರಂಭಿಸಿರುವ 'ಸಂಪರ್ಕ್ ಸೇ ಸಮರ್ಥನ್' ಕಾರ್ಯಕ್ರಮ ವ್ಯಾಪಕವಾಗುತ್ತಿರುವ ಬೆನ್ನಲ್ಲೇ ಶಿವಸೇನಾ ನೀಡಿರುವ ಈ ಹೇಳಿಕೆ ಮಹತ್ವ ಪಡೆದಿದೆ.
ಬೆಂಬಲಕ್ಕಾಗಿ ಜನರು ಮಾಧುರಿ ದೀಕ್ಷಿತ್, ಸಲ್ಮಾನ್ ಖಾನ್ಮ ರತನ್ ಟಾಟಾ, ಅಂಬಾನಿ, ಅದಾನಿ ಮುಂತಾದವರನ್ನು ಸಂಪರ್ಕಿಸುತ್ತಿದ್ದಾರೆ. ಆದರೆ, ಬಡವರೊಂದಿಗೆ ಸಂಪರ್ಕವನ್ನೇ ಕಳೆದುಕೊಂಡಿದ್ದಾರೆ ಎಂದು ಪಕ್ಷದ ಮುಖವಾಣಿ 'ಸಾಮ್ನಾ' ಪತ್ರಿಕೆಯಲ್ಲಿ ಶಿವಸೇನಾ ವ್ಯಂಗ್ಯವಾಡಿದೆ.

ಮಹಾರಾಷ್ಟ್ರದಾದ್ಯಂತ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆಯೂ ಶಿವಸೇನಾ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳನ್ನು ಟೀಕಿಸಿದೆ.
ರಾಜ್ಯವು ಹಸಿವು ಮತ್ತು ಬಡತನದಿಂದ ನರಳುತ್ತಿದೆ. ಈ ಕಾರಣದಿಮದ ಬದುಕಿನ ದಾರಿ ತಿಳಿಯದೆ ಕಂಗೆಟ್ಟ ಜನರು ಕುಟುಂಬದವರೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗಾಗಿ ಏನನ್ನಾದರೂ ಮಾಡುತ್ತಾರೆ ಎಂಬ ಭ್ರಮೆಯಿಂದ ನಾವು ಹೊರಗೆ ಬರಬೇಕಾಗಿದೆ ಎಂದು ಸೇನಾ ಹೇಳಿದೆ.
ಬಿಜೆಪಿಯು ಬುಲೆಟ್ ಟ್ರೇನ್, ಮೆಟ್ರೋ ಮತ್ತು ಹೈಪರ್ ಸಿಟಿಯಂತಹ ಐಷಾರಾಮಿ ಯೋಜನೆಗಳ ಮೇಲೆ ಗಮನ ಹರಿಸುವಾಗ ರೈತರ ಅಭಿವೃದ್ಧಿಯನ್ನು ಕಡೆಗಣಿಸುತ್ತಿದೆ.
ವಿದೇಶಿ ಹೂಡಿಕೆದಾರರಿಂದ ಸಂಗ್ರಹಿಸಲಾದ ದೇಣಿಗೆ ರಾಜ್ಯದ ಬಡವರ ಪರಿಸ್ಥಿತಿಯನ್ನು ಇನ್ನಷ್ಟು ಹಾಳುಗೆಡವಿದೆ ಎಂದು ಶಿವಸೇನಾ ಆರೋಪಿಸಿದೆ.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ












Click it and Unblock the Notifications